ರಪ್ತು ಚಟುವಟಿಕೆಯನ್ನು ಉತ್ತೇಜಿಸಲು ಕೈಗಾರಿಕೋದ್ಯಮಿಗಳು ಕ್ರಿಯಾಶೀಲರಾಗಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಪ್ತು ಚಟುವಟಿಕೆಯನ್ನು ಉತ್ತೇಜಿಸಲು ಕೈಗಾರಿಕೋದ್ಯಮಿಗಳು ಕ್ರಿಯಾಶೀಲರಾಗಿ ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಭಾರತ ದೇಶದ 75ನೇ ವರ್ಷದ ಸ್ವಾತಂತ್ರೋತ್ಸವದ “ಆಜಾದಿ ಕಾ ಅಮೃತ್ ಮಹೋತ್ಸವ್” ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಹಭಾಗಿತ್ವದಲ್ಲಿ ಕ್ಲಾರ್ಕ್ ಎಕ್ಸೊಟಿಕಾ ಕಾನ್ವೆಕ್ಷನ್ ರೆಸಾರ್ಟ್ ನಲ್ಲಿಂದು ಒಂದು ದಿನದ “ಎಕ್ಸ್ ಪೋರ್ಟರ್ಸ್ ಕಾನ್‌ಕ್ಲೇವ್” ವಾಣಿಜ್ಯ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಉದ್ದಿಮೆದಾರರು ಹೆಚ್ಚು ಹೆಚ್ಚು ರಫ್ತು ಚಟುವಟಿಕೆಯನ್ನು ಹಮ್ಮಿಕೊಳ್ಳಲು ಸರ್ಕಾರವು ಎಲ್ಲಾ ರೀತಿಯ ಸೌಲಭ್ಯ ಮತ್ತು ಸೌಕರ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ 100 ಕ್ಕೂ ಹೆಚ್ಚಿನ ಕೈಗಾರಿಕೆಗಳು ರಫ್ತು ಚಟುವಟಿಕೆಯನ್ನು ನಡೆಸುತ್ತಿದ್ದು, ಹೆಚ್ಚಿನ ಉದ್ಯೋಗಾವಕಾಶವನ್ನು ಸ್ಥಳೀಯರಿಗೆ ಒದಗಿಸಿದೆ. ಅದಾಗ್ಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಚಟುವಟಿಯನ್ನು ಎಲ್ಲಾ ಕೈಗಾರಿಕೋದ್ಯಮಿಗಳು ಹಮ್ಮಿಕೊಂಡು ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಸಹಕಾರಿಯಾಗಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಗುಲಾಟಿ ಅವರು ಮಾತನಾಡಿ, ಅಜಾದಿ ಕಾ ಅಮೃತ ಮಹೋತ್ಸವ್ ಕಾರ್ಯಕ್ರಮದ ಅಂಗವಾಗಿ ನಡೆದಂತಹ ಈ ವಾಣಿಜ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಇರುವಂತಹ ಸಂಪನ್ಮೂಲಗಳನ್ನು ಬಳಸಿಕೊಂಡು ಹೆಚ್ಚು ಹೆಚ್ಚು ಕೈಗಾರಿಕೆಗಳನ್ನು ಸ್ಥಾಪಿಸುವುದು ಮತ್ತು ಅದನ್ನು ರಫ್ತು ಚಟುವಟಿಕೆಯಾಗಿ ಅಭಿವೃದ್ದಿ ಪಡಿಸಿ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಎಲ್ಲಾ ಎಂ.ಎಸ್.ಎಂ.ಇ. ಘಟಕಗಳು ಸಹಕರಿಸಬೇಕೆಂದು ಹೇಳಿದರು.

ದಾಬಾಸ್‌ಪೇಟೆ ಕೈಗಾರಿಕಾ ಸಂಘದ ಅಧ್ಯಕ್ಷರಾದ ಎಸ್.ಕಂಠಪ್ಪ ಮಾತನಾಡಿ ವಾಣಿಜ್ಯ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದಂತಹ ಕೈಗಾರಿಕೋದ್ಯಮಿಗಳು ಮತ್ತು ರಫ್ತುದಾರರು ಸರ್ಕಾರವು ಒದಗಿಸಿರುವ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡು, ಉತ್ತಮ ರೀತಿಯ ಚಟುವಟಿಕೆಯನ್ನು ನಡೆಸುವಂತೆ ಹಾಗೂ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶವನ್ನು ಒದಗಿಸಲು ಸರ್ಕಾರದ ಜೊತೆ ಕೈಜೋಡಿಸಬೇಕೆಂದರು ಹಾಗೂ ಉದ್ಯೋಗ ಸಮಸ್ಯೆ ನಿವಾರಣೆಗೆ ಎಲ್ಲಾ ಕೈಗಾರಿಕೊದ್ಯಮಗಳು ಸಹಾಯ ಹಸ್ತ ನೀಡುವಂತೆ ಕೋರಿದರು.

ಹೊಸಕೋಟೆ ಕೈಗಾರಿಕಾ ವೆಲ್‌ಫೇರ್ ಫೋರಂನ ಅಧ್ಯಕ್ಷರಾದ ಕೃಷ್ಣಪ್ಪ ಮಾತನಾಡಿ ಸರ್ಕಾರದ ಈ ವಾಣಿಜ್ಯ ಸಪ್ತಾಹವು ಎಲ್ಲಾ ಉದ್ದಿಮೆದಾರರಿಗೆ ಅವಕಾಶವನ್ನು ಕಲ್ಪಿಸಿದ್ದು, ಇದರಿಂದ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಎಫ್.ಕೆ.ಸಿ.ಸಿ.ಐ. ಹಾಗೂ ಸಿ.ಎಂ.ಡಿ ಸಿ.ವಿ.ಎನ್‌ವಿರೋ ಸಿಸ್ಟಮ್‌ನ ಮಾಜಿ ಅಧ್ಯಕ್ಷರಾದ‌ ಡಾ|| ಜಾಕೋಬ್ ಕ್ರಾಸ್ಟ ಅವರು ಮಾತನಾಡಿ ಜಿಲ್ಲೆಯಲ್ಲಿರುವ ಎಲ್ಲಾ ಕೈಗಾರಿಕೋದ್ಯಮಗಳು ರಫ್ತು ನಿರ್ವಹಣೆಯನ್ನು ಮಾಡಲು ತಿಳಿಸಿದರಲ್ಲದೆ, ಪೂರಕವಾಗಿ ತಾವು ನಡೆಸುತ್ತಿರುವ ಚಟುವಟಿಕೆಯಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಇರುವ ಮಿಸೈಲ್, ವಿಕ್ರಮ್, ಅಗ್ನಿ ಮತ್ತು ಇತರೆ ದೇಶದ ರಕ್ಷಣಾ ಉತ್ಪನ್ನಗಳನ್ನು ಈ ಸಂಸ್ಥೆಯ ಮುಖಾಂತರವಾಗಿ ಪ್ರದರ್ಶನ ಮಾಡಿರುವುದು ಹೆಮ್ಮೆಯ ವಿಷಯವಾಗಿದ್ದು, ತನ್ನ ಉತ್ಪನ್ನಗಳನ್ನು ದೇಶದ ರಕ್ಷಣೆಗೆ ಮೀಸಲಿಡಲು ಮನವಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ನರೇಂದ್ರಬಾಬು.ಎನ್. ಅವರು ಮಾತನಾಡಿ ಈ ಉತ್ಪನ್ನಗಳು ಪ್ರಮುಖವಾಗಿ ಅಮೇರಿಕಾ, ಇಂಗ್ಲೆಂಡ್, ಸಿಂಗಾಪುರ, ಮಲೇಷಿಯಾ, ಸೌದಿ ಅರೇಬಿಯಾ ದೇಶಗಳು, ಚೈನಾ, ಜರ್ಮನಿ, ರಷ್ಯಾ, ಸ್ಪೇನ್, ಕೆನಡಾ, ನೈಜೀರಿಯಾ, ಬಾಂಗ್ಲಾದೇಶ, ಥೈಲ್ಯಾಂಡ್, ಜಪಾನ್, ಯುರೋಪ್, ಇಟಲಿ, ಹಾಂಕಾಂಗ್, ಬ್ರೆಜಿಲ್, ಇತ್ಯಾದಿ ದೇಶಗಳಿಗೆ ರಫ್ತು ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲು ಕಾರ್ಯತಂತ್ರ ರೂಪಿಸಲು ಜಿಲ್ಲಾಡಳಿತವು ಉದ್ದಿಮೆದಾರರಿಗೆ ಸೂಕ್ತ ನೆರವು ಕಲ್ಪಿಸಲಾಗುತ್ತಿದೆ ಎಂದು  ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೈಗಾರಿಕಾ ಕೇಂದ್ರದ 

ಉಪ ನಿರ್ದೇಶಕರಾದ ಕೆ.ಟಿ.ನಾರಾಯಣಸ್ವಾಮಿ ಅವರು ಮಾತನಾಡಿ ರಾಜ್ಯ ಸರ್ಕಾರವು 2020-25ರ ಕೈಗಾರಿಕಾ ನೀತಿಯಲ್ಲಿ ರಫ್ತು ಚಟುವಟಿಕೆಯನ್ನು ಪ್ರೋತ್ಸಾಹಿಸಲು ಹಲವಾರು ಉತ್ತೇಜನ ಮತ್ತು ರಿಯಾಯಿತಿ ಸೌಲಭ್ಯಗಳನ್ನು ಕಲ್ಪಿಸಿದೆ. ಈ ಸೌಲಭ್ಯವನ್ನು ಜಿಲ್ಲೆಯ ರಫ್ತು ಕೈಗಾರಿಕೋದ್ಯಮಗಳು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ವಾಣಿಜ್ಯ ಸಪ್ತಾಹದಲ್ಲಿ ಜಿಲ್ಲೆಯ ಪ್ರಮುಖ ಕೈಗಾರಿಕೋದ್ಯಮಿಗಳು, ರಫ್ತುದಾರರು,‌ ವಿವಿಧ ಕೈಗಾರಿಕಾ ಸಂಘದವರು, ವಿವಿಧ ಇಲಾಖೆಯವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!