ದೊಡ್ಡತುಮಕೂರು ಕೆರೆ ನೀರು ಕಲುಷಿತ: ಪರಿಹಾರ ದೊರಕದ ಹೊರತು ಹೋರಾಟ ನಿಲ್ಲದು – ಡಾ.ಆಂಜಿನಪ್ಪ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರಿನ ಕೆರೆಯಲ್ಲಿ ನಗರದ ಒಳಚರಂಡಿ ತ್ಯಾಜ್ಯ ನೀರು ಹಾಗೂ ಕೈಗಾರಿಕೆಗಳ ತ್ಯಾಜ್ಯ ನೀರು ಸೇರಿ ಕೆರೆ ನೀರು ಕಲುಷಿತವಾಗಿದ್ದು, ರಾಸಾಯನಿಕಯುಕ್ತ ನೀರು ಬೆರೆತಿರುವುದು ಪ್ರಯೋಗಾಲಯದಲ್ಲಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಮ್ಮ ಊರಿನ ಕೆರೆ ಕಲುಷಿತಗೊಳ್ಳಲು ಕಾರಣ ಹಾಗೂ ಇದಕ್ಕೆ ಪರಿಹಾರದ ಹೊರತು ಹೋರಾಟ ನಿಲ್ಲದು ಎಂದು ಗ್ರಾಮದ ಹಿರಿಯ ಮುಖಂಡರಾದ ಡಾ.ಆಂಜಿನಪ್ಪ ಸ್ಪಷ್ಟಪಡಿಸಿದ್ದಾರೆ.

ಕೆರೆ ನೀರು ಕಲುಷಿತವಾಗಲು ಒಳಚರಂಡಿ ನೀರು ಕಾರಣ ಎಂದು ಗ್ರಾಮಸ್ಥರು ಹೋರಾಟಕ್ಕೆ ಸಿದ್ದರಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ, ಸದಸ್ಯರು ಹಾಗೂ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆರೆ ಕಲುಷಿತಗೊಳ್ಳಲು ನಗರಸಭೆ ಸಂಸ್ಕರಣೆ ಮಾಡಿದ ನೀರು ಕಾರಣವಲ್ಲ ಎಂದಿದ್ದರು.

ಈ ಹಿನ್ನೆಲೆಯಲ್ಲಿ ಡಾ.ಆಂಜಿನಪ್ಪನವರು ಗ್ರಾಮಸ್ಥರ ಹೋರಾಟದ ಕುರಿತು ಸ್ಪಷ್ಟನೆ‌ ನೀಡಿದ್ದು, ಕೆರೆ ಕಲುಷಿತಗೊಂಡಿರುವುದು ಸತ್ಯವಾಗಿರುವುದು ವರದಿಯಲ್ಲಿ ಬಹಿರಂಗವಾಗಿದೆ. ಆದರೆ ನಾವು ಕಾರಣರಲ್ಲ ಎಂದು ನಗರಸಭೆಯವರಾಗಲಿ, ಕೈಗಾರಿಕಾ ಪ್ರದೇಶದವರಾಗಲಿ ಹೊಣೆಯಿಂದ ನುಣಿಚಿಕೊಳ್ಳುವುದು ಸಲ್ಲದು. ನಮ್ಮ ಹೋರಾಟ ಯಾರ ವಿರುದ್ಧವಲ್ಲ ನಮ್ಮೂರಿಗೆ ಕಲುಷಿತ ನೀರಿನಿಂದ ಉಂಟಾಗುವ ಸಮಸ್ಯೆ ತಪ್ಪಿಸುವುದು ನಮ್ಮ ಹೋರಾಟದ ಮೂಲ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಮುಂದಿನ ಹೋರಾಟದ ರೂಪುರೇಷೆ ಸಿದ್ದತೆ ಮಾಡಲಾಗುವುದು. ಕೆರೆ ನೀರು ಕಲುಷಿತವಾಗಿರುವುದರಿಂದ ಅಂತರ್ಜಲ ಮಲಿನಗೊಂಡು, ಗೋವುಗಳು ಮಾತ್ರವಲ್ಲದೆ ಮನುಷ್ಯರು ಸಹ ಚರ್ಮ ಕಾಯಿಲೆ, ಕರುಳಿನ ಕಾಯಿಲೆ, ಕ್ಯಾನ್ಸರ್ ಮುಂತಾದ ಕಾಯಿಲೆಯಿಂದ ಬಳಲುವ ಆತಂಕವಿದೆ. 

ನಮ್ಮ ಊರಿನ ಕೆರೆ ನೀರು ಶುದ್ದೀಕರಣವಾಗಲು, ಸಂಬಂಧಪಟ್ಟ ಅಧಿಕಾರಿ, ಸಚಿವರು, ಶಾಸಕರ ಗಮನಕ್ಕೆ ತಂದು ಶ್ವಾಶ್ವತ ಪರಿಹಾರಬೇಕಿದೆ. ಅಲ್ಲಿಯವರೆಗೂ ಈ ಹೋರಾಟ ನಿಲ್ಲುವುದಿಲ್ಲ. ಈ ನಿಟ್ಟಿನಲ್ಲಿ ದೊಡ್ಡತುಮಕೂರು ಕೆರೆ ಹೋರಾಟ ಸಮಿತಿಗೆ ನನ್ನ ಸಂಪೂರ್ಣ ಬೆಂಬಲ ಇರುತ್ತದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ದೊಡ್ಡಬಳ್ಳಾಪುರ: ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ..!

ಮಹಿಳೆಯೊಂದಿಗೆ ಬಂದ ಯುವಕರ ಗುಂಪೊಂದು, ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ತಂದೆ ಮತ್ತು ಮಗನ ಮೇಲೆ ಮಾರಣಾಂತಿಕ ಹಲ್ಲೆ (Assault) ನಡೆಸಿ ಪರಾರಿಯಾಗಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ನಡೆದಿದೆ.

[ccc_my_favorite_select_button post_id="117333"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]