ದೊಡ್ಡಬಳ್ಳಾಪುರ, (ನ.16): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನ.19 ರಂದು ದೇವನಹಳ್ಳಿ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ 2022-23ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಕಾರ್ಯಕ್ರಮದ ಸ್ಪರ್ಧೆಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡದಿರುವುದನ್ನು ಖಂಡಿಸಿ, ಹಾಗೂ ಕೂಡಲೇ ಕನ್ನಡ ಭಾಷೆಯನ್ನು ಸ್ಪರ್ಧೆಗೆ ಪರಿಗಣಿಸುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು, ಅಪರ ಜಿಲ್ಲಾಕಾರಿ ವಿಜಯ.ಇ.ರವಿಕುಮಾರ್ ಅವರಿಗೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಮುಖಂಡರಾದ ರಾಜಘಟ್ಟ ರವಿ, 67ನೇ ಕನ್ನಡ ರಾಜ್ಯೋತ್ಸವವನ್ನು ರಾಜ್ಯದೆಲ್ಲೆಡೆ ಆಚರಿಸುತ್ತಿರುವ ನವೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ಸರ್ಕಾರದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿನ ಸ್ಪರ್ಧೆಗಳಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ಸ್ಪರ್ಧೆಗಳಲ್ಲಿ ಜಾನಪದ ನೃತ್ಯ, ಜಾನಪದ ಗೀತೆ (ಗುಂಪು ಸ್ಪರ್ಧೆ) ಏಕಾಂಕ ನಾಟಕ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ನೃತ್ಯ, ಆಶುಭಾಷಣ ಸ್ಪರ್ಧೆಗಳಿದ್ದು, ಈ ಸ್ಪರ್ಧೆಗಳಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಶಾಸ್ತ್ರೀಯ ವಾದ್ಯಗಳು, ಶಾಸ್ತ್ರೀಯ ನೃತ್ಯ ಸ್ಪರ್ಧೆಗಳನ್ನು ಹೊರತು ಪಡಿಸಿ, ಸ್ರ್ಪಗಳು ಏಕಾಂಕ ನಾಟಕ, ಆಶುಭಾಷಣ ಸ್ಪರ್ಧೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಭಾಷೆಯಲ್ಲಿಯೇ ತಯಾರಾಗಿ ಬರಬೇಕೆಂಬ ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿಯೇ ಕನ್ನಡ ಭಾಷೆಯಲ್ಲಿ ಸ್ಪರ್ಧೆಗಳು ನಡೆಯದಿರುವುದು ದುರಂತದ ಸಂಗತಿಯಾಗಿದ್ದು, ರಾಜ್ಯ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ಕನ್ನಡ ಳಸುವಂತೆ ಮಾಡಿರುವ ಆದೇಶದ ಉಲ್ಲಂಘನೆ ಸಹ ಆಗಿರುತ್ತದೆ. ಈ ದಿಸೆಯಲ್ಲಿ ಸ್ಪರ್ಧೆಗಳಲ್ಲಿ ಹಿಂದಿ ಅಥವಾ ಇಂಗ್ಲಿಷ್ ಭಾಷೆಯನ್ನು ಕೈಬಿಟ್ಟು, ಕನ್ನಡ ಭಾಷೆಗೆ ಆದ್ಯತೆ ನೀಡಬೇಕು ಎಂದು ಮನವಿ ಸಲ್ಲಿಸಲಾಗಿದೆ. ಕನ್ನಡ ಭಾಷೆಗೆ ಆದ್ಯತೆ ನೀಡದಿದ್ದರೆ ಕಾರ್ಯಕ್ರಮದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಗಿದೆ ಎಂದು ತಿಳಿಸಿದರು.
ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ದೇವನಹಳ್ಳಿ ತಾಲೂಕು ಅಧ್ಯಕ್ಷ ಬಾಬು, ಮಾಸ್ ಮಹೇಶ್, ಅರ್ಶಿಗೌಡ, ಮುಕ್ಕೇನಹಳ್ಳಿ ರವಿ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

