ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ: ಸಿಎಂ ಬೊಮ್ಮಾಯಿ

ಬೆಂಗಳೂರು, (ಡಿ.06): ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಾಬಾ ಸಾಹೇಬ್ ಡಾ:ಬಿ.ಆರ್.ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. 

ಜನ ಇಂದು ಸುಶಾನ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು. 

ಚುನಾವಣಾ ದೃಷ್ಟಿಕೋನವಿಲ್ಲ: ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ. ಅಥವಾ ವಿವಾದ  ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ  ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

ಇಂದಿನ ಸವಾಲುಗಳನ್ನು ಎದುರಿಸಲು  ಸಂವಿಧಾನದಲ್ಲಿ  ಪರಿಹಾರವಿದೆ: ಇಂದಿನ ಸವಾಲುಗಳನ್ನು ಎದುರಿಸಲು ಸರ್ಕಾರ ಸಂವಿಧಾನದ ಆಶ್ರಯದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ  ನಮ್ಮ ಸರ್ಕಾರ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ  ತಿಳಿಸಿದರು.

ಅಂಬೇಡ್ಕರ್ ಅವರು ಸಂವಿಧಾನದ ಜೀವಂತಿಕೆಗೆ ಬದಲಾದ ಕಾಲದ ಸಮಸ್ಯೆ ಹಾಗೂ ಸವಾಲುಗಳನ್ನು ಎದುರಿಸಲು ಸಂವಿಧಾನದಲ್ಲಿ ತಿದ್ದುಪಡಿ ತರುವ ಆಯಾಮ ನೀಡಿರುವುದು ಎಂಥಾ ಬದಲಾದ ಕಾಲಕ್ಕೂ ಸ್ಪಂದಿಸುವಂಥದ್ದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತಿಗೆ ಪ್ರಜಾಪ್ರಭುತ್ವ ಹೇಗೆ ಯಶಸ್ವಿಯಾಗಬಹುದು ಎಂದು ತೋರಿಸಿದವರು. ಹಲವಾರು ಭಾಷೆ, ಜಾತಿ, ಪ್ರಾಂತ್ಯಗಳಿಂದ ಕೂಡಿದ ಭಾರತದಲ್ಲಿ ಒಂದು ಸಂವಿಧಾನದಿಂದ ಒಂದು ಮಾಡಿ ಎಲ್ಲರ ಭಾವನೆಗಳನ್ನು ಹೆಣೆದು ಅಖಂಡ ಭಾರತ ದೇಶವನ್ನು ರೂಪಿಸುವ ಜೊತೆಗೆ ದೀರ್ಘಕಾಲ ಪ್ರಜಾಪ್ರಭುತ್ವದ ಜೀವಂತಿಕೆಗೆ ನಾಂದಿ ಹಾಡಿದ್ದಾರೆ ಎಂದರು. 

ಸಂವಿಧಾನ ಇಲ್ಲದಿದ್ದಿದ್ದರೆ ಏನಾಗುತ್ತಿತ್ತು ಎಂದು ಊಹಿಸಲೂ ಸಾಧ್ಯವಿಲ್ಲ. ಹಲವಾರು ದೇಶಗಳು ಪ್ರಜಾಪ್ರಭುತ್ವದ ಪ್ರಯೋಗದಲ್ಲಿ ಎಲ್ಲಿ ಯಶಸ್ವಿಯಾಗಿಲ್ಲವೋ, ಅಲ್ಲೇ ಭಾರತ ಯಶಸ್ವಿಯಾಗಲು ಕಾರಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರು ಮಾಡಿರುವ ಕಾರ್ಯ ಕಾಲಕಾಲಕ್ಕೆ ಪ್ರಸ್ತುತ ಹಾಗೂ ಶಾಶ್ವತವಾಗುತ್ತಿದೆ. ನಿಜವಾದ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಸಂವಿಧಾನದ ಅಶಯಗಳಾದ, ಸಮಾನತೆ, ಏಕತೆ, ಒಕ್ಕೂಟ ವ್ಯವಸ್ಥೆ, ಭ್ರಾತೃತ್ವ, ಸಮಾನತೆಯ ವಿಚಾರ ಗಳಲ್ಲಿ ಅತ್ಯಂತ ಮಾನವೀಯ ವಿಚಾರಗಳನ್ನು ಅಳವಡಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಅವರ ಬದುಕಿನ ನೋವು, ಅಪಮಾನದ ಅನುಭವಗಳನ್ನು ಇತರರು ಅನುಭವಿಸಬಾರದು ಎಂದು ಸಂವಿಧಾನದ ರಕ್ಷಣೆ ಯನ್ನು ತುಳಿತಕ್ಕೆ ಹಾಗೂ ನಿಂದನೆಗೆ ಒಳಗಾದ ವರ್ಗಕ್ಕೆ ರಕ್ಷಣೆ ನೀಡುವ  ಮೂಲಕ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆ, ಆರ್ಥಿಕತೆಯಲ್ಲಿ ಸಮಾನತೆಯ ಬೆಳವಣಿಗೆಗೆ ಅವರು ಮಹತ್ವ ನೀಡಿದ್ದರು ಎಂದರು. 

ಹೋರಾಟದ ಕಲ್ಪನೆ: ಶಿಕ್ಷಣ, ಸಂಘಟನೆ, ಹೋರಾಟ ಎಂಬ ಘೋಷವಾಕ್ಯದಿಂದ ಜನರ ಜಾಗೃತಿ , ಬುದ್ದಿವಂತರನ್ನಾಗಿಸುವುದು ಹಾಗು ಹೋರಾಟದ ಕಲ್ಪನೆ ನೀಡಿದ್ದಾರೆ. ನಿಜವಾಗಿಯೂ ನಾವೆಲ್ಲರೂ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯಭಾಗ್ಯ ಎಂದರು. 

ಸಂವಿಧಾನದ ಆಶಯಗಳನ್ನು ಈಡೇರಿಸಲು ಬದ್ಧ: ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಈಡೇರಿಸಲು ಆಡಳಿತ, ಆಡಳಿತ ವರ್ಗ, ಸಮಾಜ ಎಲ್ಲರೂ ಸಂಕಲ್ಪ ಮಾಡಿ ಸಿದ್ಧಿಸಿಕೊಳ್ಳುವ  ಕೆಲಸ ಮಾಡಬೇಕು. 

ಸಾಮಾಜಿಕ ನ್ಯಾಯ: ಸಮಾನತೆ, ಸಾಮಾಜಿಕ ನ್ಯಾಯ ಮಾತಿನಿಂದಾಗುವುದಿಲ್ಲ  ಎನ್ನುವುದು ನಮ್ಮ ನಂಬಿಕೆ. ಇವು ಭಾಷಣಗಳ ಸರಕಾಗಬಾರದು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅದನ್ನು ಸಂವಿಧಾನದಲ್ಲಿ ಅಳವಡಿಸಿದ್ದರು.  ಸಾಮಾಜಿಕ ಸಮಾನತೆ ತರಲು, ಆರ್ಥಿಕವಾಗಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಾಗೂ ಎಲ್ಲಾ ಆಯಾಮಗಳಲ್ಲಿ ಅವರಿಗೆ ಮುಕ್ತ ಅವಕಾಶ ನೀಡಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದರು. 

ಮೀಸಲಾತಿ ಹೆಚ್ಚಳ: ಕ್ರಾಂತಿಕಾರಿ ನಿರ್ಧಾರ: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಭವಿಷ್ಯದಲ್ಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗ ದಲ್ಲಿ ಶಕ್ತಿಯನ್ನು ತುಂಬುವ ಕೆಲಸ ಆಗಲಿದೆ. 29 ಸಾವಿರ ಕೋಟಿ ರೂ.ಗಳನ್ನು ಎಸ್.ಸಿ.ಎಸ್. ಪಿ/ ಟಿ ಎಸ್.ಪಿ ಅನುದಾನದಲ್ಲಿ ಮೀಸಲಿರಿಸಲಾಗಿದೆ. ಶಿಕ್ಷಣ ಕ್ಕೆ ಒಟ್ಟು ಕೊಟ್ಟು ನೂರು ಅಂಬೇಡ್ಕರ್ ಹಾಸ್ಟೆಲ್ ಗಳನ್ನು, 55 ಕನಕದಾಸ ಹಾಸ್ಟೆಲ್ ಹಾಗೂ 5 ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಮೈಸೂರು, ಧಾರವಾಡ, ಮಂಗಳೂರು, ಬೆಂಗಳೂರು, ಕಲಬುರಾಗಿಯಲ್ಲಿ ಮೆಗಾ ಹಾಸ್ಟೆಲ್ ನಿರ್ಮಾಣವಾಗುತ್ತಿದೆ. ಉದ್ಯೋಗದಲ್ಲಿರುವ ಹೆಣ್ಣು ಮಕ್ಕಳಿಗೆ ಹಾಸ್ಟೆಲ್, 75 ಯೂನಿಟ್ ವರೆಗೂ ಉಚಿತ ವಿದ್ಯುತ್ ಸರಬರಾಜು, ಗೃಹ ನಿರ್ಮಾಣ ಕ್ಕೆ 2 ಲಕ್ಷ ರೂಗಳ ಸಹಾಯಧನ, ಭೂಒಡೆತನ ಯೋಜನೀಡಿ 15 ಲಕ್ಷದಿಂದ 20 ಲಕ್ಷಕ್ಕೆ ಅನುದಾನ ಹೆಚ್ಚಿಸಲಾಗಿದೆ.ಹಾಸ್ಟೆಲ್ ಗಳಿಗೆ ಶುಲ್ಕ, ಉದ್ಯೋಗಕ್ಕೆ ವಿಶೇಷ ಕಾರ್ಯಕ್ರಮ ರೂಪಿಸಿದೆ.ಅಂಬೇಡ್ಕರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ 10 ಸ್ಥಳಗಳನ್ನು ಅಭಿವೃದ್ಧಿ ಪಡಿಸಲು 10 ಕೋಟಿ ರೂ.ಗಳನ್ನು ಒದಗಿಸಿದ್ದು ಕಾರ್ಯಕ್ರಮ ಪ್ರಾರಂಭವಾಗಿದೆ. ವಿಕಾಸಸೌಧದ ಮುಂಭಾಗದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಫೂರ್ತಿ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು, 50 ಕೋಟಿ ಬಿಡುಗಡೆಯಾಗಿದೆ ಎಂದರು.

 ಸಮಗ್ರ ಅಭಿವೃದ್ಧಿಯ ಕಲ್ಪನೆಯಲ್ಲಿ ಕೆಲಸಗಳನ್ನು ಮಾಡಲಾಗುತ್ತಿದೆ. ಬರುವ ದಿನಗಳಲ್ಲಿ ಪರಿಶಿಷ್ಟರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಪ್ರಬಲರಾಗಿ, ಸಬಲೀಕರಣ ಹೊಂದಿ ಸ್ವಾವಲಂಬಿ, ಸ್ವಾಭಿಮಾನದ ಬದುಕು ನಡೆಸಬೇಕೆನ್ನುವುದು ನಮ್ಮ ಆಶಯ ಎಂದರು.

ಆತ್ಮಾವಲೋಕನ ಅಗತ್ಯ: ಇಂದು ಆತ್ಮಾವಲೋಕನ ಮಾಡಿಕೊಂಡು, ನಡೆದುಬಂದ ದಾರಿಯ ಬಗ್ಗೆ ವಿಚಾರ ಮಾಡುವ ದಿನ ಪರಿವರ್ತನೆ ನಮ್ಮಿಂದಲೇ ಪ್ರಾರಂಭವಾಗಬೇಕು. ಎಲ್ಲರೂ ಬಡಜನರಿಗೆ, ದೀನದಲಿತರಿಗೆ ಯಾವ ರೀತಿಯ ಕೆಲಸ ಮಾಡಬೇಕೆಂದು ಆತ್ಮಾವಲೋಕನ. ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಜನಕ್ಕೆ ನ್ಯಾಯ ನೀಡಲು ಸಂಕಲ್ಪ ಮಾಡಬೇಕು. ಅದನ್ನು ಸಿದ್ಧಿಸಿಕೊಂಡು ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಸರ್ಕಾರ ಮಾಡಲಿದೆ  ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]