ಇ-ಶ್ರಮ್ ಯೋಜನೆಯ ಬಗ್ಗೆ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಚಾಲನೆ

ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾರ್ಮಿಕ ಇಲಾಖೆ ಇವರ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗುರುವಾರ ಇ-ಶ್ರಮ್ ಯೋಜನೆ ಕುರಿತು ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ನೊಂದಣಿಯಾಗುವ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಹಾಗೂ ಇ-ಶ್ರಮ್ ಯೋಜನೆಯ ಬಗ್ಗೆ ಜಿಲ್ಲೆಯಾದ್ಯಂತ 14 ದಿವಸಗಳ ಕಾಲ ಈ ವಾಹನವು ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.

ಜಿಲ್ಲೆಯ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹೆಚ್ಚಾಗಿ ನೋಂದಾಯಿಸಿಕೊಂಡು ಗುರುತಿನ ಚೀಟಿಯನ್ನು ಪಡೆದುಕೊಳ್ಳುವ ಮೂಲಕ ಮಂಡಳಿಯಿಂದ ದೊರೆಯುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್), ಅಂತ್ಯ ಕ್ರಿಯೆ ವೆಚ್ಚ  ಹಾಗೂ ಅನುಗ್ರಹ ರಾಶಿ ಸಹಾಯ ಧನ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ ಸಹಾಯಧನ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ, ಮದುವೆ ಸಹಾಯಧನ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದರು.

ಅಲ್ಲದೇ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಇ-ಶ್ರಮ್ ಯೋಜನೆಯಡಿ ಇ.ಎಸ್.ಐ ಮತ್ತು ಪಿ.ಎಫ್ ಸದ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು  ಸಾಮಾನ್ಯ ಸೇವಾ ಕೇಂದ್ರಗಳಿಗೆ (ಸಿ.ಎಸ್‌.ಸಿ) ತೆರಳಿ ನೊಂದಾಯಿಸಿಕೊಳ್ಳಬಹುದು. ಅಥವಾ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸದರಿ ಯೋಜನೆಯಡಿ ನೋಂದಾಯಿಸಿ ಯೋಜನೆ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್. ವರಲಕ್ಷ್ಮೀ ರವರು ಮಾತನಾಡಿ, ಈ ಜಿಲ್ಲೆಯಲ್ಲಿ 43,032 ಕಟ್ಟಡ ಕಾರ್ಮಿಕರು ನೋಂದಣಿಯಾಗಿ ಗುರುತಿನ ಚೀಟಿಯನ್ನು ಪಡೆದುಕೊಂಡಿದ್ದಾರೆ. ಈ ಪೈಕಿ 11,342 ಫಲಾನುಭವಿಗಳು ವಿವಿಧ ಸೌಲಭ್ಯಗಳಡಿ ಮೊತ್ತವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಸುರಕ್ಷಾ ಭವನ, ಬೆಂಗಳೂರು ವತಿಯಿಂದ ಪಡೆದುಕೊಂಡಿರುತ್ತಾರೆ. ಈ ಪೈಕಿ ಶೈಕ್ಷಣಿಕ ಧನಸಹಾಯ 10,146 ಫಲಾನುಭವಿಗಳಿಗೆ ರೂ.8,75,56,243/-, ಅಂತ್ಯ ಸಂಸ್ಕಾರ 10 ಫಲಾನುಭವಿಗಳಿಗೆ ರೂ.40,000/-, ಹೆರಿಗೆ ಸಹಾಯಧನ 29 ಫಲಾನುಭವಿಗಳಿಗೆ ರೂ.7,75,000/-, ಪ್ರಮುಖ ವೈದ್ಯಕೀಯ ಧನಸಹಾಯ 63 ಫಲಾನುಭವಿಗಳಿಗೆ 32,16,858/-, ಮದುವೆ ಧನಸಹಾಯ 1,094 ಫಲಾನುಭವಿಗಳಿಗೆ 5,47,50,000/- ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೆಪ್ಟ್ ಮೂಲಕ ಜಮೆ ಮಾಡಲಾಗಿರುತ್ತದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಇ-ಶ್ರಮ್ ಯೋಜನೆಯಡಿ 66,740 ಅಸಂಘಟಿತ ಕಾರ್ಮಿಕರು ನೋಂದಣಿಯಾಗಿರುತ್ತಾರೆ. ಇನ್ನೂ ಹೆಚ್ಚಿನ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ನೊಂದಣಿ ಮಾಡಿಸಿ, ಆಯಾ ಸೌಲಭ್ಯಗಳಡಿ ಅರ್ಹ ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇ-ಶ್ರಮ್ ನೊಂದಣಿಯು ಉಚಿತವಾಗಿದ್ದು, ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಮತ್ತು ಇ-ಶ್ರಮ್ ಯೋಜನೆಯ ನೊಂದಣಿಗಾಗಿ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ಭೇಟಿ ಮಾಡುವುದು ಅಥವಾ ಇ-ಶ್ರಮ್ ಪೋರ್ಟಲ್ www.eshram.gov.in ನಲ್ಲಿ ಸ್ವಯಂ ನೊಂದಣಿ ಮಾಡಿಕೊಳ್ಳಬಹುದು ಹಾಗೂ ನೊಂದಾಯಿತ ಕಾರ್ಮಿಕರು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದ್ದು, ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯ ಮಾನ್ಯತೆ ಹೊಂದಿದ್ದು, ಈ ಎಲ್ಲಾ ಸೌಲಭ್ಯಗಳನ್ನು ಅರ್ಹ ಕಟ್ಟಡ ಕಾರ್ಮಿಕರು ಮತ್ತು ಅಸಂಘಟಿತ ಕಾರ್ಮಿಕರು ಸದುಪಯೋಗ ಪಡೆದುಕೊಳ್ಳುವಂತೆ  ಮನವಿ  ಮಾಡಿದರು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಕೊಠಡಿ ಸಂಖ್ಯೆ; ಜಿಎ-3, ನೆಲಮಹಡಿ. ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ಹಾಗೂ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರುಗಳ ಕಛೇರಿ ಮತ್ತು ಕಾರ್ಮಿಕ ಸಹಾಯವಾಣಿ-155214, ಇ-ಶ್ರಮ್ ಸಹಾಯವಾಣಿ-14434 ಅನ್ನು ಸಂಪರ್ಕಿಸಬಹುದು ಎಂದರು.

ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಎಂ.ಮಂಜುಳ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಡಿಸಿಎಂ ಡಿ.ಕೆ.ಶಿವಕುಮಾರ್ ಸುತ್ತ ಸುತ್ತಿದ ಸುದ್ದಿಗಳು..!

ಡಿಸಿಎಂ ಡಿ.ಕೆ.ಶಿವಕುಮಾರ್ ಸುತ್ತ ಸುತ್ತಿದ ಸುದ್ದಿಗಳು..!

ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಪವರ್ ಶೇರಿಂಗ್ ಚರ್ಚೆ ಇನ್ನು ಮುಂದುವರೆದಿದೆ. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ.

[ccc_my_favorite_select_button post_id="116785"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರದ ಪ್ರಸಿದ್ಧ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕಳವು

ದೊಡ್ಡಬಳ್ಳಾಪುರ ರಂಗಪ ಸರ್ಕಲ್ ಬಳಿಯ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ (Shirdi Sai Baba temple) ಬುಧವಾರ ರಾತ್ರಿ ಹುಂಡಿ ಕಳ್ಳತನವಾಗಿದೆ.

[ccc_my_favorite_select_button post_id="116765"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!