ಪ್ರವಾಸೋದ್ಯಮ ಆವರ್ತಕ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ  ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ವಿಶ್ವವಿಖ್ಯಾತ ನಂದಿ ಬೆಟ್ಟ, ರಂಗಸ್ಥಳ, ಶ್ರೀನಿವಾಸ ಸಾಗರ ಹಾಗೂ ಇನ್ನಿತರ ಪ್ರಸಿದ್ಧ  ಪ್ರವಾಸಿ ತಾಣಗಳನ್ನು ಒಳಗೊಂಡಂತೆ ಒಂದು ಪ್ರವಾಸಿ ಆವರ್ತಕವನ್ನು (Tourism circuit) ನಿರ್ಮಾಣ ಮಾಡಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಅವರು ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀ ಭೋಗನಂದೀಶ್ವರ ದೇವಸ್ಥಾನದ ಆವರಣದಲ್ಲಿ  ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ   ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಿಂಬಿಸುವ ಚಿತ್ರ ಕಲೆ ಬಿಡಿಸುವ ಚಿತ್ರ ಕಲಾ ಶಿಬಿರವನ್ನು ಸ್ವತ: ಡಿಸಿಯವರು ಕುಂಚದಲ್ಲಿ ಸಹಿ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳಿಂದ ಚಿತ್ರ ಕಲೆ ವೀಕ್ಷಣೆ: ಚಿತ್ರ ಕಲಾ ಶಿಬಿರದಲ್ಲಿ  ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳಿಂದ  ಬಿಡಿಸಲ್ಪಟ್ಟಿರುವ ಜಿಲ್ಲೆಯ ಪ್ರವಾಸಿ ತಾಣಕ್ಕೆ ಹೆಸರುವಾಸಿಯಾದ ಚಿತ್ರಗಳು ಮತ್ತು  ಪ್ರವಾಸ ತಾಣಗಳನ್ನ ಬಿಂಬಿಸುವ ಚಿತ್ರಗಳು ಅಂದವಾಗಿ ಮೂಡಿಬಂದಿವೆ ಹಾಗೂ ಜನರ ಗಮನ ಸೆಳೆಯಲಿವೆ ಈ    ಎಲ್ಲಾ ಕಲಾ ಚಿತ್ರಗಳನ್ನು ಸರ್ಕಾರಿ ಕಚೇರಿಗಳಲ್ಲಿ ಪ್ರದರ್ಶನಕ್ಕಿಡುವ ಮೂಲಕ ಸಂರಕ್ಷಿಸಲಾಗುವುದು ಜೊತೆಗೆ ಗಣ್ಯರಿಗೆ ಉಡುಗೊರೆ ನೀಡಲು ಸಹ ಬಳಸಿಕೊಳ್ಳಲಾಗುವುದು. ಈ ಶಿಬಿರ ಚಿತ್ರ ಕಲಾವಿದರಿಗೆ ವೇದಿಕೆ ಯಾಗಿ ಪ್ರತಿಭೆ  ಹೊರ ಹೊಮ್ಮಲು ಸಹಕಾರಿಯಾಗುವ ಜೊತೆಗೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೂ  ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿಗಳು  ಚಿತ್ರ ಕಲೆ ವೀಕ್ಷಣೆ ಮಾಡಿ ಅಭಿಪ್ರಾಯಪಟ್ಟರು.

ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಒಂದು ದಿನ ಪೂರ್ತಿ ಪ್ರವಾಸದ ಮೂಲಕ ಕಳೆಯಲು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ  ತಾಣಗಳನ್ನು ಸಂದರ್ಶಿಸಿ ಪ್ರವಾಸ ಮಾಡಲು ಅನುಕೂಲವಾಗುವ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಒಂದು ಪ್ರವಾಸಿ ಆವರ್ತಕವನ್ನು ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆದು ಜಿಲ್ಲೆಯ ಪ್ರವಾಸೋದ್ಯಮವನ್ನು  ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗುತ್ತಿದೆ. ವಿಶ್ವ ವಿಖ್ಯಾತ  ನಂದಿ  ಗಿರಿ ಧಾಮ ಸೇರಿದಂತೆ ಜಿಲ್ಲೆಯಲ್ಲಿ  ಸಾಕಷ್ಟು ಪ್ರಸಿದ್ಧ ಪ್ರವಾಸಿ ತಾಣಗಳಿದ್ದು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ವಿಪುಲವಾದ ಅವಕಾಶಗಳಿವೆ.ಅಲ್ಲದೆ ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಎಕೋ ಥೀಮ್ ಪಾರ್ಕ್  ಕಾಮಗಾರಿ ಶಂಕುಸ್ಥಾಪನೆ: ಹೊಸದಾಗಿ  ಹಲವು ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಕಂದವಾರ ಕೆರೆ ಬಳಿ ಕೆ.ಆರ್.ಎಸ್.ಬೃಂದಾವನ ಮಾದರಿಯಲ್ಲಿ ಕಂದವಾರ ‘ಎಕೋ ಥೀಮ್ ಪಾರ್ಕ್’ನ್ನು 8.10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಈಗಾಗಲೇ ಕ್ರಮವಹಿಸಲಾಗಿದ್ದು,ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಹಾಗೂ ಆರ್ಥಿಕ ಬಿಡ್ಡ  ನ್ನು   ಸಹ ತೆರೆಯಲಾಗಿದೆ. ಸದ್ಯದಲ್ಲೆ  ಎಕೋ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ.  ಸ್ವಯಂ ಚಾಲಿತ ಪರಿಸರ ಸ್ನೇಹಿ ಉದ್ಯಾನವನ ಪ್ರವಾಸಿಗರ ಮನಸೆಳೆಯುವ ಹಲವು ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಮಾದರಿಗಳು ಈ ಪಾರ್ಕ್ ನಲ್ಲಿ ಮೈತಳೆಯಲಿವೆ.ಈ ಉದ್ಯಾನವನದಲ್ಲಿ ಸರಳ ಜಿಮ್, ಪಾರ್ಕಿಂಗ್ ವ್ಯವಸ್ಥೆ, ಮಕ್ಕಳ ಆಟದ ಅನುಕೂಲಗಳು, ಹಿರಿಯ ನಾಗರಿಕರ ವಿಶ್ರಾಂತಿ ಸ್ಥಳ, ಸಂಗೀತ ಕಾರಂಜಿ, ಬೋಟಿಂಗ್, ಕಲಾಗ್ರಾಮದ ಮಳಿಗೆಗಳು, ಪಾದಾಚಾರಿ ಸೇತುವೆ, ವನೌಷಧಿ ಸಸ್ಯಗಳು ಇತ್ಯಾದಿ ವಿಶೇಷ ಆಕರ್ಷಣೆಯೊಂದಿಗೆ ಪ್ರವಾಸಿಗರಿಗೆ ಮುದ ನೀಡಲಿದೆ. ಈ ಪಾರ್ಕ್ ನ ಯಾವುದೇ ಸ್ಥಳದಲ್ಲಿ ಕೂತರೂ ಸುಶ್ರಾವ್ಯ ಸಂಗೀತದ ನಾದ ಕೇಳುವಂತೆ  ನಿರ್ಮಾಣ ಮಾಡುತ್ತಿರುವುದು  ಈ ಪಾರ್ಕ್ ವಿಶೇಷತೆಯಾಗಲಿದೆ  ಒಟ್ಟಾರೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಶ್ರೀನಿವಾಸಾಗರ ಪಾರ್ಕ್ ನಿರ್ಮಾಣಕ್ಕೆ ಡಿಪಿಆರ್: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ  ಪುಣ್ಯ ಕ್ಷೇತ್ರ  ಶ್ರೀನಿವಾಸಾಗರದ ಬಳಿ  ಪಾರ್ಕ್ ನಿರ್ಮಾಣ ಮಾಡಿ  ಪ್ರವಾಸಿಗರ ಮನಸೆಳೆಯುವ ಪ್ರವಾಸಿ ತಾಣ ಮಾಡಲು ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುತ್ತಿದೆ ಮತ್ತು ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ರಂಗಸ್ಥಳದಲ್ಲಿ 21ಎಕರೆ ಜಾಗದಲ್ಲಿ ಪ್ರವಾಸಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಈಗಾಗಲೇ ಯೋಜನೆ ರೂಪಿಸಲಾಗಿದೆ.ಸದ್ಯದಲ್ಲೇ ಅನುಮೋದನೆಯೂ ದೊರಕಲಿದೆ ಇದಲ್ಲದೇ ಅಮಾನಿ ಗೋಪಾಲಕೃಷ್ಣ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಜಿತೇಂದ್ರನಾಥ್ ಯೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಗೂ ಚಿತ್ರಕಲಾ ಶಿಕ್ಷಕರು ಮತ್ತು ಚಿತ್ರಕಲಾ ಪರಿಷತ್ತಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ

[ccc_my_favorite_select_button post_id="119448"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!