ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ  ಪೊಲೀಸ್ ಇಲಾಖೆ, ಭಾರತ ಸೇವಾದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ಜಿಲ್ಲಾ ಮೀಸಲು ಸಶಸ್ತ್ರ ಪಡೆಯ ಕವಾಯತು ಮೈದಾನದಲ್ಲಿ ದಾವಣಗೆರೆಯ ವಿವಿಧ ಇಲಾಖೆಯ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಧ್ವಜವಂದನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ವಲಯ  ಸಂಘಟಕ ಎಂ. ಅಣ್ಣಯ್ಯರವರು ಶಿಬಿರಾರ್ಥಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಇತಿಹಾಸ ಹಾಗೂ ಧ್ವಜ ಸಂಹಿತೆಯ ಬಗ್ಗೆ, ಧ್ವಜ ಸಂರಕ್ಷಣೆಯ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ ಕಚೇರಿಗಳಲ್ಲಿ ಧ್ವಜವಂದನೆಯನ್ನು ನೇರವೇರಿಸಲು ಪೂರ್ವ ಸಿದ್ಧತೆ ಮಾಡಿಕೊಳ್ಳುವ ಕುರಿತು ಮಾಹಿತಿ ತಿಳಿಸಿದರು.

ಡಿವೈಎಸ್‍ಪಿ ಪ್ರಕಾಶ್ ರಾಷ್ಟ್ರಧ್ವಜ ಅರಳಿಸಿ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿ, ಸಿಬ್ಬಂದಿಗಳಿಗೆ ಸಾರ್ವಜನಿಕರಿಗೆ ರಾಷ್ಟ್ರಧ್ವಜದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಇರುವುದರಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಧ್ವಜವನ್ನು ಸರಿಯಾಗಿ ಕಟ್ಟಲು ಬಾರದೆ ತಲೆಕೆಳಗಾಗಿ ಹಾರಾಟ ಮಾಡಿರುವುದನ್ನು ನಾವು ಗಮನಿಸಿದ್ದೇವೆ, ಇದು ರಾಷ್ಟ್ರಧ್ವಜಕ್ಕೆ, ರಾಷ್ಟ್ರಕ್ಕೆ ಆಗುವ ಅಪಮಾನವಾಗಿದೆ. ಇಂತಹ ತಪ್ಪುಗಳನ್ನು ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಜಿಲ್ಲಾಡಳಿತವು ರಾಷ್ಟ್ರಧ್ವಜ ವಂದನೆಯ ಕುರಿತು ಶಿಬಿರಗಳನ್ನು ಆಯೋಜಿಸಲು ಮುಂದಾಗಿದೆ.

ಭಾರತ ಸೇವಾದಳವು ದಾವಣಗೆರೆಯಲ್ಲಿ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಗೆ ಸಂಬಂಧಿಸಿದಂತೆ ಪ್ರತಿವರ್ಷ ತರಬೇತಿಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲೆಯ  ನೌಕರರು, ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ವರ್ಗದವರು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಧ್ವಜವನ್ನು ಕಟ್ಟುವ ಹಾಗೂ ಇಳಿಸುವ ಬಗ್ಗೆ ಪ್ರತ್ಯಕ್ಷ ಶಿಕ್ಷಣವನ್ನು ಪಡೆದುಕೊಂಡು ತಮ್ಮ ತಮ್ಮ ಕಚೇರಿಗಳಲ್ಲಿ ಶಿಸ್ತುಬದ್ಧವಾಗಿ ರಾಷ್ಟ್ರೀಯ ಹಬ್ಬಗಳನ್ನು ಆಚರಣೆ ಮಾಡುವುದು ಉತ್ತಮ. ಇಂತಹ ಶಿಬಿರಗಳು ಇನ್ನೂ ಹೆಚ್ಚಾಗಿ ನಡೆಯಬೇಕಾಗಿದೆ ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳನ್ನು ಸಂಘಟಿಸಿಕೊಂಡು ತರಬೇತಿ ಕಾರ್ಯಾಗಾರ ಮಾಡಲಾಗುವುದು ಎಂದು ತಿಳಿಸಿದರು.

ಸಂಪನ್ಮೂಲ ಶಿಕ್ಷಕರಾದ ಟಿ.ಎಸ್.ಕುಮಾರಸ್ವಾಮಿ, ಎ.ಆರ್.ಗೋಪಾಲಪ್ಪ, ಡಾ.ಲಕ್ಷ್ಮಣ್ ರವರು ಶಿಬಿರಾರ್ಥಿಗಳ ತಂಡಗಳನ್ನು ರಚನೆ ಮಾಡಿಕೊಂಡು ಅವರಿಗೆ ರಾಷ್ಟ್ರಧ್ವಜ ಕಟ್ಟುವ ಮತ್ತು ಇಳಿಸುವ ಹಾಗೂ ಮಡಿಸುವ ಪ್ರತ್ಯಕ್ಷ ಶಿಕ್ಷಣವನ್ನು ನೀಡಿದರು. ಧ್ವಜ ಮತ್ತು ಧ್ವಜಾವಂದನೆಗೆ ಸಂಬಂಧಿಸಿದಂತೆ ಶಿಬಿರಾರ್ಥಿಗಳಲ್ಲಿದ್ದ ಅನೇಕ ಪ್ರಶ್ನೆಗಳು ಮತ್ತು ಗೊಂದಲಗಳಿಗೆ ಉತ್ತರ ಸಹ ನೀಡಿದರು.

ಶಿಬಿರದಲ್ಲಿ ದಾವಣಗೆರೆಯ ನ್ಯಾಯಾಲಯಗಳ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಆರ್ ಎಸ್‍ಐ ಚನ್ನಪ್ಪ ಪೂಜಾರ್ ರವರು  ಸ್ವಾಗತಿಸಿದರು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಪಿ.ಠಾಕೂರ್ ಕಾರ್ಯಕ್ರಮವನ್ನು ನಿರೂಪಿಸಿದರೆ, ಆರ್ ಎಸ್‍ಐ ಅಣ್ಣಿಗೇರಿ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!