35 ಕೋಟಿ ಗಡಿ ದಾಟಿದ ಭಾರತದ ಕೋವಿಡ್-19 ಲಸಿಕೆ ವ್ಯಾಪ್ತಿ / ಕಳೆದ ಒಂದು ವಾರದಿಂದ 50,000 ಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು ವರದಿ

ನವದೆಹಲಿ: ಭಾರತದ ಒಟ್ಟು ಲಸಿಕೆ ವ್ಯಾಪ್ತಿಯು ನಿನ್ನೆ 35 ಕೋಟಿಯ ಹೆಗ್ಗುರುತನ್ನು ದಾಟಿದೆ. ಇಂದು ಬೆಳಿಗ್ಗೆ 7ಗಂಟೆಯವರೆಗಿನ ವರದಿಯ ಪ್ರಕಾರ, 46,04,925 ಸೆಷನ್‌ಗಳ ಮೂಲಕ ಒಟ್ಟು 35,12,21,306 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 63,87,849  ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.

2021ರ ಜೂನ್ 21ರಿಂದ ಕೋವಿಡ್-19 ಲಸಿಕೆಯ ಸಾರ್ವತ್ರಿಕರಣದ ಹೊಸ ಹಂತವು ಪ್ರಾರಂಭವಾಗಿದೆ. ಕೋವಿಡ್-19 ಲಸಿಕೆಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸಲು ಮತ್ತು ಅದರ ವೇಗವನ್ನು ಹೆಚ್ಚಿಸಲು ಕೇಂದ್ರ ಸರಕಾರ ಪ್ರಯತ್ನ ನಡೆಸಿದೆ. 

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 43,071 ಹೊಸ ಪ್ರಕರಣಗಳು ವರದಿಯಾಗಿವೆ.

ಸತತ ಏಳು ದಿನಗಳಿಂದ 50,000ಕ್ಕಿಂತಲೂ ಕಡಿಮೆ ದೈನಂದಿನ ಹೊಸ ಪ್ರಕರಣಗಳು ವರದಿಯಾಗಿವೆ.  ಇದು ಕೇಂದ್ರ ಮತ್ತು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರಂತರ ಹಾಗೂ ಸಹಯೋಗದ ಪ್ರಯತ್ನಗಳ ಫಲಿತಾಂಶವಾಗಿದೆ.

ಭಾರತದ ಸಕ್ರಿಯ ಪ್ರಕರಣಗಳ ಹೊರೆಯಲ್ಲಿ ನಿರಂತರ ಕುಸಿತ ದಾಖಲಾಗಿದೆ. ದೇಶದ ಸಕ್ರಿಯ ಪ್ರಕರಣಗಳ ಹೊರೆ ಇಂದು 4,85,350 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳಲ್ಲಿ ನಿವ್ವಳ 10,183 ಪ್ರಕರಣಗಳಷ್ಟು ಕುಸಿತವಾಗಿದ್ದು, ಸಕ್ರಿಯ ಪ್ರಕರಣಗಳು ಈಗ ದೇಶದ ಒಟ್ಟು ಪಾಸಿಟಿವ್‌ ಪ್ರಕರಣಗಳಲ್ಲಿ ಕೇವಲ 1.59%  ಮಾತ್ರ.

ಕೋವಿಡ್-19 ಸೋಂಕಿನಿಂದ ಹೆಚ್ಚಿನ ಜನರು ಚೇತರಿಸಿಕೊಳ್ಳುತ್ತಿರುವುದರಿಂದ, ಭಾರತದ ದೈನಂದಿನ ಹೊಸ ಪ್ರಕರಣಗಳ ಸಂಖ್ಯೆಗಿಂತಲೂ ದೈನಂದಿನ ಚೇತರಿಕೆಗಳ ಪ್ರಮಾಣ ಸತತ 52 ದಿನಗಳಿಂದ ಅಧಿಕ ಮಟ್ಟದಲ್ಲಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ 52,299  ಚೇತರಿಕೆಗಳು ದಾಖಲಾಗಿವೆ.

ದೈನಂದಿನ ಹೊಸ ಪ್ರಕರಣಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ 9,000 ಕ್ಕೂ ಹೆಚ್ಚು (9,228) ಚೇತರಿಕೆಗಳು ವರದಿಯಾಗಿವೆ.

ಸಾಂಕ್ರಾಮಿಕದ ಆರಂಭದಿಂದ ಇದುವರೆಗೂ ಕೋವಿಡ್‌-19 ಸೋಂಕಿಗೆ ಒಳಗಾದವರಲ್ಲಿ ಈಗಾಗಲೇ 2,96,58,078 ಜನರು ಚೇತರಿಸಿಕೊಂಡಿದ್ದಾರೆ  ಮತ್ತು ಕಳೆದ 24 ಗಂಟೆಗಳಲ್ಲಿ 52,299  ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದು ಒಟ್ಟಾರೆ 97.09% ಚೇತರಿಕೆ  ದರವನ್ನು ಸೂಚಿಸುತ್ತದೆ ಮತ್ತು ಈ ದರದಲ್ಲಿ ನಿರಂತರ ಹೆಚ್ಚಳ ಪ್ರವೃತ್ತಿ ಮುಂದುವರಿದಿದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿರುವುದರಿಂದ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 18,38,490 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ, ಭಾರತವು ಇದುವರೆಗೂ 41.82 ಕೋಟಿ(41,82,54,953) ಪರೀಕ್ಷೆಗಳನ್ನು ನಡೆಸಿದೆ.

ಒಂದಡೆ, ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿದ್ದರೂ, ಪ್ರಕರಣಗಳ ಸಾಪ್ತಾಹಿಕ ಪಾಸಿಟಿವಿಟಿಯಲ್ಲಿ ನಿರಂತರ ಕುಸಿತ ಕಂಡುಬರುತ್ತಿದೆ.  ಸಾಪ್ತಾಹಿಕ ಪಾಸಿಟಿವಿಟಿ ದರವು ಪ್ರಸ್ತುತ 2.44%  ರಷ್ಟಿದ್ದರೆ,  ದೈನಂದಿನ ಪಾಸಿಟಿವಿಟಿ ದರವು ಇಂದು 2.34% ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರವು ಸತತ 27 ದಿನಗಳಿಂದ 5% ಕ್ಕಿಂತ ಕಡಿಮೆ ಮಟ್ಟದಲ್ಲಿ ಮುಂದುವರಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……‌

ರಾಜಕೀಯ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda)

[ccc_my_favorite_select_button post_id="111998"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!