ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಕ್ರಮ ವಹಿಸಿ: ಡಾ.ಬಿ.ಆರ್.ಮಮತ

ಬೆಂ.ಗ್ರಾ.ಜಿಲ್ಲೆ: ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪ್ರಗತಿಯಲ್ಲಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮರ್ಪಕ ನಿರ್ವಹಣೆ ಮಾಡುವ ಮೂಲಕ ದೋಷಮುಕ್ತ ಮತದಾರರ ಪಟ್ಟಿ ಸಿದ್ಧಪಡಿಸಲು ಅಗತ್ಯ ಕ್ರಮ ವಹಿಸಬೇಕೆಂದು ಸಕಾಲ ಮಿಷನ್‌ನ ಹೆಚ್ಚುವರಿ ನಿರ್ದೇಶಕರು ಹಾಗೂ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ. ಬಿ.ಆರ್.ಮಮತ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಜನವರಿ 1, 2022 ಅನ್ನು ಅರ್ಹತಾ ದಿನಾಂಕವನ್ನು ಆಧರಿಸಿ ಈ ದಿನಾಂಕಕ್ಕೆ 18 ವರ್ಷ ಪೂರೈಸುವವರ ಹೆಸರನ್ನು ನೋಂದಣಿ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆ, ನಮೂನೆ 6, 7, 8 ಹಾಗೂ 8 ಎ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.

ಡಿಸೆಂಬರ್ 27ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು 2022ರ ಜನವರಿ 13ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಗೆ ನೋಂದಣಿ ಹಾಗೂ ತಿದ್ದುಪಡಿ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ, ಹೆಚ್ಚು ಅರ್ಜಿಗಳು ಬಾಕಿ ಉಳಿದಿದ್ದು, ಶೀಘ್ರ ವಿಲೇವಾರಿ ಮಾಡುವಂತೆ ತಿಳಿಸಿದರಲ್ಲದೆ, ಹಕ್ಕು ಮತ್ತು ಆಕ್ಷೇಪಣೆ ಹಂತದಲ್ಲಿ ಯಾವುದೇ ತರಹದ ನ್ಯೂನ್ಯತೆಗಳು ಗಮನಕ್ಕೆ ಬಂದಲ್ಲಿ, ಆಯಾ ತಾಲ್ಲೂಕಿನ ತಹಶೀಲ್ದಾರರು ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಹಾಗೂ ದೊಡ್ಡಬಳ್ಳಾಪುರ ತಹಶೀಲ್ದಾರ್‌ ಟಿ.ಎಸ್.ಶಿವರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ನಂತರ ಅರ್ಜಿ ವಿಲೇವಾರಿ ಹೆಚ್ಚಿರುವ ಹೊಸಕೋಟೆ ತಾಲ್ಲೂಕಿನ ಗಾಣಿಗರ ಪೇಟೆ ಮತ್ತು ಕಿಲಾರಿಪೇಟೆ ಹಾಗೂ ಕಡಿಮೆ ಅರ್ಜಿ ವಿಲೇವಾರಿ ಮಾಡಲಾಗಿರುವ ಅತ್ತಿಬೆಲೆ ಮತಗಟ್ಟೆ ಪ್ರದೇಶದಕ್ಕೆ ಬೆಂಗಳೂರು ಗ್ರಾಮಾಂತರ ಮತದಾರರ ಪಟ್ಟಿ ವೀಕ್ಷಕರಾದ ಡಾ.ಬಿ.ಆರ್.ಮಮತ ಅವರು ಭೇಟಿ ನೀಡಿ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ ಸ್ಪಷ್ಟನೆ

ಸಂಸತ್‌ನಲ್ಲಿ ಆಪರೇಷನ್ ಸಿಂಧೂರ ಕದನವಿರಾಮದ ಕಾವೇರಿದ ಚರ್ಚೆ: ರಾಹುಲ್ ಗಾಂಧಿ ಸವಾಲು, ಮೋದಿ

ಚಳಿಗಾಲದ ಅಧಿವೇಶನದಲ್ಲಿ ಆಪರೇಷನ್ ಸಿಂಧೂರ (Operation Sindoor), ಏಕಾಏಕಿ ಕದನ ವಿರಾಮ (ceasefire) ಘೋಷಣೆ ಕುರಿತು ತೀವ್ರ ಚರ್ಚೆಗೆ ಕಾರಣವಾಗಿತ್ತು.

[ccc_my_favorite_select_button post_id="111876"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಮತ್ತೊಂದು ಬಲಿ.!

ಸರ್ಕಾರಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಿ ಎಂದು ಎಷ್ಟೇ ಸೂಚನೆ ನೀಡಿದರು, ಕೃಷಿ ಹೊಂಡದಲ್ಲಿ (Agricultural pit) ಆಕಸ್ಮಿಕವಾಗಿ ಬಿದ್ದು ಸಾವನಪ್ಪುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಿಲ್ಲ.

[ccc_my_favorite_select_button post_id="111873"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!