ಸರ್ಕಾರದ ಸೌಲಭ್ಯಗಳನ್ನು ರೈತರು ಸದುಪಯೋಗಪಡಿಸಿಕೊಂಡರೆ ಕೃಷಿಯಿಂದ ಹೆಚ್ಚಿನ ಲಾಭ: ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು

ದೊಡ್ಡಬಳ್ಳಾಪುರ: ಕೃಷಿ ಯಾಂತ್ರೀಕರಣ, ಬೆಂಬಲ ಬೆಲೆಯ ಖರೀದಿ ಮೊದಲಾಗಿ  ರೈತರಿಗೆ ಸರ್ಕಾರ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಂಡರೆ ವೃತ್ತಿಪರರು ಸಂಬಳ ಪಡೆಯುವುದಕ್ಕಿಂತ ಹೆಚ್ಚಾಗಿ,  ಕೃಷಿಯಿಂದ ಲಾಭ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಲಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್ ಬಾಬು ತಿಳಿಸಿದರು.

ತಾಲೂಕಿನ ಮೆಳೇಕೋಟೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿಕ ಸಮಾಜದ ವತಿಯಿಂದ ನಡೆದ ರೈತರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎರಡು ಎಕರೆ ಭೂಮಿ ಹೊಂದಿರುವ ರೈತರು ಸಮಗ್ರ ಕೃಷಿ ಪದ್ದತಿ ಅನುಸರಿಸಿದರೆ ಆರ್ಥಕವಾಗಿ ಸದೃಢರಾಗಬಹುದು. ಇದರೊಂದಿಗೆ ಪುಷ್ಪೋದ್ಯಮಕ್ಕೂ ಸಹ ಸರ್ಕಾರ ಸಹಾಯಧನ ನೀಡುತ್ತಿದ್ದು, ಹೆಚ್ಚಿನ ಜಮೀನು ಹೊಂದಿರುವವರು ಪುಷ್ಪೋದ್ಯಮ ಮಾಡಬಹುದು. ಹನಿ ನೀರಾವರಿ, ಕೃಷಿಯಲ್ಲಿ ಆಧುನಿಕ ಪದ್ದತಿಗಳನ್ನು ರೈತರು ಅಳವಡಿಸಿಕೊಳ್ಳಬೇಕಿದೆ ಎಂದ ಅವರು ತೆಂಗಿನ ನಾರಿಗೂ ಸಹ ಹೆಚ್ಚು ಬೇಡಿಕೆ ಇದ್ದು, ರೈತರು ಇದನ್ನು ನಾಶ ಪಡಿಸದೇ, ಕೊಳ್ಳುವವರಿಗೆ ನೀಡಬೇಕಿದೆ. ತೆಂಗಿನಿಂದ 150 ರೀತಿಯ ಉತ್ಪನ್ನಗಳನ್ನು ಮಾಡಲಾಗುತ್ತಿದೆ ಎಂದರು.

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ್ ಮಾತನಾಡಿ, ಇಂದು ರೈತರ ಸ್ಥಿತಿಗತಿಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ರೈತರ ಆದಾಯ ದ್ವಿಗುಣ ಎನ್ನುವುದು ಬರೀ ಮಾತಿಗೆ ಸೀಮಿತವಾಗಿದೆ. ಕೃಷಿಯನ್ನು ಬಹುರಾಷ್ಟ್ರೀಯ ಕಂಪನಿಗಳ ವಶಕ್ಕೆ ಒಪ್ಪಿಸುವ ಬದಲಾಗಿ ಸ್ಥಳೀಯವಾಗಿ ಸ್ವದೇಶಿ ಕಂಪನಿಗಳ ಮೂಲಕ ಐತರಿಗೆ ನೆರವಾಗಬೇಕಿದೆ. ಈ ದಿಸೆಯಲ್ಲಿ ಹಾಡೋನಹಳ್ಳಿ ಅರ್ಕಾವತಿ ರೈತ ಉತ್ಪಾದಕ ಕಂಪನಿ ರೈತರಿಗೆ ವಿವಿಧ ಸೌಲಭ್ಯಗಳನ್ನು ನೀಡುವಲ್ಲಿ ಕಾರ್ಯೋನ್ಮುಖವಾಗಿದೆ ಎಂದರು.

ಪ್ರಗತಿಪರ ಕೃಷಿಕ ಕೃಷ್ಣಮೂರ್ತಿ ಮಾತನಾಡಿ, ಆಧುನಿಕತೆ ಅಳವಡಿಸಿಕೊಂಡು ಕೃಷಿ ಪದ್ದತಿ ನಡೆಸಿದಲ್ಲಿ ಯಾವ ರೈತರಿಗೂ ನಷ್ಟ ಉಂಟಾಗುವುದಿಲ್ಲ. ಅದರಲ್ಲಿಯು ಸಮಗ್ರ ಕೃಷಿ ಪದ್ದತಿ ರೈತನಿಗೆ ವರದಾನವಾಗಿದೆ ಎಂದರು.

ಸಮಾರಂಭದಲ್ಲಿ  ಪ್ರಗತಿಪರ ರೈತರಿಗೆ ಕೃಷಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಹಿಂಗಾರು ಬೆಳೆ ಸಮೀಕ್ಷೆ ಕುರಿತ ಪೋಷ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.

ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಆಂಜನ ಗೌಡ, ಮೆಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ.ಎಸ್ ಗೌರೀಶ್, ಉಪಾಧ್ಯಕ್ಷ ಮುನಿರಾಜು, ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ವಿಭಾಗದ ಅಧಿಕಾರಿ ರೂಪ, ಮಧುರೆ ಹೋಬಳಿ ಕೃಷಿ ಅಧಿಕಾರಿ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹಯ್ಯ, ಮುಖಂಡರಾದ ಜಯರಾಮಯ್ಯ, ರಾಜ್‍ಕುಮಾರ್, ಪ್ರಗತಿಪರ ರೈತ ಭಾಸ್ಕರ್ ಸೇರಿದಂತೆ ಮೆಳೇಕೋಟೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೃಷಿಕ ಸಮಾಜದ ಸದಸ್ಯರು, ರೈತರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ

[ccc_my_favorite_select_button post_id="121361"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]