ದೊಡ್ಡಬಳ್ಳಾಪುರ: ನಗರದ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಸಾರ್ವಜನಿಕರು ಸೇರಿದಂತೆ ಅಧಿಕಾರಿಗಳ ವಿಚಾರಣೆ ನಡೆಸಿದ್ದನ್ನು ಆಕ್ಷೇಪಿಸಿ ಸಾರ್ವಜನಿಕರು ವಾಗ್ವಾದ ನಡೆಸಿದ್ದಾರೆ.
ಲೋಕಯುಕ್ತ ಎಸ್ಪಿ ಪವನ್ ನೆತ್ತೂರು ನೇತೃತ್ವದಲ್ಲಿ ನಡೆದ ದಾಳಿಯ ವೇಳೆ ಕಚೇರಿಯ ಒಳಗಿದ್ದ, ಸುಮಾರು ಇಪ್ಪತ್ತು ಮಂದಿ ಸಾರ್ವಜನಿಕರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದರು.
ಈ ವೇಳೆ ಅಧಿಕಾರಿಗಳನ್ನು ಬಿಟ್ಟು ಸಾರ್ವಜನಿಕರನ್ನು ವಿಚಾರಣೆ ನಡೆಸುತ್ತಿದ್ದಾರೆಂದು ಬಿಜೆಪಿ ಮುಖಂಡ ಕೋಡಿ ನರಸಿಂಹಮೂರ್ತಿ ಹಾಗೂ ಮತ್ತಿತರರು ಆಕ್ಷೇಪಿಸಿದರು.
ರೈತರು ಹಳ್ಳಿಗಳಿಗೆ ತೆರಳಬೇಕಿದೆ. ಸಮಯವಾದರೆ ಬಸ್ಸುಗಳು ಸಿಗುವುದಿಲ್ಲವೆಂದು ಏರು ದನಿಯಲ್ಲಿ ಮಾತನಾಡಿದ್ದಾರೆ.
ಈ ವೇಳೆ ವಿಚಾರಣೆ ಪೂರ್ಣಗೊಳಿಸಿದ ಲೋಕಾಯುಕ್ತ ಅಧಿಕಾರಿಗಳು 15 ಮಂದಿ ಸಾರ್ವಜನಿಕರನ್ನು ಹೊರ ಕಳಿಸಿದ್ದಾರೆ.
ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಸೇರಿದಂತೆ ಸುಮಾರು 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

