ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ: ಆರೋಪ ಪ್ರತ್ಯಾರೋಪ ಆರಂಭ

ದೊಡ್ಡಬಳ್ಳಾಪುರ: ನಗರಸಭಾ ಚುನಾವಣೆಗೆ ನಾಮ ಪತ್ರರ ಸಲ್ಲಿಕೆ ಮುಕ್ತಾಯವಾಗುತ್ತಿದ್ದಂತೆ ಆರೋಪ, ಪ್ರತ್ಯಾರೋಪಗಳ ಸರದಿ ಪ್ರಾರಂಭವಾಗಿದೆ.

ನಗರಸಭೆಯ ವಾರ್ಡ್ ಸಂಖ್ಯೆ 19ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಎಸ್.ಶಿವಶಂಕರ್ ಅವರು ನಾಮ ಪತ್ರಸಲ್ಲಿಕೆ ಸಮಯದಲ್ಲಿ ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಆರೋಪದ ಪ್ರಕರಣ ನಗರದ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಆದರೆ ಇದನ್ನು ಪ್ರಮಾಣ ಪತ್ರದಲ್ಲಿ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ್ದಾರೆ. ಇವರ ನಾಮ ಪತ್ರವನ್ನು ತಿರಸ್ಕರಿಸಬೇಕು ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ತಿಳಿಸಿದ್ದಾರೆ.

ಅವರು ಮಂಗಳವಾರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಚ್.ಎಸ್.ಶಿವಶಂಕರ್ ಅವರು ಬಿಜೆಪಿ ನಗರ ಘಟಕದ ಅಧ್ಯಕ್ಷರಾಗಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ನಾಮಪತ್ರ ಸಲ್ಲಿಕೆ ವೇಳೆ ಮತದಾರರಿಗೆ ಹಾಗೂ ಚುನಾವಣ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಇದರ ವಿರುದ್ಧ ನಗರದ ಚುನಾವಣ ಅಧಿಕಾರಿಗಳಿಗೆ ಲಿಖಿತ ದೂರು ನೀಡಿ ನಾಮಪತ್ರ ತಿರಸ್ಕರಿಸುವಂತೆ ಮನವಿ ಮಾಡಲಾಗಿದೆ ಎಂದರು.

ಗೆಲ್ಲುವ ವಾರ್ಡ್ ಬಿಟ್ಟುಕೊಡಲಾಗದು: ಕಳೆದ ನಗರಸಭೆ ಹಾಗೂ ವಿಧಾನ ಸಭಾ ಚುನಾವಣೆಯಲ್ಲಿ ಕನ್ನಡ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಆದರೆ ಈ ಬಾರಿ ಕನ್ನಡ ಪಕ್ಷದ ಮುಖಂಡರು ಐದು ವಾರ್ಡ್ಗಳನ್ನು ಬಿಟ್ಟುಕೊಡುವಂತೆ ಕೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಸದಸ್ಯರು ಗೆಲ್ಲುವ ವಾರ್ಡ್ಗಳನ್ನೇ ಕೇಳಿದ್ದರಿಂದ ಮೈತ್ರಿ ಮುರಿದು ಬಿದ್ದಿದೆ ಎಂದು ಜಿ.ಲಕ್ಷ್ಮೀಪತಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಕೆ.ಪಿ.ಜಗನ್ನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್, 19ನೇ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ನಾಗೇಶ್, ಮುಖಂಡರಾದ ಜವಾಜಿ ರಾಜೇಶ್, ವಿನೋದ್ ಕುಮಾರ್ ಗೌಡ ಮತ್ತಿತರಿದ್ದರು.

ಕಾಂಗ್ರೆಸ್ಗೆ ಸೋಲುವ ಬೀತಿ: ನಗರಸಭೆಯ 19ನೇ ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲುವುದು ಖಚಿತವಾಗಿದೆ. ಹೀಗಾಗಿ ನಮ್ಮ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಮತದಾರರಲ್ಲಿ ಗೊಂದಲ ಸೃಷ್ಠಿಸಲು ಮುಂದಾಗಿರುವುದು ಖಂಡನೀಯ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಹಾಗೂ 19ನೇ ವಾರ್ಡ್ ಅಭ್ಯರ್ಥಿ ಎಚ್.ಎಸ್.ಶಿವಶಂಕರ್ ತಿಳಿಸಿದ್ದಾರೆ.

ಅವರು ಈ ಬಗ್ಗೆ ಮಾಹಿತಿ ನೀಡಿ, ಕಾಂಗ್ರೆಸ್ ಪಕ್ಷದ ಮುಖಂಡರು ಮಾಡಿರುವ ಆರೋಪದ ದೂರಿನಲ್ಲಿ ನಾನು ಸಾಕ್ಷಿಯಾಗಿದ್ದೇನೆ ಹೊರತು ಆರೋಪಿಯಲ್ಲ. ಅಗತ್ಯ ದಾಖಲೆ ಚುನಾವಣೆ ಅಧಿಕಾರಿಗಳಿಗೆ ನೀಡಿರುವ ಹಿನ್ನೆಯಲ್ಲಿ ನಾಮಪತ್ರವನ್ನು ಪುರಸ್ಕರಿಸಲಾಗಿದೆ.

ನನ್ನ ವಿರುದ್ದ ಸುಳ್ಳು ಆರೋಪ ಮಾಡಿರುವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]