ದೊಡ್ಡಬಳ್ಳಾಪುರದಲ್ಲಿ ಪಂಚರತ್ನ ರಥಯಾತ್ರೆ: ಇದು ಸೀಸನ್ ಒಗ್ಗಟ್ಟಲ್ಲ, ಕಾಯಂ ಒಗ್ಗಟ್ಟು – ಜೆಡಿಎಸ್ ಮುಖಂಡರು..!!

ದೊಡ್ಡಬಳ್ಳಾಪುರ, (ನ.27): ಬಣಗಳಾಗಿದ್ದ ಜೆಡಿಎಸ್ ಪಕ್ಷದ ಮುಖಂಡರು ಪಂಚರತ್ನ ರಥಯಾತ್ರೆ ಹಿನ್ನಲೆಯಲ್ಲಿ ಒಗ್ಗೂಡಿ ನಗರದ ಪ್ರವಾಸಿಮಂದಿರಲ್ಲಿ ಸಭೆ ನಡೆಸಿ, ಸುದ್ದಿಗೋಷ್ಠಿ ನಡೆಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಎಲ್ಲ ಪಕ್ಷದಲ್ಲಿ ಇರುವಂತೆ ನಮ್ಮಲ್ಲೂ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಹಜ. ತಾಲೂಕಿನ ಹಿರಿಯ ಮುಖಂಡರಾದ ಎಚ್.ಅಪ್ಪಯ್ಯಣ್ಣ ಅವರ ಮನೆಗೆ ಹೋಗಿ ಮಾತುಕತೆ ನಡೆಸಿದ್ದು, ಈಗ ಒಗ್ಗಟ್ಟಾಗಿದ್ದೇವೆ. ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಮಾಡಲಿದ್ದೇವೆ. ಇದು ಜಿಲ್ಲೆಯ ಮರ್ಯಾದೆ ಪ್ರಶ್ನೆಯಾಗಿದ್ದು, ಹಿಂದೆ 2 ಜಿಲ್ಲೆಗಳಲ್ಲಿ ನಡೆದಿರುವ ಪಂಚರತ್ನ ಯಾತ್ರೆಗಿಂತ ಭಿನ್ನವಾಗಿ ನಡೆಸಲು ಸಿದ್ದತೆ ಕೈಗೊಂಡಿದ್ದೇವೆ. 

ಹಿಂದಿನದೆಲ್ಲವನ್ನು ಮರೆತು ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಜಿಲ್ಲೆಯ ಮರ್ಯಾದೆ ಉಳಿಸಬೇಕು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಬೇಕೆಂಬ ಆಕಾಂಕ್ಷೆ ಎಲ್ಲರಿಗೂ ಇದೆ.

ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದಾಗ ಮಾಡಿರುವ ಕೆಲಸಗಳನ್ನು ಜನ ಸ್ಮರಿಸುತ್ತಿದ್ದಾರೆ. ನಮ್ಮ ಕ್ಷೇತ್ರದ ಶಕ್ತಿ ಪ್ರದರ್ಶನ, ಹಾಗೂ ಮತಗಳನ್ನು ವರಿಷ್ಟರಿಗೆ ಮನವರಿಕೆ ಮಾಡಿ ಅವರಿಗೆ ಖುಷಿ ನೀಡಿ, ಕುಮಾರಣ್ಣನ ಗೌರವ ಉಳಿಸಬೇಕು ಎಂದು ಮನವಿ ಮಾಡಿದರು.

ತಾಲೂಕಿನ ನಾಗದೇನಹಳ್ಳಿಯಲ್ಲಿ ನ.29ರಂದು ಬೆಳಿಗ್ಗೆ 9ಗಂಟೆಗೆ ರಥಯಾತ್ರೆ ಆಗಮಿಸಲಿದ್ದು, ಭವ್ಯ ಸ್ವಾಗತಕ್ಕೆ ಸಿದ್ದತೆಗಳು ನಡೆದಿವೆ. ಪಕ್ಷದ ವರಿಷ್ಟ ಎಚ್.ಡಿ.ಕುಮಾರಸ್ವಾಮಿ, ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಮೊದಲಾದ ಮುಖಂಡರು ಭಾಗವಹಿಸಲಿದ್ದಾರೆ. ನಂತರ ವಿವಿಧ ಹೋಬಳಿಗಳಲ್ಲಿ ಸಂಚರಿಸಿ, ಮಧುರೆ ಹೋಬಳಿಯ ಕನಸವಾಡಿಯಲ್ಲಿ ರಾತ್ರಿ ವಾಸ್ತವ್ಯ ನಡೆಯಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಮಾತನಾಡಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತದಲ್ಲಿ ಯಾರೇ ಅಭ್ಯರ್ಥಿಯಾದರೂ ಅವರನ್ನು ಗೆಲ್ಲಿಸಬೇಕೆಂಬ ಸೂಚನೆ ಹಿನ್ನೆಲೆಯಲ್ಲಿ ಎಲ್ಲರು ಒಗ್ಗಟ್ಟಾಗಿದ್ದೇವೆ. ಮಾಜಿ ಸಿಎಂ ಕುಮಾರಣ್ಣ ಅವರು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ, ಅಂತಿಮವಾಗಿ ಕನಸವಾಡಿಯಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಮಾತನಾಡಿ, ಜೆಡಿಎಸ್ ಅಧಿಕಾರಕ್ಕೆ ಬಂದರೆ ಸಾಮಾನ್ಯ ಕಾರ್ಯಕರ್ತರಿಗೆ ಅಧಿಕಾರ ಸಿಗುವುದಿಲ್ಲ ಎಂಬ ಕಪ್ಪುಚುಕ್ಕೆಯನ್ನು ಹೋಗಲಾಡಿಸಬೇಕು. ಎಲ್ಲಾ ಪಕ್ಷಗಳಲ್ಲಿಯೂ ಗೊಂದಲಗಳಿರುವುದು ಸಹಜ. ಕಾಂಗ್ರೆಸ್, ಬಿಜೆಪಿಯಲ್ಲಿ ಇದರ ನಾಲ್ಕರಷ್ಟಿವೆ. ಪಂಚರತ್ನ ಯಾತ್ರೆ ಐತಿಹಾಸಿಕ ಕಾರ್ಯಕ್ರಮ. ತಾಲೂಕು ಹಾಗೂ ರಾಜ್ಯದಲ್ಲಿ ಜೆಡಿಎಸ್ ದೀಪವಿದ್ದಂತೆ. ಈ ದೀಪದಿಂದ ಬೆಳಕನ್ನಷ್ಟೇ ಪಡೆದು ಬೆಂಕಿಯನ್ನು ಬಿಡಬೇಕು.

ಎಲ್ಲಾ ಪಕ್ಷದಲ್ಲಿರುವಂತೆ ನಮ್ಮಲ್ಲೂ ಸಣ್ಣ ಪುಟ್ಟ ಸಮಸ್ಯೆ, ಗೊಂದಲಗಳಿವೆ. ನಮ್ಮಲ್ಲಿ ಸಮಸ್ಯೆ ಬಗೆಹರಿಸಲು ಬೆಂಗಳೂರಿನಲ್ಲಿಯೇ ಹೈಕಮಾಂಡ್ ಇದೆ. ಆದರೆ, ರಾಷ್ಟ್ರೀಯ ಪಕ್ಷಗಳು ಪ್ರತಿ ವಿಚಾರಕ್ಕೂ ದೆಹಲಿಗೆ ಓಡಬೇಕು. ಇದು ನಮ್ಮ ಪ್ರಾದೇಶಿಕ ಪಕ್ಷದ ಬಲ ಎಂದು ಅಭಿಪ್ರಾಯಪಟ್ಟರು. ತಾಲೂಕಿನ ಐದೂ ಹೋಬಳಿಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು. ಪಂಚರತ್ನ ಯಾತ್ರೆಗೆ ಎಲ್ಲರೂ ಸ್ವಯಂಪ್ರೇರಿತರಾಗಿ ಭಾಗವಹಿಸಿ ಪಕ್ಷದ ಗೌರವ ಉಳಿಸಬೇಕು. ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ.ಎಚ್.ಜಿ.ವಿಜಯ ಕುಮಾರ್ ಮಾತನಾಡಿ, ಪಂಚರತ್ನ ರಥಯಾತ್ರೆ ನೆರೆಯ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಭೂತಪೂರ್ವವಾಗಿ ನೆರವೇರಿದೆ. ಶಿಕ್ಷಣಕ್ಕೆ ಒತ್ತು, ವಸತಿ, ಆರೋಗ್ಯ, ಯುವಕರಿಗೆ ಉದ್ಯೋಗ, ಸಬಲೀಕರಣಗಳನ್ನು ಈಡೇರಿಸುವ ಗುರಿ ಹೊಂದಿರುವ ಈ ಯಾತ್ರೆಯಲ್ಲಿ ಜನರ ಬಳಿಗೇ ಹೋಗಿ ಅವರ ಸಮಸ್ಯೆಗಳನ್ನು ಆಲಿಸಿ, ಮುಂದೆ ಅದಕ್ಕೆ ಪರಿಹಾರೋಪಾಯಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಈ ದಿಸೆಯಲ್ಲಿ ಜನರ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದರು.

ಇದು ಸೀಸನ್ ಒಗ್ಗಟ್ಟಲ್ಲ, ಕಾಯಂ ಒಗ್ಗಟ್ಟು:  ಈ ಹಿಂದೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ನಂತರ ದೂರವಾಗಿದ್ದ, ಅಪ್ಪಯ್ಯಣ್ಣ ಹಾಗೂ ಮುನೇಗೌಡರ ಬಣಗಳು ಈಗ ಮತ್ತೆ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಕಾರ್ಯಕ್ರಮದ ನಿಮಿತ್ತ ಮಾತ್ರವೇ ಎಂದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖಂಡರು ಇದು ಚುನಾವಣೆ ಸೀಸನ್ ಒಗ್ಗಟ್ಟಲ್ಲ. ಕಾಯಂ ಒಗ್ಗಟ್ಟಾಗಿರಲಿದೆ ಎಂದು ಹೇಳಿದರು. ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಶಾಸಕರನ್ನು ಗೆಲ್ಲಿಸುವತನಕ ಈ ಒಗ್ಗಟ್ಟು ಶಾಶ್ವತವಾಗಿರಲಿದೆ ಎಂದರು.

ಸುದ್ಧಿಗೋಷ್ಟಿಯಲ್ಲಿ ಜೆಡಿಎಸ್ ತಾಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರಸಭಾ ಸದಸ್ಯರಾದ ಟಿ.ಎನ್.ಪ್ರಭುದೇವ್, ಮಲ್ಲೇಶ್, ಮುಖಂಡರಾದ ಹುಸ್ಕೂರು ಆನಂದ್, ಟಿಎಪಿಎಂಸಿಎಸ್ ನಿರ್ದೇಶಕರಾದ ಲಕ್ಷ್ಮೀನಾರಾಯಣ, ಆನಂದ್, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]