ಕನ್ನಡ ಭಾಷೆಯ ಬಳಕೆಗೆ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದೆ : ಉಪವಿಭಾಗಾಧಿಕಾರಿ ಅರುಳ್ ಕುಮಾರ್

ದೊಡ್ಡಬಳ್ಳಾಪುರ: ಕನ್ನಡ ಭಾಷೆ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿದ್ದು, ಜಗತ್ತಿನಲ್ಲಿಯೇ ವಿಶಿಷ್ಟವಾಗಿದೆ. ಕನ್ನಡ ಭಾಷೆಯನ್ನು  ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದ್ದು, ಆಧುನಿಕ ಸಂವಹನ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಭಾಷೆ ಹೆಚ್ಚಾಗಿ ಬಳಕೆಯಾಗಬೇಕಿದೆ ಎಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ತಿಳಿಸಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಆಯೋಜಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ಕರ್ನಾಟಕ ಏಕೀಕರಣದ ಹಿನ್ನಲೆ ವಿವರಿಸಿದ ಅವರು, ಇಂದು ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯತ್ತ ದಾಪುಗಾಲಾಕುತ್ತಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಶ್ರೀಮಂತವಾಗಿದ್ದು, 8 ಜ್ಞಾನ ಪೀಠ ಪ್ರಶಸ್ತಿಗಳು ಲಭಿಸಿವೆ. ಆದರೆ ಇಂದು ಇತರೆ ಭಾಷೆಗಳ ಪ್ರಭಾವದಿಂದ ಮುಖ್ಯವಾಗಿ ಆಂಗ್ಲ ಭಾಷೆಯಿಂದ ಕನ್ನಡಕ್ಕೆ ದಕ್ಕೆಯಾಗುತ್ತಿದ್ದು, ನಾವು ಕನ್ನಡ ಭಾಷೆಯ ಮಹತ್ವ ಅರಿಯಬೇಕಿದೆ. ನಾಡಿನ ಕುರಿತು ಮಕ್ಕಳಿಗೆ ಅರಿವುಂಟು ಮಾಡುವ ಸಂಕಲ್ಪ ಮಾಡಿ, ಎಷ್ಟೇ ಭಾಷೆಗಳನ್ನು ಕಲಿತರೂ ಸಹ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಡು, ಸಂಸ್ಕೃತಿಯ ಚಿಂತನೆ ಸದಾ ಕಾಲ ಬೆಳೆಸಿಕೊಳ್ಳಬೇಕಿದೆ ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ ನಾಡು, ನುಡಿ ಅಭಿಮಾನ ಎಲ್ಲರಲ್ಲೂ ಮೂಡಬೇಕಿದ್ದು, ಕನ್ನಡ ಭಾಷೆಯ ಬಳಕೆ ಹೆಚ್ಚಾಗಬೇಕಿದೆ. ನಾಮಫಲಕಗಳಲ್ಲಿ ಕನ್ನಡ ಬಾಷೆಯ ಬಳಕೆಯ ಕುರಿತು ಹೆಚ್ಚಿನ ಗಮನ ಹರಿಸಬೇಕಿದ್ದು, ನ.20ರೊಳಗೆ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳು ನಿಯಮಾನುಸಾರ ಕನ್ನಡದಲ್ಲಿ ಪ್ರದರ್ಶಿಸುವ ಬಗ್ಗೆ, ತಹಸೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಸೂಚನೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ  ಟಿ.ಎಸ್.ಶಿವರಾಜ್, ನಗರಸಭೆಯ ಅಧ್ಯಕ್ಷೆ ಎಸ್.ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ವಿ.ಶುಭಮಂಗಳ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಹಾಜರಿದ್ದರು.

ಸಮಾರಂಭಕ್ಕೂ ಮುನ್ನ ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!