ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ದಿನದಿಂದ ದಿನ ಉಲ್ಬಣಗೊಳ್ಳುತ್ತಿರುವ ಸಂಕಷ್ಟದ ಸಂದರ್ಭದಲ್ಲಿ, ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಗಾರಿಕೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಇರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೊಂದಿಗೆ ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಸಹಕರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಕೋರಿದ್ದಾರೆ.
ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಕೋವಿಡ್ ಸೋಂಕಿನ ವಿರುದ್ಧ ಹೋರಾಡಬೇಕಾಗಿದ್ದು, ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕವಾಗಿದೆ.
ನೋಂದಾವಣೆ ಪ್ರಕ್ರಿಯೆಯು ಅತ್ಯಂತ ಸರಳ ಹಾಗೂ ಸುಲಭವಾಗಿದ್ದು, ವೆಬ್ಸೈಟ್ https://sast.karnataka.gov.in ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.
https://sast.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ New empanelment request ಅನ್ನು ಕ್ಲಿಕ್ ಮಾಡಿ, ನಂತರ empanelment request ನಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ ಮಾಡಿ, ಅವಶ್ಯಕ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ ಸಲ್ಲಿಸಬಹುದು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ empanelment ಕೋರಿಕೆಯನ್ನು ಪರಿಶೀಲಿಸಿ ಆನ್ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ. ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ http://arogya.karnataka.gov.in/sast/ ಇಲ್ಲಿಗೆ ಭೇಟಿ ನೀಡಿ ಮತ್ತು ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸಬಹುದಾಗಿದೆ.
ಎಲ್ಲಾ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….