71ನೇ ವರ್ಷಕ್ಕೆ ಕಾಲಿರಿಸಿದ ಪ್ರಧಾನಿ ಮೋದಿ: ಜನ್ಮದಿನದ ಪ್ರಯುಕ್ತ ಲಸಿಕೆ ಅಭಿಯಾನ ಸೇರಿ ಹಲವು ಕಾರ್ಯಕ್ರಮಗಳು‌‌‌…!

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು 71ನೇಜನ್ಮ ದಿನದ ಸಂಭ್ರಮ‌. ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಎರಡನೇ ಬಾರಿಗೆ ಭಾರತದ ಪ್ರಧಾನಿ ಸ್ಥಾನ ಅಲಂಕರಿಸಿರುವ ಮೋದಿ ಅವರ ಜನ್ಮದಿನ ಸಂಭ್ರಮಾಚರಣೆಗೆ ಬಿಜೆಪಿ ಹಾಗೂ ಮೋದಿ ಅಭಿಮಾನಿಗಳು ಸಿದ್ದತೆ ಜೋರಾಗಿ‌ಯೇ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ 71 ನೇ ಹುಟ್ಟುಹಬ್ಬವನ್ನು ಬಿಜೆಪಿ ವಿಶೇಷವಾಗಿ ಆಚರಿಸುತ್ತಿದೆ. ಕಾಶಿಯಲ್ಲಿರುವ ವಾರಣಾಸಿಯ ಭಾರತ ಮಾತಾ ದೇವಸ್ಥಾನದಲ್ಲಿ 71,000 ಮಣ್ಣಿನ ದೀಪಗಳನ್ನು ಬೆಳಗಿಸಲು ಸಿದ್ದತೆ ಕೈಗೊಂಡಿದೆ. ದೀಪಗಳನ್ನು ಬೆಳಗಿಸುವುದರ ಜೊತೆಗೆ, 14 ಕೋಟಿ ಪಡಿತರ ಕಿಟ್​ಗಳನ್ನು ವಿತರಿಸಲಿದೆ.

ರಾಜ್ಯದಲ್ಲೂ ಮೋದಿ ಜನ್ಮ ದಿನದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳ ಜೊತೆಗೆ ವಿಶೇಷ ಮಹಾ ಲಸಿಕೆ ಅಭಿಯಾನವನ್ನು ರಾಜ್ಯ ಸರ್ಕಾರ ಆಯೋಜಿಸಿದೆ.

ಪ್ರಧಾನಿ ಮೋದಿ ಅವರ ಫೋಟೋ ಇರುವ 5 ಕೋಟಿ ಪೋಸ್ಟ್‌ಕಾರ್ಡ್‌ಗಳನ್ನು ದೇಶಾದ್ಯಂತ ಅಂಚೆ ಕಚೇರಿಗಳಿಂದ ಮೇಲ್ ಮಾಡಲಾಗುತ್ತಿದೆ.

ರಕ್ತದಾನ ಅಭಿಯಾನ, ನದಿಗಳ ಸ್ವಚ್ಛತಾ ಅಭಿಯಾನ, ಪಡಿತರ ಚೀಟಿಗಳ ವಿತರಣೆ ಮತ್ತು ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ಒಳಗೊಂಡಂತೆ ಮೋದಿ ಅವರ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುತ್ತಿದೆ.

20 ದಿನಗಳ ಮೆಗಾ ಅಭಿಯಾನ ‘ಸೇವಾ ಔರ್ ಸಮರ್ಪನ್ ಅಭಿಯಾನ’ ಇಂದು ಆರಂಭವಾಗಲಿದ್ದು, ಅಕ್ಟೋಬರ್ 7 ರಂದು ಮುಕ್ತಾಯಗೊಳ್ಳಲಿದೆ. ಏತನ್ಮಧ್ಯೆ, ಅಭಿಯಾನದ ಭಾಗವಾಗಿ ಉತ್ತರ ಪ್ರದೇಶದಲ್ಲಿಯೇ 27,000 ಬೂತ್‌ಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ರಾಜ್ಯದಲ್ಲಿ ವಿಶೇಷ ಲಸಿಕೆ ಅಭಿಯಾನ:  ಪ್ರಧಾನಿ ಮೋದಿ ಅವರ ಜನ್ಮ ದಿನದ ಪ್ರಯುಕ್ತ ರಾಜ್ಯ ಸರ್ಕಾರ ಮಹಾ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ರಾಜ್ಯದಲ್ಲಿ ಒಟ್ಟು 4.8 ಕೋಟಿ‌ ಡೋಸ್ ಹಂಚಿಕೆಯಾಗಿದೆ. ಇಂದು ಲಸಿಕೆ ಅಭಿಯಾನಕ್ಕೆ‌ 34 ಲಕ್ಷ ಡೋಸ್ ಮೀಸಲಿಡಲಾಗಿದೆ. ರಾಜ್ಯಾದ್ಯಂತ 12,700 ಸರ್ಕಾರಿ ಲಸಿಕಾ ಕೇಂದ್ರ, 300 ಖಾಸಗಿ ಕೇಂದ್ರಗಳು ಹಾಗೂ 14,666 ಲಸಿಕಾ ಕೇಂದ್ರದಲ್ಲಿ ಲಸಿಕೆ ಹಂಚಿಕೆ ಆಗಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 8,33,641 ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದ್ದು, ಈವರೆಗೂ 5,73,089 ಜನರಿಗೆ ಲಸಿಕೆಯನ್ನು ನೀಡಲಾಗಿದ್ದು, ಉಳಿದ 2,58,040 ಜನರಿಗೆ ಲಸಿಕೆಯನ್ನು ನೀಡಬೇಕಾಗಿರುವುದರಿಂದ ಈ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ದೊಡ್ಡಬಳ್ಳಾಪುರ ತಾಲ್ಲೂಕಿಗೆ 30,000, ನೆಲಮಂಗಲ ತಾಲ್ಲೂಕಿಗೆ 22,000, ದೇವನಹಳ್ಳಿ ತಾಲ್ಲೂಕಿಗೆ 10,000 ಹಾಗೂ ಹೊಸಕೋಟೆ ತಾಲ್ಲೂಕಿಗೆ 10,000 ರಂತೆ ಜಿಲ್ಲೆಗೆ ಒಟ್ಟು 72 ಸಾವಿರಗಳ ಗುರಿಯನ್ನು ನೀಡಲಾಗಿದೆ.

ನಾಗರೀಕರು ಲಸಿಕೆಯನ್ನು ಪಡೆಯಲು ಸಹಕಾರಿಯಾಗುವಂತೆ ಅವರ ಗ್ರಾಮ ಮಟ್ಟಗಳಲ್ಲಿ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಲ್ಲಿಯೇ ಲಸಿಕಾಕರಣದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆದ್ಯತೆಯುಳ್ಳ ಗುಂಪುಗಳಾದ ಕೈಗಾರಿಕಾ ವಸಾಹತು, ಕೊಳಗೇರಿ ಪ್ರದೇಶಗಳು, ಆಪಾರ್ಟ್ಮೆಂಟ್ಸ್ ಗಳು, ಕಟ್ಟಡ ಕಾಮಗಾರಿ ಸ್ಥಳಗಳು, ಅಲೆಮಾರಿ ಗುಂಪುಗಳು, 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಕ್ಯಾಬ್ ಡ್ರೈವರ್ ಗಳು, ಹೋಟಲ್ ಸಿಬ್ಬಂದಿಗಳು, ಗಾರ್ಮೆಂಟ್ಸ್ ನೌಕರರು ಹಾಗೂ ಇತರೆ ಎಲ್ಲಾ ಅರ್ಹ ನಾಗರೀಕರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಹಳ್ಳಿಗಳಲ್ಲಿ ಲಸಿಕಾಕರಣವನ್ನು ನಡೆಸಲಾಗುವುದು.

ಲಸಿಕೆ ಪಡೆಯದೆ ಇರುವ ಸಾರ್ವಜನಿಕರು ಲಸಿಕೆ ಪಡೆಯುವ ಮೂಲಕ ಈ ವಿಶೇಷ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಪೊಟೋ ಕೃಪೆ:DD)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]