ಹಿಂದೂಗಳ ತಾಳ್ಮೆ ಶರಣಾಗತಿಯಲ್ಲ, ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ: ಗೋ ಮಧುಸೂದನ್

ಬೆಂಗಳೂರು: ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ ಮಧುಸೂದನ್ ಬುಧವಾರ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ನೀವು ಟಿಪ್ಪು ಸುಲ್ತಾನ್ ನೆಲದಿಂದ ಬಂದವರು. ತಲೆ ಕತ್ತರಿಸೋದು ಗೊತ್ತು, ತಲೆ ತಗ್ಗಿಸುವುದು ಗೊತ್ತಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ‌ ಅವರು, ಹಿಂದೂಗಳು ತಾಳ್ಮೆಯಿಂದ ಇದ್ದಾರೆ, ಹಿಂದೂಗಳು ಸಹನೆಯಿಂದ ಇದ್ದಾರೆ. ಹಾಗಂತ ಹಿಂದೂಗಳು ಹೇಡಿಗಳು ಅನ್ನೋ ಮನೋಭಾವದಿಂದ ಇರಬೇಡಿ ಎಂದರು.

ನೀವು ಟಿಪ್ಪು ವಂಶಸ್ಥರಿರಬಹುದು, ಬಾಬರ್ ವಂಶಸ್ಥರಿರಬಹುದು, ಅಲ್ಲಾವುದ್ದೀನ್ ಖಿಲ್ಜಿ ವಂಶಸ್ಥರಿರಬಹುದು. ದೇಶದ ಮೇಲೆ ದಾಳಿ ಮಾಡಿದ ಯಾವುದೇ ದುರಾಕ್ರಮಿಗಳ ವಂಶಸ್ಥರಿರಬಹುದು. ಆಕ್ರಮಣ ಮಾಡಿದವರೆಲ್ಲ ನಾಶವಾಗಿದ್ದಾರೆಯೇ ವಿನಾ ನಮ್ಮ ದೇಶ ಸಾವಿರಾರು ವರ್ಷಗಳಿಂದ ಹಾಗೇ ಉಳಿದಿದೆ ಎಂದು ಹೇಳಿದರು.

ಇದು ದೇವಭೂಮಿ ಭಾರತ. ನೂರಾರು ವರ್ಷ ಗುಲಾಮಗಿರಿ ಅನುಭವಿಸಿದರೂ ಕೂಡ ಈ ದೇಶವನ್ನು ಕ್ರಿಶ್ಚಿಯನ್‌ಮಯ, ಮುಸ್ಲಿಂಮಯ ಮಾಡಲು ಆಗಿಲ್ಲ. ಶೇ 90ರಷ್ಟು ಭಾರತೀಯರು ಹಿಂದೂಗಳಾಗಿ ಉಳಿದಿದ್ದಾರೆ. ದೇಶಕ್ಕೋಸ್ಕರ ಧರ್ಮಕ್ಕೋಸ್ಕರ ತಮ್ಮ ತಲೆ ಕೊಟ್ಟಿದ್ದಾರೆ. ಇತಿಹಾಸದಲ್ಲಿ ಸಿಖ್ ಸಮುದಾಯದವರು ಇಸ್ಲಾಂ ಮುಂದೆ ಯಾರೂ ತಲೆ ತಗ್ಗಿಸಿಲ್ಲ. ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ. ಅವರನ್ನು ಕೆಣಕಬೇಡಿ. ಈ ದೇಶವನ್ನು ಉಳಿಸಿಕೊಳ್ಳೋದು ಹಿಂದೂಗಳಿಗೆ ಗೊತ್ತಿದೆ ಎಂದು ಖಾರವಾಗಿ ಹೇಳಿದರು.

ನಾವು ನಿಮ್ಮ ಯಾರ ಕೃಪೆಯಿಂದಲೂ ಬದುಕಿಲ್ಲ. ನಾವು ಭಗವಂತನ ಸೇವೆಯಲ್ಲಿ ಬದುಕಿದ್ದೇವೆ. ಇದು ಭಗವಂತ ನಿರ್ಮಾಣ ಮಾಡಿದ ದೇಶ, ಧರ್ಮ, ಸಂಸ್ಕೃತಿ ಹಾಗೂ ಸಂಸ್ಕಾರ. ಇದನ್ನು ಕಾಂಗ್ರೆಸ್‌ನವರು ಅರ್ಥ ಮಾಡಿಕೊಳ್ಳಬೇಕು. ಯಾವ ಪುಟಗೋಸಿ ಟಿಪ್ಪು ಬಗ್ಗೆ ಮಾತಾಡ್ತೀರಿ..? ಎಂದು ಪ್ರಶ್ನಿಸಿದರು. 

ಕಾಂಗ್ರೆಸ್ ನಾಚಿಕೆ ಬಿಟ್ಟಿದೆ. ಇಂತಹ ಅವಹೇಳನಕಾರಿ ಹಾಗೂ ಅಪಮಾನಕಾರಿ ಹೇಳಿಕೆ ನೀಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು ಎಂದು ಎಚ್ಚರಿಕೆ ನೀಡುವುದಾಗಿ ತಿಳಿಸಿದರು.

ಇದುವರೆಗೆ ರಾಮಮಂದಿರ ಆಗಿಲ್ಲ ಅಂತಿದ್ರಿ, ಈಗ ರಾಮ ಮಂದಿರ ಆಗಿದೆ. ಕಾಶಿಯ ವಿಶ್ವನಾಥ ಮಂದಿರ, ಮಥುರೆಯ ಕೃಷ್ಣನ ಭೂಮಿ ಮುಕ್ತವಾಗುವ ಹಂತಕ್ಕೆ ಬಂದಿದೆ. ಕರ್ನಾಟಕದಲ್ಲೇ ಟಿಪ್ಪು ಸುಲ್ತಾನ್ ಯಾರಿಗೂ ಬೇಕಾಗಿಲ್ಲ. ಟಿಪ್ಪು ಜಯಂತಿಯನ್ನು ಶ್ರೀರಂಗಪಟ್ಟಣದಲ್ಲೇ ಯಾರಾದ್ರೂ ಆಚರಣೆ ಮಾಡಿದ್ರಾ..? ಎಂದು ಅವರು ಪ್ರಶ್ನಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!