ಬೆಂ.ಗ್ರಾ,ಜಿಲ್ಲೆ, (ನ.18): ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2020-21 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಬೆಳೆ ನೋಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಹಾಗೂ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆಯಾದ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.
ತಾಳೆಯಾಗದಿರುವ ಪ್ರಸ್ತಾವನೆಗಳನ್ನು ಸರ್ಕಾರದ ಆದೇಶದಂತೆ ಸಂಬಂಧಪಟ್ಟ ತಾಲ್ಲೂಕಿನ ಕೃಷಿ/ತೋಟಗಾರಿಕೆ/ಬ್ಯಾಂಕ್ ಅಧಿಕಾರಿಗಳು ಅಂತಹ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಬಜಾಜ್ ಅಲೈನ್ಸ್ ವಿಮಾ ಸಂಸ್ಥೆಗೆ ವರ್ಗಾಯಿಸಿದ್ದರು.
ದೇವನಹಳ್ಳಿ-2, ದೊಡ್ಡಬಳ್ಳಾಪುರ-12, ಹೊಸಕೋಟೆ-9, ನೆಲಮಂಗಲ-9 ಪ್ರಸ್ತಾವನೆಗಳು ಸೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 32 ಪ್ರಸ್ತಾವನೆಗಳು ತಿರಸ್ಕೃತಗೊಂಡಿರುತ್ತವೆ.
ತಿರಸ್ಕೃತಗೊಂಡ ಪ್ರಸ್ತಾವನೆಗಳ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ, ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗುವುದು, ಸಂಬಂಧಿಸಿದ ರೈತರು 15 ದಿನಗಳ ಒಳಗೆ ಅವರ ವಿಮಾ ಅರ್ಜಿ ತಿರಸ್ಕೃತವಾದುದಕ್ಕೆ ಆಕ್ಷೇಪಣೆ ಇದ್ದಲ್ಲಿ ಮರು ಪರಿಶೀಲಿಸಲು ಮನವಿ ಸಲ್ಲಿಸಬಹುದು.
ಅಂತಹ ಮನವಿಗಳನ್ನು ತಾಲ್ಲೂಕು ಮಟ್ಟದ ದೂರು ನಿವಾರಣಾ ಸಮಿತಿಯಲ್ಲಿ ಮಂಡಿಸಿ ಕೂಲಂಕಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ತಾಲ್ಲೂಕು ಮಟ್ಟದ ಸಮಿತಿಯ ನಿರ್ಣಯವನ್ನು ರೈತರು ಒಪ್ಪದಿದ್ದಲ್ಲಿ ಜಿಲ್ಲಾ ಮಟ್ಟದ ಸಮಿತಿಗೆ ಮೇಲ್ಮನವಿ ಸಲ್ಲಿಸಬಹುದೆಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಡಾ.ಎಸ್.ಎಸ್.ಲಲಿತ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

