ದೊಡ್ಡಬಳ್ಳಾಪುರ, (ಜುಲೈ.29); ಇಲ್ಲಿನ ನಂದಿ ಗಿರಿಪ್ರದಕ್ಷಿಣೆ ಸೇವಾ ಸಮಿತಿಯು ಪ್ರತಿ ವರ್ಷ ಆಷಾಢ ಮಾಸದ ಸೋಮವಾರದಂದು ನಡೆಯುವ ನಂದಿ ಗಿರಿ ಪ್ರದಕ್ಷಿಣೆಗೆ ಇಂದು ಚಾಲನೆ ನೀಡಲಾಗಿದ್ದು, ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
ನಂದಿ ಗ್ರಾಮದ ಭೋಗ ನಂದೀಶ್ವರ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ 84ನೇ ವರ್ಷದ ಗಿರಿ ಪ್ರದಕ್ಷಿಣೆ ಸೋಮವಾರ ಬೆಳಗ್ಗೆ 6.30ಕ್ಕೆ ಚಾಲನೆ ನೀಡಲಾಯಿತು.
ಕುಡುವತಿ ಕ್ರಾಸ್, ಕಾರಹಳ್ಳಿ ಕ್ರಾಸ್, ಕಣಿವೇಪುರ, ನಂದಿ ಬೆಟ್ಟದ ಕ್ರಾಸ್, ಹೆಗ್ಗಡಿಹಳ್ಳಿ ಗಾಂಧಿಪುರ, ಕಣಿವೆ ಬಸವಣ್ಣ ಸುಲ್ತಾನ್ ಪೇಟೆ ಮಾರ್ಗವಾಗಿ ದೇವಾಲಯ ತಲುಪುತ್ತದೆ. ಸುಮಾರು 16 ಕಿಮೀ ಸುತ್ತಳತೆಯ ಗಿರಿಯನ್ನು ಪ್ರದಕ್ಷಿಣೆ ಹಾಕಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಅವರು, ಪ್ರದಕ್ಷಿಣೆಯಲ್ಲಿ ಭಾಗಿಯಾಗಿರುವ ಭಕ್ತರಿಗೆ ಕಣಿವೆಪುರ ಮುನೇಶ್ವರ ದೇವಾಲಯದ ಬಳಿ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದರು.
ಈ ವೇಳೆ ಜೆಡಿಎಸ್ ಯುವ ಘಟಕದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸುನೀಲ್ ಕುಮಾರ್ ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….