ಮಹಾನ್ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳು ಸರ್ವ ಕಾಲಕ್ಕೂ ಪ್ರಸ್ತುತ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮಹಾನ್ ಮಹರ್ಷಿ ವಾಲ್ಮೀಕಿ ವಿರಚಿತ ರಾಮಾಯಣ ಅತ್ಯಂತ ಶ್ರೇಷ್ಠ ಮಹಾಕಾವ್ಯವಾಗಿದ್ದು, ಮನುಷ್ಯ  ಭೂಮಿ  ಮೇಲೆ  ಇರುವವರೆಗೂ, ಇಂದು ಮತ್ತು ಭವಿಷ್ಯದಲ್ಲಿ ಹೀಗೇ ಎಲ್ಲಾ ಕಾಲಕ್ಕೂ ಈ ಕಾವ್ಯವು ಪ್ರಸ್ತುತವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಅವರು ಬುಧವಾರ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ  ಪಂಗಡಗಳ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಯಾವುದೇ ವ್ಯಕ್ತಿ   ಜ್ಞಾನಾರ್ಜನೆ ಮೂಲಕ ಉನ್ನತ ಸಾಧನೆ ಮಾಡಲು ರಾಮಾಯಣ ಕಾವ್ಯ ಪ್ರೇರಣೆಯಾಗಿದೆ. ಪರಿಶಿಷ್ಟ ಪಂಗಡದ ಜನರು ಗುರಿ ಮತ್ತು ಪರಿಶ್ರಮದಿಂದ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ  ಮುಂದೆ ಬರಬೇಕು. ಈ ಸಮುದಾಯದ ಜನರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಭಿವೃದ್ಧಿಯಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವತ್ತ ಗಂಭೀರ ಚಿಂತನೆ ನಡೆಸಬೇಕು ಎಂದರು.

ರಾಮಾಯಣ ಮಹಾಕಾವ್ಯದಲ್ಲಿ ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹಲವು ಮೌಲ್ಯಾದರ್ಶಗಳಿದ್ದು, ಪ್ರತಿಯೊಬ್ಬರೂ ಶ್ರೀ ರಾಮಾಯಣ ಮಹಾಕಾವ್ಯವನ್ನು ಆಳವಾಗಿ ಅಧ್ಯಯನ ಮಾಡಿ  ವಾಲ್ಮೀಕಿಯವರ ಆದರ್ಶ ಚಿಂತನೆಗಳನ್ನು ಅನುಸರಿಸುವ ಅಗತ್ಯವಿದೆ, ಸ್ವಾಮಿನಿಷ್ಠೆ, ಸೋದರ ನಿಷ್ಠೆ, ಪತಿನಿಷ್ಠೆ, ಪತ್ನಿನಿಷ್ಠೆ, ಪಿತೃ ವಾಕ್ಯ ಪರಿಪಾಲನೆ  ಸೇರಿದಂತೆ ಹಲವು ರೀತಿಯ ನಿಷ್ಠೆಗಳು ಈ ಕಾವ್ಯದಲ್ಲಿ  ಕಾಣ ಸಿಗುತ್ತವೆ. ಎಂದು ತಿಳಿಸಿದರು.

ಯೋಜನೆಗಳ ಅರಿವಿರಲಿ: ಬಲಹೀನ ತಳ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನುರೂಪಿಸಿವೆ. ಬಲಹೀನ ತಳ ಸಮುದಾಯಗಳ ಯುವಕರು ಸ್ವಂತ ಉದ್ಯಮಗಳನ್ನು ಆರಂಭಿಸಿ ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶಕ್ಕಾಗಿ 10 ಲಕ್ಷದಿಂದ    1 ಕೋಟಿವರೆಗೆ  ಸಾಲ ನೀಡುವ *ಸ್ಟಾಂಡ್ ಅಪ್ ಇಂಡಿಯಾ* ಎಂಬ ಯೋಜನೆಯನ್ನ    ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಇದಕ್ಕಾಗಿ 27 ಸಾವಿರ ಕೋಟಿಗಳನ್ನ  ಕೇಂದ್ರ ಸರ್ಕಾರ ಮೀಸಲಿಟ್ಟಿದೆ.ಇಂತಹ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಅರಿತು ಸದ್ಬಳಕೆ ಮಾಡಿಕೊಂಡು ಪ್ರಗತಿ ಹೋಂದಬೇಕು ಎಂದು ಯುವಕರಿಗೆ  ಸಚಿವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಿಸುವ ಉದ್ದೇಶಕ್ಕಾಗಿ ಚಿಕ್ಕಬಳ್ಳಾಪುರ ನಗರದ ಹೃದಯ ಭಾಗದಲ್ಲಿ 30 ಗುಂಟೆ ಜಮೀನು ಮಂಜೂರಾತಿಯ ಆದೇಶ ಪತ್ರವನ್ನು ಸಂಬಂಧಪಟ್ಟ  ಇಲಾಖೆಗೆ ಹಸ್ತಾಂತರಿಸಿದರು. ಈ ಆದೇಶ  ಪತ್ರವನ್ನು   ಸಕಾಲದಲ್ಲಿ  ಸಿದ್ದಪಡಿಸಿ ಜಯಂತಿಯಂದು  ನೀಡಲು ಸ್ಪಂದಿಸಿದ್ದಕ್ಕೆ ಜಿಲ್ಲಾಧಿಕಾರಿಗಳನ್ನು ಈ ವೇಳೆ ಅಭಿನಂದಿಸಿದರು.  ಎಸ್.ಎಸ್. ಎಲ್.ಸಿ, ಪಿಯುಸಿ ಮತ್ತು ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಪರಿಶಿಷ್ಟ ಪಂಗಡ ಸಮುದಾಯದಲ್ಲಿ ವಿಶೇಷ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮಹರ್ಶಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಚೆಕ್ ಗಳನ್ನುವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅರ್. ಲತಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಅನಂದ್ ರೆಡ್ಡಿ ಬಾಬು,ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಶ್ವತಪ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀಧರ್ , ಚಿಕ್ಕಬಳ್ಳಾಪುರ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಕೆ.ವಿ.ಗವಿರಾಯಪ್ಪ, ಖಜಾಂಚಿ ಕೆ.ಎನ್.ಆವಲಕೊಂಡರಾಯಪ್ಪ, ಸಂಘಟನಾ ಕಾರ್ಯದರ್ಶಿ ಮುನಿವೆಂಟಕಸ್ವಾಮಿ, ಸದಸ್ಯರಾದ ನರಸಿಂಹರಾಜು, ಸಮುದಾಯದ ಮುಖಂಡರಾದ ಶಿವಕುಮಾರ್ ,ಶ್ರೀನಿವಾಸ್, ಕೆ.ಟಿ.ನಾರಾಯಣಸ್ವಾಮಿ, ಪಿ.ಮುನಿರಾಜು (ಜಿ.ಪಂ.ಮಾಜಿ ಸದಸ್ಯರು), ಮುನಿಕೃಷ್ಣ (ಮಾಜಿ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರು), ಚಿಕ್ಕಬಳ್ಳಾಪುರ ತಾಲ್ಲೂಕು ವಾಲ್ಮೀಕಿ ಸಂಘದ ಅಧ್ಯಕ್ಷರಾದ ಮೂರ್ತಿ.ಜಿ, ಉಪಾಧ್ಯಕ್ಷರಾದ ನಾರಾಯಣಸ್ವಾಮಿ, ವಾಲ್ಮೀಕಿ ನಾಯಕ ಸಂಘದ ವಿವಿಧ  ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು/ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!