ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 125 ಕೋಟಿ ರೂ. ವೆಚ್ಚದಲ್ಲಿ ಒಟ್ಟು 49 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ದಾವಣಗೆರೆ ನಗರ ಸಮಗ್ರ ಅಭಿವೃದ್ಧಿ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಭಾನುವಾರ ನಗರದ ಪಿಜಿ ಬಡಾವಣೆಯ ಡಾ.ಎಂ.ಸಿ.ಮೋದಿ ರಸ್ತೆಯಲ್ಲಿ ಮಹಾನಗರಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಶಿಲನ್ಯಾಸ ನೆರವೇರಿಸುವ ಮೂಲಕ ಚಾಲನೆ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. 

ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ 1500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 10 ನಗರಪಾಲಿಕೆಗಳಲ್ಲಿ ಕಾಮಗಾರಿ ನಡೆಸಲಾಗುತ್ತಿದ್ದು, ಯಡಿಯೂರಪ್ಪ ನಾಯಕತ್ವದಲ್ಲಿ ಈಗಾಗಲೇ ಹಲವು ಯೋಜನೆ ನೆರವೇರಿದೆ. ಕೇಂದ್ರ ಸರ್ಕಾರವು ರಾಜ್ಯದ ಹಲವು ಯೋಜನೆಗಳಿಗೆ ಹೆಚ್ಚಾಗಿ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದು, ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕ ಸಚಿವರಾದ ಪಿಯೂಷ್ ಗೋಯಲ್ ಜೊತೆ ಮಾತನಾಡಿದ್ದೇನೆ ಎಂದ ಅವರು, ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ 8 ರಿಂದ 10 ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮೆಗಾ ಟೆಕ್ಸ್‍ಟೈಲ್ ಪಾರ್ಕ್‌ ಗಳನ್ನು ಮಾಡಬೇಕು. ಹಾಗೂ ರಾಜ್ಯಕ್ಕೆ 3 ಮೆಗಾ ಟೆಕ್ಸ್‍ಟೆಲ್ ಆಗಬೇಕು. ಆಟೋ ಮೊಬೈಲ್ ಕ್ಷೇತ್ರಗಳಲ್ಲಿ ಕ್ಲಸ್ಟರ್ ಹೆಚ್ಚಿಗೆ ಮಾಡಬೇಕು ಎನ್ನುವ ಉದ್ದೇಶದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಹಂತ ಹಂತವಾಗಿ ಇವುಗಳನ್ನು ಸಾಕಾರ ಮಾಡುವ ಭರವಸೆ ಹೊಂದಿದ್ದೇನೆ ಎಂದು ಹೇಳಿದರು.

ಅಮೃತ ಗ್ರಾಮಗಳ ಯೋಜನೆಯಡಿ ಹಲವು ಹಣಕಾಸಿನ ಯೋಜನೆಗಳನ್ನು ರೂಪಿಸಿ ಕೆಲಸ ಮಾಡಿದಾಗ ಹೆಚ್ಚುವರಿಯಾಗಿ ಪ್ರತೀ ಗ್ರಾಮ ಪಂಚಾಯಿತಿಗೆ ರೂ.25 ಲಕ್ಷ ಅನುದಾನ ಸಿಗಲಿದೆ. ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ರೈತರು ರೇಷ್ಮೆ ಕೃಷಿಯನ್ನು ಅಭಿವೃದ್ಧಿ ಪಡಿಸಿದ್ದು, ಶ್ರೇಷ್ಠ ಗುಣಮಟ್ಟದ ರೇಷ್ಮೆ ಬೆಳೆಯುತ್ತಿದ್ದು, ವಿದೇಶದಿಂದ ಆಮದಾಗುವ ರೇಷ್ಮೆಗೆ ಸರಿಸಮಾನವಾಗಿದ್ದರಿಂದ ಹೆಚ್ಚಿನ ಬೇಡಿಕೆಯಿದೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿಯೊಂದಿಗೆ ಹಲವಾರು ಕಾಮಗಾರಿಗಳನ್ನು ಒಂದೆ ಕಡೆ ಮಾಡಿದ್ದು, ದಾವಣಗೆರೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಎಸ್.ಸಿ.ಎಸ್.ಪಿ (ಪರಿಶಿಷ್ಟ ಜಾತಿ)ಯಡಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆಗೆ 360 ಲಕ್ಷ ರೂ., ಕಾಮಗಾರಿಗಳಿಗೆ 1440 ಲಕ್ಷ ರೂ., ಹಾಗೂ ಟಿಎಸ್‍ಪಿ (ಪರಿಶಿಷ್ಟ ಪಂಗಡ) ದಡಿ ಪೌರಕಾರ್ಮಿಕರಿಕರ ಗೃಹ ಭಾಗ್ಯ ಯೋಜನೆಗೆ 146.10 ಲಕ್ಷ ರೂ., ಕಾಮಗಾರಿಗಳಿಗೆ 584.40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಇನ್ನೂ ಸಾಮಾನ್ಯ ಕಾಮಗಾರಿಗಳಿಗೆ 5469.50 ಲಕ್ಷ ರೂ. ಮೀಸಲಿಡಲಾಗಿದೆ ಎಂದರು.

ಮಹಾನಗರ ಪಾಲಿಕೆಯ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 10 ಉದ್ಯಾನವನಗಳು, 2 ಕಾಲೇಜುಗಳಿಗೆ ಪರಿಕರ ಒದಗಿಸುವುದು, 74.995 ಕಿ.ಮೀ ಸಿ.ಸಿ. ಚರಂಡಿ ನಿರ್ಮಾಣ, 03.750 ಕಿ.ಮೀ ಒಳಚರಂಡಿ ನಿರ್ಮಾಣ, 18.551 ಕಿ.ಮೀ ಡಾಂಬಾರ್ ರಸ್ತೆ, 17.932 ಕಿ.ಮೀ ಕಾಂಕ್ರಿಟ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಎ.ಶಿವಯೋಗಿ ಸ್ವಾಮಿ, ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ.ರಿಷ್ಯಂತ್, ಮಹಾನಗರಪಾಲಿಕೆ ಉಪಮೇಯರ್ ಸೌಮ್ಯ ನರೇಂದ್ರಕುಮಾರ್, ನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್, ಕೆ.ಟಿ.ವೀರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….. 

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!