ದಿನ ಭವಿಷ್ಯ: ಮಂಗಳವಾರ , ಡಿಸೆಂಬರ್ 14 , 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆ

ಮೇಷ: ಈ ರಾಶಿಯವರಿಗೆ ಆಕಸ್ಮಿಕ ಧನಲಾಭವಾಗಲಿದೆ. ಕೆಲಸ ಕಾರ್ಯಗಳು ಸುಲಭವಾಗಿ ನಿಮ್ಮಿಚ್ಛೆಯಂತೆ ಕೈಗೂಡುವವು. ಆತ್ಮೀಯರ ಭೇಟಿ ಮತ್ತು ಸಂತೋಷದ ಸುದ್ದಿ ಕೇಳುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಆಟಪಾಠಗಳಲ್ಲಿ ಹಿನ್ನಡೆ. ವ್ಯಾಪಾರದಲ್ಲಿ ಸ್ವಲ್ಪಮಟ್ಟಿನ ನಷ್ಟ.

ವೃಷಭ: ಈ ರಾಶಿಯವರಿಗೆ ಊಹಾಪೋಹಗಳು ಬೇಡ. ಕೌಟುಂಬಿಕ ಸುಖ, ಶಾಂತಿಗಳು ನೆಲೆಸಿ ಮಾನಸಿಕ ನೆಮ್ಮದಿ. ಕಾರ್ಯ–ಕಲಾಪಗಳಲ್ಲಿ ಪ್ರಗತಿ. ಕೂಡಿಕೊಳ್ಳುವ ವ್ಯವಹಾರಗಳಲ್ಲಿ ಲಾಭ ನಿರೀಕ್ಷಿಸಬಹುದು. ದೂರ ಪ್ರಯಾಣದ ಯೋಜನೆ ರೂಪುಗೊಳ್ಳುವ ಸಾಧ್ಯತೆ.

ಮಿಥುನ: ಈ ರಾಶಿಯವರಿಗೆ ಮಾನಸಿಕ ಚಂಚಲದಿಂದ ಭಯದ ವಾತಾವರಣ ಉಂಟಾಗಲಿದೆ . ವ್ಯಾಪಾರ ವ್ಯವಹಾರಗಳಲ್ಲಿ ಲಾಭದ ಇಳಿಮುಖ. ಉದ್ಯೋಗಸ್ಥರಿಗೆ ವಿಶ್ವಾಸದ ನಿರ್ಧಾರಗಳಿಂದಾಗಿ ಮುನ್ನಡೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಪ್ರಗತಿ.

ಕಟಕ: ಈ ರಾಶಿಯ ಕಾರ್ಯಬಾಹುಳ್ಯದಿಂದಾಗಿ ಒತ್ತಡ ಹೆಚ್ಚಾಗಿ ಕೆಲಸ ಕಾರ್ಯಗಳಲ್ಲಿ ಮಂದಗತಿ. ದಾಯಾದಿ ಕಲಹ ಸಂಭವ. ವಾಹನ ಪ್ರಯಾಣದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ. ಗುರು ಹಿರಿಯರೊಡನೆ ಸಮಾಲೋಚನೆ ಸಾಧ್ಯತೆ.

ಸಿಂಹ: ಈ ರಾಶಿಯವರು ಪ್ರೀತಿ ಪಾತ್ರರೊಂದಿಗೆ ಚರ್ಚೆ. ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗದಲ್ಲಿ ಪ್ರಗತಿ. ಸಾಮಾಜಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಕುಟುಂಬ ಸದಸ್ಯರೊಂದಿಗೆ ದೇವತಾ ದರ್ಶನ.

ಕನ್ಯಾ: ಈ  ರಾಶಿಯವರ ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಲಿದ್ದು, ಸಂತಸವಾಗಲಿದೆ. ಲೇವಾದೇವಿ ಹಣಕಾಸು ವ್ಯವಹಾರಸ್ಥರಿಗೆ ಅಧಿಕ ಲಾಭ. ಉದ್ಯೋಗ ನಿಮಿತ್ತ ವಿದೇಶ ಯಾನದ ಸಾಧ್ಯತೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಅಗತ್ಯ.

ತುಲಾ: ಈ ರಾಶಿಯವರ ವ್ಯಾಪಾರ, ವ್ಯವಹಾರಗಳಲ್ಲಿ ಯಶಸ್ಸು. ಸಕಾಲದಲ್ಲಿ ಕೆಲಸ ಕಾರ್ಯಗಳು ಪೂರೈಸಿದ ಸಂತಸ. ಸಂಘ ಸಂಸ್ಥೆಗಳಿಂದ ಸಹಾಯ ಸಹಕಾರ ದೊರಕಲಿದೆ. ಹೊಸ ಹೊಸ ವ್ಯವಹಾರಗಳ ಬಗ್ಗೆ ಚಿಂತನೆ.

ವೃಶ್ಚಿಕ: ಈ ರಾಶಿಯವರಿಗೆ ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯದೇ ವ್ಯತಿರಿಕ್ತ ಪರಿಣಾಮಗಳುಂಟಾಗಬಹುದು.ಅಹಿತಕರ ಘಟನೆಗಳಿಂದಾಗಿ ವೃಥಾ ದಂಡ ತೆರಬೇಕಾದೀತು. ಲೇವಾದೇವಿ ವ್ಯವಹಾರವನ್ನು ದಿನದ ಮಟ್ಟಿಗೆ ಮುಂದೂಡಿ.

ಧನಸ್ಸು: ಈ ರಾಶಿಯವರ ನಿರೀಕ್ಷಿತ ಕೆಲಸ ಕಾರ್ಯಗಳು ಫಲ ನೀಡಿ ಸಂತಸ. ವ್ಯಾಪಾರದಲ್ಲಿ ಲಾಭ. ಆತ್ಮೀಯ ವ್ಯಕ್ತಿಗಳ ಸಂದರ್ಶನ ಸಾಧ್ಯತೆ. ದೂರದಲ್ಲಿರುವ ಮಕ್ಕಳಿಂದ ಸಹಾಯ ಹರಿದು ಬರುವ ಸಾಧ್ಯತೆ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ.

ಮಕರ: ಈ ರಾಶಿಯವರು ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷೆ ಮೀರಿದ ಲಾಭ. ಆಪ್ತೇಷ್ಟರ ಆಗಮನ ಸಾಧ್ಯತೆ. ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಸಮಾಚಾರ ಕೇಳಿ ದುಗುಡ ನಿವಾರಣೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯ.

ಕುಂಭ: ಈ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲಿದ್ದು, ಕುಟುಂಬದಲ್ಲಿ ಶಾಂತ ವಾತಾವರಣ. ವಿದ್ಯಾರ್ಥಿಗಳಿಗೆ ಆಟ–ಪಾಠಗಳಲ್ಲಿ ಹೆಚ್ಚಿನ ಪ್ರಗತಿ. ಉದ್ಯೋಗಸ್ಥರಿಗೆ ಕಚೇರಿ ಲೆಕ್ಕಪತ್ರಗಳಲ್ಲಿನ ತೊಡಕುಗಳು ನಿವಾರಣೆಯಾಗಿ ನಿರಾಳತೆ ಉಂಟಾಗುತ್ತದೆ.

ಮೀನ: ಈ ರಾಶಿಯವರು ಅನಿರೀಕ್ಷಿತ ಪ್ರಯಾಣ ಸಂಭವಿಸಿ ವೃಥಾ ಖರ್ಚಿಗೆ ನಾಂದಿಯಾಗುವ ಸಾಧ್ಯತೆಯಿದೆ. ಆತ್ಮೀಯರ ಆರೋಗ್ಯದಲ್ಲಿ ವ್ಯತ್ಯಯ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರ ಮಾತುಗಳನ್ನು ಕಡೆಗಣಿಸದಿರಿ. ಹಿತಶತ್ರುಗಳ ಭಯ.

ಮಾಸ: ಮಾರ್ಗಶಿರ ಮಾಸ

ಪಕ್ಷ:
  ಶುಕ್ಲ ಪಕ್ಷ      

ತಿಥಿ: 
ಏಕಾದಶಿ

ನಕ್ಷತ್ರ:
ಅಶ್ವಿನಿ ನಕ್ಷತ್ರ


ರಾಹುಕಾಲ: 
03:09 ರಿಂದ 04:35

ಗುಳಿಕಕಾಲ:
12:18 ರಿಂದ 01:43

ಯಮಗಂಡಕಾಲ:
09:26 ರಿಂದ 10:52


ಹೆಚ್ಚಿನ ಮಾಹಿತಿಗೆ:
ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಅವಧಿ ಮುಗಿದ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ

ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

[ccc_my_favorite_select_button post_id="118535"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!