ದೊಡ್ಡಬಳ್ಳಾಪುರದಲ್ಲಿ ಮೇಲ್ ಮರವತ್ತೂರು ಯಾತ್ರಾತ್ರಿಗಳಿಗೆ ಉಚಿತ ಬಸ್ ವ್ಯವಸ್ಥೆ

ದೊಡ್ಡಬಳ್ಳಾಪುರ: ತಮಿಳುನಾಡಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮೇಲ್ ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳುವ ಮಾಲಾಧಾರಿಗಳ ಯಾತ್ರೆಗೆ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ನಿರ್ದೇಶಕ ಹಾಗೂ ಬಿಜಿಪಿ ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರು ಪ್ರಾಯೋಜಿಸಿರುವ ಉಚಿತ ಬಸ್‍ಗಳ ಸಂಚಾರಕ್ಕೆ ನಗರದ ಹೊರವಲಯದ ಅರ್ಕಾವತಿ ಸಮೀಪದ ಬಳಿ ಚಾಲನೆ ನೀಡಿ, ಶುಭ ಹಾರೈಸಿ ಕಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಧೀರಜ್ ಮುನಿರಾಜು, ವ್ರತಾಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಅಯ್ಯಪ್ಪ ಸ್ವಾಮಿ ಮಾಲಾಧಾರಣೆ ಹಾಗೂ ಓಂ ಶಕ್ತಿ ಮಾಲಾಧಾರಣೆಗಳು ಈ ಸಮಯದಲ್ಲಿ ಸಾಮಾನ್ಯವಾಗಿದ್ದು, ಕೆಲವು ವ್ರತಧಾರಿಗಳಿಗೆ, ಖರ್ಚು ನಿಭಾಯಿಸಲು ಸಹ ಕಷ್ಟವಾಗುವ ಸಂದರ್ಭಗಳಿವೆ. ವ್ರತಧಾರಿಗಳಿಗೆ ಅನುಕೂಲವಾಗುವ ಹಾಗೂ ಲೋಕಕಲ್ಯಾಣದ ದೃಷ್ಟಿಯಿಂದ ಇಂತಹ ವೇಳೆಯಲ್ಲಿ ಇಂದು 22 ಬಸ್‍ಗಳನ್ನು ಹಾಗೂ ಕಳೆದ 15 ದಿನಗಳಿಂದ 16 ಬಸ್‍ಗಳನ್ನು ಉಚಿತವಾಗಿ ಯಾತ್ರೆಗೆ ಕಳುಹಿಸಿದ್ದೇವೆ. 2022 ಜನವರಿ 15 ವರೆಗೆ ಯಾತ್ರೆಗೆ ತೆರಳು ಮಾಲಾಧಾರಿಗಳಿಗೆ 80 ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ಮುಂಗಡವಾಗಿ ಬುಕ್ ಮಾಡಲಾಗಿದೆ. 

ತಾಲೂಕಿನ ಓಂ ಶಕ್ತಿ ಮಾಲಾಧಾರಿಗಳ ಮೇಲ್ ಮರವತ್ತೂರು ದೇವಾಲಯಕ್ಕೆ ತೆರಳುವ ಎಲ್ಲಾ ಓಂ ಶಕ್ತಿ ಮಾಲಾಧಾರಿಗಳಿಗೆ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ನಿಸ್ವಾರ್ಥವಾಗಿ ತಾಲೂಕಿನ ಬಹುತೇಕ ಮಧ್ಯಮ ಮತ್ತು ಬಡ ವರ್ಗದ ಭಕ್ತಾಧಿಗಳಿಗೆ ಧಾರ್ಮಿಕ ಭಾವನೆಗಳಿಗೆ ಪೂರಕವಾಗಿ ನಮ್ಮ ಸಹಾಯ ಹಸ್ತವನ್ನು ನೀಡುತ್ತಿದ್ದೇವೆ ಎಂದರು. 

ಮಾಲಾಧಾರಿಗಳಿಗೆ ಅರಿಶಿಣ ಕುಂಕುಮ: ಇದೇ ಸಂದರ್ಭದಲ್ಲಿ ವೇಲ್ ಮಾವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿದ ನೂರಾರು ಮಂದಿ ಮಾಲಾಧಾರಿಗಳಿಗೆ ಅನ್ನದಾನದ ವ್ಯವಸ್ಥೆಯೊಂದಿಗೆ ಅರಿಶಿಣ ಕುಂಕುಮ- ಬಳೆ ಕಣದ ಬಟ್ಟೆ ಹಾಗೂ ಕ್ಯಾಲೆಂಡರ್‍ಗಳನ್ನು ನೀಡಿ ಯಾತ್ರೆಗೆ ಶುಭಕೋರಲಾಯಿತು.

ಯಾತ್ರೆಗೆ ಹೊರಟ ಬಸ್‍ಗಳ ಚಾಲನೆ ಕಾರ್ಯಕ್ರಮದಲ್ಲಿ ಶ್ರೀಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಪಿ.ಮುನಿರಾಜು, ರಾಜಶ್ರೀ ಕಂಫರ್ಟ್ ಮಾಲೀಕ ಪದ್ಮರಾಜ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎನ್.ಕೆ.ರಮೇಶ್, ನಗರಸಭಾ ಸದಸ್ಯರಾದ ಎಸ್.ಪದ್ಮನಾಭ್, ಬಂತಿ ವೆಂಕಟೇಶ್,  ಹಂಸಪ್ರಿಯ, ಭಾಸ್ಕರ್, ಲಕ್ಷ್ಮೀಪತಿ, ಸುಮಿತ್ರ ಆನಂದ್, ನಾಗರತ್ನ ಕೃಷ್ಣಮೂರ್ತಿ, ಬಿಜೆಪಿ ಮುಖಂಡರಾದ ವಿಶ್ವಾಸ್‍ಗೌಡ, ಕೋಳೂರು ನಾಗರಾಜು, ಡಿ.ಪಿ.ಲೋಕೇಶ್ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಓಂ ಶಕ್ತಿ ಮಾಲಾಧಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!