ಕರೊನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರಕಾರದಿಂದ 1500 ಕೋಟಿ: ಸಚಿವ ಸುಧಾಕರ್‌

ಬೆಂಗಳೂರು: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೊನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕರೊನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ.

ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೊನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಜಯನಗರ ಭಾಗದಲ್ಲಿ ಮತ್ತೊಂದು ನೂತನ ಆಸ್ಪತ್ರೆ ಪ್ರಾರಂಭವಾಗುತ್ತಿರುವುದು ಬಹಳ ಸಂತಸದ ವಿಷಯ. ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆ ಸೌಲಭ್ಯಗಳ ದೊರೆಯದೆ ಇದ್ದಂತಹ ಸಂಧರ್ಭದಲ್ಲಿ ಇದರ ಮಹತ್ವವನ್ನು ನಾವು ತಿಳಿದುಕೊಂಡಿದ್ದೇವೆ. ಹೆಲ್ತ್‌ ಕಾರ್ಡ್ ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಇಲ್ಲಿನ ವೈದ್ಯಕೀಯ ಮಂಡಳೀ ನೀಡಿರುವುದು ಸಂತಸದ ವಿಷಯ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಾತನಾಡಿ, ಯುನೈಟೆಡ್‌ ಆಸ್ಪತ್ರೆ ಕಲಬುರಗಿಯಲ್ಲಿ ಹಾಗೂ ಹೈದ್ರಬಾದ್‌ ಕರ್ನಾಟಕ ಭಾಗದಲ್ಲಿ ಕರೋನಾ ಸಾಂಕ್ರಾಮಿಕ ಸಂಧರ್ಭದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದೆ. ಬೆಂಗಳೂರು ಹೊರತುಪಡಿಸಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದ ರಾಜ್ಯದ ಮೊದಲ ಖಾಸಗಿ ಆಸ್ಪತ್ರೆ ಎನ್ನುವುದು ಇದರ ಹೆಗ್ಗಳಿಕೆ. ಚಿಕಿತ್ಸೆ ಮೊದಲು ಎನ್ನುವ ಧ್ಯೇಯ ವಾಕ್ಯದ ಮೂಲಕ ಉತ್ತಮ ಚಿಕಿತ್ಸೆಯನ್ನು ಯುನೈಟೆಡ್‌ ಆಸ್ಪತ್ರೆಯ ತಂಡ ನೀಡಿರುವುದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿಗಳಾದ ಪರಮ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಯುನೈಟೆಡ್‌ ಆಸ್ಪತ್ರೆಯ ಸಿಎಂಡಿ ಡಾ.ವಿಕ್ರಮ್‌ ಸಿದ್ದಾರೆಡ್ಡಿ, ಮಾಜಿ ಕೇಂದ್ರ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವೆ ಪಿಜಿಆರ್‌ ಸಿಂಧ್ಯಾ, ಶಾಸಕ ಪಿ ರಾಜೀವ, ಯುನೈಟೆಡ್‌ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರುಡಾ, ಆಸ್ಪತ್ರೆಯ ನಿರ್ದೇಶಕಿ ಡಾ.ವೀಣಾ ವಿಕ್ರಮ್‌ ಸಿದ್ಧಾರೆಡ್ಡಿ ಹಾಗೂ ಡಾ.ರಾಜೀವ್‌ ಬಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!