ಮೋಟಾರು ವಾಹನ ಕಾಯ್ದೆ 1988: ಹಳೆಯ ಮತ್ತು ತಿದ್ದುಪಡಿ / ಜನಸಾಮಾನ್ಯರಿಗೆ ಕಾನೂನು ಅರಿವು.

ದೇಶವ್ಯಾಪಿಯಾಗಿ ಮೋಟಾರು ವಾಹನ ಕಾಯ್ದೆ (1988ರ ತಿದ್ದುಪಡಿ) ಸೆಪ್ಟೆಂಬರ್ 1 ರಿಂದ ಜಾರಿಗೆ ಬಂದಿದೆ. ಈ ತಿದ್ದುಪಡಿ ಕಾಯ್ದೆಯು ವಾಹನ ಸವಾರರು ಮತ್ತು ಮಾಲೀಕರನ್ನು ನಿದ್ದೆಗೆಡಿಸದೆ ಇರುವುದರಲ್ಲಿ ಯಾವುದೇ ಸಂಶಯ ಬೇಡ!

ರಸ್ತೆ ಅಪಘಾತಗಳಿಂದ ಸಂಭವಿಸುವ ಪ್ರಾಣಹಾನಿಯನ್ನು ತಪ್ಪಿಸುವ ಸಲುವಾಗಿ ವಾಹನ ಸವಾರರನ್ನು ನಿಯಂತ್ರಿಸಲು ಗಣನೀಯ ಪ್ರಮಾಣದಲ್ಲಿ ದಂಡದ ಮೊತ್ತವನ್ನು ಹೆಚ್ಚಳ ಮಾಡಲಾಗಿದೆ. 

ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರನ್ನು ನಿಯಂತ್ರಿಸಲು ಹೆಚ್ಚಿನ ಪ್ರಮಾಣದಲ್ಲಿ ದಂಡ ಹಾಕುವುದೇ ಪರಿಹಾರವೆಂದು ಸರ್ಕಾರ ಭಾವಿಸಿದೆ. 

ಮೋಟಾರು ವಾಹನ ಕಾಯ್ದೆ 1988,  ಸೆಕ್ಷನ್ 140 ರ ಅಡಿಯಲ್ಲಿ ಅಫಘಾತ ಸಂಭವಿಸಿದ ನಂತರ ಗಾಯಾಳುವಿನ ತುರ್ತು ಚಿಕಿತ್ಸೆಗಾಗಿ ರೂ.25 ಸಾವಿರ ಅಥವಾ ಮೃತಪಟ್ಟ ವ್ಯಕ್ತಿಯ ಕುಟುಂಬದವರ ಅಂತ್ಯಕ್ರಿಯೆ, ಇತ್ಯಾದಿ ಕಾರಣಕ್ಕೆ ರೂ.50 ಸಾವಿರ ತಕ್ಷಣದ ಪರಿಹಾರವನ್ನು ವಿಮಾ ಕಂಪನಿಯಿಂದ ಪಡೆಯುವ ಹಕ್ಕನ್ನು ನೀಡಿತ್ತು. ಆದರೆ ಮೋಟಾರು ವಾಹನ ಕಾಯ್ದೆ 1988ರ ತಿದ್ದುಪಡಿ ಕಾಯ್ದೆ ಇಂತಹ ಹಕ್ಕನ್ನು ಮೊಟಕುಗೊಳಿಸಿದೆ. ಅಫಘಾತಕ್ಕೆ ಒಳಗಾದ ವ್ಯಕ್ತಿಗೆ ಯಾವುದೇ ಬಗೆಯ ಮಧ್ಯಂತರ ಪರಿಹಾರ ಸಿಗುವುದಿಲ್ಲ. ಪರಿಹಾರ ಪಡೆಯಬೇಕಾದರೆ ನ್ಯಾಯಾಲಯದಲ್ಲಿ ಅಪಘಾತ ಪ್ರಕರಣದ ತೀರ್ಪು ಬರುವವರೆಗೂ ಕಾಯಬೇಕು. 

ಈ ಹಿಂದೆ ಸೆಕ್ಷನ್ 145 ರ ಅಡಿಯಲ್ಲಿ ಮೂರನೇ ವ್ಯಕ್ತಿಯ(Third Party Liability) ನಿಬಂಧನೆ ಇತ್ತು. ತಿದ್ದುಪಡಿ ಮೂಲಕ ‘ಹೊಣೆಗಾರಿಕೆ’ ಪದದ ವ್ಯಾಪ್ತಿಯನ್ನು ಕುಗ್ಗಿಸಲಾಗಿದೆ. ಅಂದರೆ ವಾಹನ ಚಾಲಕ/ನಿರ್ವಾಹಕ/ ಸಹಾಯಕರು (ವಿಶೇಷವಾಗಿ ಗೂಡ್ಸ್ ವಾಹನಗಳ ಹಮಾಲಿಗಳು) ಕಾರ್ಮಿಕ ಪರಿಹಾರ ಕಾಯ್ದೆಯ ಅನ್ವಯ ಪರಿಹಾರ ಪಡೆಯುವ ಹಕ್ಕನ್ನು ಮೊಟಕುಗೊಳಿಸಲಾಗಿದೆ. ವಾಹನದಲ್ಲಿನ ಸಹ ಪ್ರಯಾಣಿಕನನ್ನು ಮೂರನೇ ವ್ಯಕ್ತಿ ವ್ಯಾಖ್ಯಾನದಿಂದ ಹೊರಗಿಡಲಾಗಿದೆ. ಉದಾಹರಣೆಗೆ ವಾಹನ ಅಪಘಾತ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ್ದರೆ ವಿಮಾ ಕಂಪನಿ ನಷ್ಟ ಪರಿಹಾರದ ಜವಾಬ್ದಾರಿಯಿಂದ ನುಣುಚಿಕೊಂಡು ವಾಹನದ ಚಾಲಕ ಮತ್ತು ಮಾಲೀಕನನ್ನು ಹೊಣೆಗಾರನನ್ನಾಗಿಸಿದೆ. ಅದೇ ರೀತಿ ಸೆಕ್ಷನ್ 147 ರ ಅಡಿಯಲ್ಲಿನ ವಿಮಾ ಕಂಪನಿಗಳ ಮೇಲಿನ ಅಪರಿಮಿತ ಹೊಣೆಗಾರಿಕೆಯನ್ನು (Unlimited Liability) ತೆಗೆದುಹಾಕಲಾಗಿದೆ. ಉದಾಹರಣೆಗೆ ವಾಹನದ ವಿಮೆಯನ್ನು 10 ಲಕ್ಷಕ್ಕೆ ಮಾಡಿಸಿದ್ದರೆ, ವಿಮಾ ಕಂಪನಿಗಳು ಕೇವಲ 10 ಲಕ್ಷ ರೂಪಾಯಿವರೆಗಿನ ಪರಿಹಾರ ನೀಡಲಷ್ಟೇ ಜವಾಬ್ದಾರಿ ಹೊಂದಿರುತ್ತವೆ. ಒಂದು ಪಕ್ಷ ನ್ಯಾಯಾಲಯವು 10 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡಿ ಎಂದು ತೀರ್ಪು ಕೊಟ್ಟರೆ ವಾಹನದ ಮಾಲೀಕ ಉಳಿದ ಪರಿಹಾರವನ್ನು ನೀಡಬೇಕಾಗುತ್ತದೆ.

ಕಾರ್ಮಿಕ ವಲಯಕ್ಕೆ ಆಘಾತಕಾರಿಯಾಗುವಂತಹ ಅಂಶವೊಂದಿದೆ. ಕೆಲಸದ ಅವಧಿಯಲ್ಲಿ (During the course of employment) ವಾಹನ ಚಾಲಕ ಅಫಘಾತದಲ್ಲಿ ಗಾಯಗೊಂಡರೆ ಅಥವಾ ಸಾವನ್ನಪ್ಪಿದರೆ ವಾಹನದ ಮಾಲೀಕ ಮತ್ತು ವಿಮಾ ಕಂಪನಿಯನ್ನು ಹೊಣೆಗಾರರನ್ನಾಗಿಸಿ ಕಾರ್ಮಿಕ ನ್ಯಾಯಾಲಯದಲ್ಲಿ ಪರಿಹಾರ ಕೋರಬಹುದಾಗಿತ್ತು. ಸದರಿ ತಿದ್ದುಪಡಿ ಇದರ ಸ್ವರೂಪವನ್ನು ಬದಲಾಯಿಸಲಾಗಿದೆ. ಅಫಘಾತ ಚಾಲಕನ ಅಜಾಗರೂಕತೆಯಿಂದ ಸಂಭವಿಸಿದ್ದರೆ ನ್ಯಾಯಾಲಯದಲ್ಲೂ ಪರಿಹಾರ ಪಡೆಯುವುದು ಅಸಾಧ್ಯ, ಮೊದಲೇ ಹದಗೆಟ್ಟ ರಸ್ತೆಗಳು ಒತ್ತಡದ ಕೆಲಸ, ಹಠಾತನೇ ಎದುರಾಗುವ ಸಮಸ್ಯೆಗಳ ಮಧ್ಯೆ ಚಾಲಕ ವೃತ್ತಿ ಮಾಡುವವರಿಗೆ ಈ ತಿದ್ದುಪಡಿಯಿಂದ ತೊಂದರೆಯಾಗಲಿದೆ.

ಇದನ್ನು ಸರಿದೂಗಿಸಲು ವಾಹನ ಚಾಲಕ/ನಿರ್ವಾಹಕ/ಹಮಾಲಿಗಳಿಗೆ ವಿಮಾ ಪಾಲಿಸಿಯಲ್ಲಿ ಹೆಚ್ಚಿನ ಹಣ ನೀಡಿ ವಿಮೆ ಪಡೆದುಕೊಳ್ಳುವ ಹೊಣೆಗಾರಿಕೆಯನ್ನು ವಾಹನ ಮಾಲೀಕರ ಮೇಲೆ ವರ್ಗಾಯಿಸಲಾಗಿದೆ. ಪ್ರತಿವರ್ಷವೂ ವಿಮೆ ಪಾಲಿಸಿಯನ್ನು ನವೀಕರಿಸಬೇಕು ಅಲ್ಲದೇ ವರ್ಷ ವರ್ಷವೂ ವಿಮೆಯ ಮೊತ್ತ ಏರಿಕೆಯಾಗುತ್ತದೆ. ಇದರಿಂದ ವಾಹನ ಮಾಲೀಕರಿಗೆ ಹೆಚ್ಚಿನ ಹೊರೆಯಾಗುತ್ತದೆ. 

ಸಣ್ಣಪುಟ್ಟ ನ್ಯೂನತೆಗಳಿದ್ದಾಗ ಅಥವಾ ವಿಮಾ ಪಾಲಿಸಿಯಲ್ಲಿನ ನಿಬಂಧನೆಗಳನ್ನು ಅರ್ಥೈಸುವಲ್ಲಿ ತೊಡಕುಗಳು ಕಂಡುಬಂದಾಗ ಸೆಕ್ಷನ್ 150 ರ ಅಡಿಯಲ್ಲಿ ವಿಮಾ ಕಂಪನಿಗಳು ತೊಂದರೆಗೆ ಒಳಗಾದವರಿಗೆ ಪರಿಹಾರ ನೀಡಿ ನಂತರ ವಾಹನದ ಮಾಲೀಕರಿಂದ ಪರಿಹಾರದ ಹಣವನ್ನು ಹಿಂಪಡೆಯುವಂತಹ ಅವಕಾಶವಿತ್ತು. ಆದರೆ ತಿದ್ದುಪಡಿಯು ಭಾದಿತನ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸದೇ ವಿಮಾ ವಲಯವನ್ನು ಸಂಪೂರ್ಣವಾಗಿ ಲಾಭ ನಷ್ಟದ ಸಂಸ್ಥೆಯಂತೆ ಬಿಂಬಿಸಲಾಗಿದೆ. 

ಈ ಹಿಂದೆ ಇದ್ದ ಸೆಕ್ಷನ್ 163 ಎ ಪ್ರಕಾರ ರಚನಾತ್ಮಕ ಸೂತ್ರದಡಿಯಲ್ಲಿ ಗಾಯಾಳು ಮತ್ತು ಮೃತರಿಗೆ ವೈದ್ಯಕೀಯ ವೆಚ್ಚದ ಪರಿಹಾರವನ್ನು ನೀಡಲು ಸಾಧ್ಯವಿತ್ತು. ಇದಕ್ಕೆ ಬದಲಾಗಿ ಜಾರಿಗೆ ಬಂದಿರುವ ಸೆಕ್ಷನ್ 164 ಇಂತಹ ಸೌಲಭ್ಯಗಳನ್ನು ಮೊಟಕುಗೊಳಿಸಿ ಒಂದು ಬಾರಿಗೆ ಮಾತ್ರ ಗಾಯಾಳುವಿಗೆ ರೂ.2.50 ಲಕ್ಷ ಮತ್ತು ಮೃತರಿಗೆ ರೂ.5 ಲಕ್ಷ ನಿರ್ದಿಷ್ಟ ವೈದ್ಯಕೀಯ ವೆಚ್ಚ ಪಡೆಯಲು ಅನುವು ಮಾಡಿಕೊಟ್ಟಿದೆ. 

ಹಿಂದಿನ ಕಾಯ್ದೆಯ ಸೆಕ್ಷನ್ 166 ರ ಅಡಿಯಲ್ಲಿ ಗಾಯಾಳು ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ಇರಲಿಲ್ಲ. ತಿದ್ದುಪಡಿ ಪ್ರಕಾರ ಗಾಯಾಳು ಅಫಘಾತ ಸಂಭವಿಸಿದ ಆರು ತಿಂಗಳ ಒಳಗೆ ಪ್ರಕರಣ ದಾಖಲಿಸಬೇಕು. ಇದರಿಂದ ಗಂಭೀರ ಗಾಯಗಳಿಂದ ನರಳುವ ವ್ಯಕ್ತಿ ಚಿಕಿತ್ಸೆಯನ್ನು ಬಿಟ್ಟು ನ್ಯಾಯಾಲಯ ಅಥವಾ ವಕೀಲರ ಕಚೇರಿ ಅಥವಾ ಪೋಲಿಸ್ ಠಾಣೆಗೆ ಹೋರಾಡಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ?  

ಕೆಲವು ವಿಶೇಷ ಪ್ರಕರಣಗಳಲ್ಲಿ(ವಿಮಾ ಸೌಲಭ್ಯವಿಲ್ಲದೇ ಇರುವ) ಗಾಯಾಳುವಿಗೆ 2.50 ಲಕ್ಷ ಮತ್ತು ಮೃತನಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವ ಶಾಸನಾತ್ಮಕ ಹೊಣೆಗಾರಿಕೆ ಸರ್ಕಾರಕ್ಕಿತ್ತು. ಆದರೆ ಪ್ರಸ್ತುತ ತಿದ್ದುಪಡಿ ಮೂಲಕ ಅದನ್ನೂ ತೆಗೆದುಹಾಕಿ ವಿಮಾ ಕಂಪನಿಗಳನ್ನು ಜನರ ಹಿತಾಸಕ್ತಿ ವಲಯದಿಂದ ಹೊರಗಿಡಲಾಗಿದೆ. 

ಈ ಮೇಲಿನ ಎಲ್ಲಾ ಅಂಶಗಳ ನೇರ ಪರಿಣಾಮ ವಾಹನ ಮಾಲೀಕರು ಮತ್ತು ಚಾಲಕರ ಮೇಲೆ ಬೀಳಲಿದೆ. @ಟಿ.ಕೆ.ಹನುಮಂತರಾಜು, 9740768291

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!