ದೊಡ್ಡಬಳ್ಳಾಪುರ: ಸಚಿವರ ಭೇಟಿ ಸಂದರ್ಭದಲ್ಲಿ ಪ್ರತಿಭಟನೆ ನಡೆಯದಂತೆ ಜಾಣ್ಮೆತೋರಿದ ಅಧಿಕಾರಿಗಳು / ತಾಲೂಕು ಕಚೇರಿಯಲ್ಲಿ ದಿಢೀರ್ ಸಭೆ / ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ

ದೊಡ್ಡಬಳ್ಳಾಪುರ: ಸ್ಥಗಿತಗೊಳಿಸಿರುವ ರಾಗಿ ಖರೀದಿ ನೋಂದಣಿಯನ್ನು ಜ.31 ರಿಂದ ಆರಂಭಿಸಬೇಕು. ರಾಗಿ ಖರೀದಿ ಮಿತಿಯನ್ನು ಸಡಿಲಗೊಳಿಸಬೇಕು. ಈ ಬೇಡಿಕೆಗಳು ಈಡೇರದಿದ್ದರೆ ಜ.31 ರಿಂದ ದೇಶದಾದ್ಯಂತ ರೈತ ವಿಶ್ವಾಸ ದ್ರೋಹ ದಿನವನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿಯೇ ನಮ್ಮ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಗುರುವಾರ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರೈತ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಕನಸವಾಡಿಗೆ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ವೇಳೆ ಉಂಟಾಗಲಿದ್ದ ಪ್ರತಿಭಟನೆಯನ್ನು ತಡೆಯುವಲ್ಲಿ ಜಿಲ್ಲೆ ಮತ್ತು ತಾಲೂಕು ಅಧಿಕಾರಿಗಳು ಯಶಸ್ವಿಯಾಗಿದ್ದು, ಸಚಿವರು ಬರುವ ಮುಂಚೆಯೇ ರೈತ ಸಂಘಟನೆಗಳ ಮುಖಂಡರನ್ನು ಕರೆಸಿ ಸಭೆ ನಡೆಸಿದಲ್ಲದೆ, ಪ್ರತಿಭಟನೆ ಹೊರತು ಪಡೆಸಿ ಸಚಿವರಿಗೆ ಮನವಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಕಾರ್ಯಕ್ರಮದ ವೇಳೆ ನಡೆಯಲಿದ್ದ ಪ್ರತಿಭಟನೆಯನ್ನು ತಡೆದಿದ್ದಾರೆ.

ಈ ಕುರಿತಂತೆ ಇಂದು ನಗರದ ತಾಲೂಕು ಕಚೇರಿಯಲ್ಲಿ ನಡೆದ ಸಭೆ ನಡೆಸಿ ರೈತ ಮುಖಂಡರ ಅಹವಾಲುಗಳನ್ನು ಅಧಿಕಾರಿಗಳು ಆಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, 2021ರಲ್ಲಿ ಪಂಜಾಬ್ ರಾಜ್ಯದಲ್ಲಿ ರೂ36 ಸಾವಿರ ಕೋಟಿ ವೆಚ್ಚದಲ್ಲಿ ಗೋಧಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸರ್ಕಾರ ಖರೀದಿ ಮಾಡುವ ಮೂಲಕ ರೈತರ ನೆರವಿಗೆ ನಿಂತಿದೆ. ಆದರೆ ನಮ್ಮ ರಾಜ್ಯದಲ್ಲಿ ಕೇವಲ ರೂ400 ಕೋಟಿ ವೆಚ್ಚದಲ್ಲಿ ಮಾತ್ರ ಬೆಂಬಲ ಬೆಲೆ ಯೋಜನೆಯಲ್ಲಿ ಆಹಾರ ಧಾನ್ಯ ಖರೀದಿ ಮಾಡಲಾಗಿದೆ. ಈ ಸರ್ಕಾರಕ್ಕೆ ರೈತರ ಬಗ್ಗೆ ಗೌರವ ಇಲ್ಲದೇ ಇರುವುದಕ್ಕೆ ಇದು ಸಾಕ್ಷಿಯಾಗಿದೆ. ಮೂರನೇ ದರ್ಜೆ ಆಡಳಿತದಿಂದಾಗಿ ರೈತರು ಇಂದು ಬೀದಿಗೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.        

ರಾಜ್ಯದಲ್ಲಿನ  ಬಹುತೇಕ ಹಿರಿಯ ಅಧಿಕಾರಿಗಳಿಗೆ ರಾಗಿ ಅಂದರೆ ಯಾವ ರೀತಿಯ ಆಹಾರ ಎನ್ನುವುದೇ ತಿಳಿಯದೇ ಇರುವುದೇ ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಉತ್ತರ ಭಾರತದ ರಾಜ್ಯಗಳ ಜನರ ಪ್ರಮುಖ ಆಹಾರವಾಗಿರುವ ಗೋಧಿಯನ್ನು ಎಲ್ಲಾ ರಾಜ್ಯದ ಜನರು ಬಳಸುವಂತೆ ಮಾಡಲಾಗಿದೆ. ಉತ್ತಮ ಆರೋಗ್ಯಕ್ಕೆ ರಾಗಿಯನ್ನು ಪ್ರಮುಖ ಆಹಾರವನ್ನಾಗಿ ಬಳಸುವುದು ಮುಖ್ಯವಾಗಿದೆಯಂದು ಹಲವಾರು ತಜ್ಞ ವೈದ್ಯರು ಹೇಳುತ್ತಲೇ ಇದ್ದರು ದೇಶದ ಇತರೆ ರಾಜ್ಯಗಳಲ್ಲೂ ರಾಗಿ ಬಳಸುವಂತೆ ಮಾಡುವಲ್ಲಿಯೇ ಆಡಳಿತಗಾರರು ಸೋತಿದ್ದಾರೆ. ರಾಗಿಯನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಣೆ ಮಾಡಲು ದೇಶದ ಇತರೆ ರಾಜ್ಯಗಳಿಗು ವಿಸ್ತರಣೆಯಾಗಬೇಕು ಎಂದು ಆಗ್ರಹಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ರೈತ ಸಂಘದ ಮುಖಂಡರು ಮಾತನಾಡಿ, ರಾಗಿ ಖರೀದಿ ಮಿತಿಯನ್ನು ಸಡಿಲಮಾಡುವಂತೆ ಆಗ್ರಹಿಸಿ ನಗರದ ರಾಗಿ ಖರೀದಿ ಕೇಂದ್ರದ ಮುಂದೆ ಒಂದು ವಾರಗಳ ಕಾಲ ರಾತ್ರಿ ಹಗಲು ಧರಣಿ ನಡೆಸಿದ್ದರು ಸೌಜನ್ಯಕ್ಕಾದರು ಜಿಲ್ಲಾಧಿಕಾರಿಗಳು ರೈತರನ್ನು ಭೇಟಿ ಮಾಡಿ ಕಷ್ಟಗಳನ್ನು ವಿಚಾರ ಮಾಡಿ ಸರ್ಕಾರದ ಗಮನಕ್ಕೆ ತಂದಿಲ್ಲ. ರೈತರ ಬಗ್ಗೆ ಗೌರವ ಇಲ್ಲದ ಜಿಲ್ಲಾಧಿಕಾರಿಗಳನ್ನು ಇಲ್ಲಿಂದ ತಕ್ಷಣ ವರ್ಗಾವಣೆ ಮಾಡಬೇಕು. ಇಂದಿನ ಸಭೆಗೂ ಸಹ ಜಿಲ್ಲಾಧಿಕಾರಿಗಳು ಹಾಜರಾಗದೆ ರೈತ ಸಂಘಟನೆಗೆ ಅವಮಾನ ಮಾಡಿದ್ದಾರೆ. ರಾಗಿ ಖರೀದಿ ಮಿತಿ ಸಡಿಲ, ನೋಂದಣಿ ಆರಂಭವಾಗದ ಹೊರತು ಈಗಾಗಲೇ ನೋಂದಣಿ ಮಾಡಿಕೊಂಡಿರುವ ರೈತರಿಂದ ರಾಗಿ ಪಡೆಯಬಾರದು. ರೈತರನ್ನು ಹೊಡೆದು ಹಾಳುವ ನೀತಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ರೈತರ ಪ್ರಶ್ನೆಗಳಿಗೆ ಉತ್ತರಿಸಿದ ಉಪವಿಭಾಗಾಧಿಕಾರು ಅರುಳ್ ಕುಮಾರ್, ರಾಗಿ ಖರೀದಿಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಈಗಾಗಲೇ ಚರ್ಚಿಸಲಾಗಿದೆ. ಸರ್ಕಾರದ ಆದೇಶಗಳನ್ನು ಪಾಲಿಸುವುದಷ್ಟೇ ನಮ್ಮ ಕರ್ತವ್ಯವಾಗಿದೆ. ರಾಗಿ ಖರೀದಿ ವಿಚಾರ ಸರ್ಕಾರದ ಹಂತದಲ್ಲಿ ನಿರ್ಧಾರವಾಗಬೇಕಿದೆ. ನಮ್ಮ ಹಂತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕಿ ಗಿರಿಜಾ ಮಾತನಾಡಿ, ರಾಗಿ ಖರೀದಿ ಮಿತಿ ಸಡಿಲಿಕೆ, ನೋಂದಣಿ ಸ್ಥಗಿತ ಇಡೀ ರಾಜ್ಯದಲ್ಲಿ ಏಕ ರೀತಿಯ ನಿಯಮವಾಗಿದೆ. ಸರ್ಕಾರ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ಇನ್ಸ್ಪೆಕ್ಟರ್ ಗೋವಿಂದ,  ರೈತ ಸಂಘಟನೆಗಳ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ದೊಡ್ಡಬಳ್ಳಾಪುರ: ರಘು ದೀಕ್ಷಿತ್ ಕಾರ್ಯಕ್ರಮದ ವೇಳೆ ಕಿಡಿಗೇಡಿಗಳ ಉಪಟಳ.. ಬಾಲಕನ ಕಾಲು ಮುರಿತ..!

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ನಡೆಸಲಾಗುತ್ತಿದ್ದ ರಘು ದೀಕ್ಷಿತ್ ( Raghu Dixit) ಅವರ ಸಂಗೀತ ಸಂಜೆ ವೇಳೆ ಕಿಡಿಗೇಡಿಗಳ ಉಪಟಳದಿಂದ ಬಾಲಕ ಕಾಲು ಮುರಿದಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119672"]
ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ಕಾರು ಪಲ್ಟಿ: ಮಾಜಿ ಶಾಸಕ ಸುರೇಶ್ ಗೌಡಗೆ ಗಾಯ

ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.

[ccc_my_favorite_select_button post_id="119667"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!