ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಘೋಷಿಸಿರುವ ಜನತಾ ಕರ್ಫ್ಯೂವಿನ ನಂತರದ ಮೂರನೇ ದಿನದ ಕೋವಿಡ್-19 ಮಾಧ್ಯಮ ವರದಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
ಇಂದಿನ ವರದಿಯಲ್ಲಿ ನೆಲಮಂಗಲ ತಾಲೂಕಿನ 160 ಪುರುಷರು, 95 ಮಂದಿ ಮಹಿಳೆಯರು ಸೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು 255 ಮಂದಿಗೆ ಸೋಂಕು ದೃಢಪಟ್ಟಿದೆ.
ಉಳಿದಂತೆ ದೇವನಹಳ್ಳಿ ತಾಲೂಕಿನ 147 ಪುರುಷರು, 104 ಮಹಿಳೆಯರು ಸೇರಿ 251. ಹೊಸಕೋಟೆ ತಾಲೂಕಿನ 144 ಪುರುಷರು, 87 ಮಹಿಳೆಯರು ಸೇರಿ 231 ಹಾಗೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 49 ಪುರುಷರು, 20 ಮಹಿಳೆಯರು ಸೇರಿ 69 ಮಂದಿ ಮತ್ತು ಅನ್ಯ ಜಿಲ್ಲೆಯವರು ಸೇರಿದಂತೆ ಬೆಂ.ಗ್ರಾ.ಜಿಲ್ಲೆಯಲ್ಲಿ 818 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 1092 ಮಂದಿ ಸೋಂಕಿತರಿಗೆ ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7645 ಕ್ಕೆ ಏರಿಕೆಯಾಗಿದ್ದರೆ, 13866 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ. 211 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.
ಆರೋಗ್ಯ ಇಲಾಖೆಯಿಂದ ತಪಾಸಣೆ ತೀವ್ರವಾಗಿ ನಡೆಸಲಾಗುತ್ತಿದ್ದು, ಇಂದಿನ ವರದಿಯ ಪ್ರಕಾರ 3965 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….