Landslide; ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, (ಆಗಸ್ಟ್.03); ಇಲ್ಲಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಭೂಕುಸಿತಗಳಲ್ಲಿ ಮೃತಪಟ್ಟವರ ಸಂಖ್ಯೆ 344ರ ಗಡಿ ದಾಟಿದೆ. 

ಘಟನೆಯಲ್ಲಿ 300 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವುದರಿಂದ ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಿರಂತರ ಮಳೆಯಿಂದಾಗಿ ಗುರುವಾರ ಸಂಜೆ 4 ಗಂಟೆಯವರೆಗೆ ಮುಂದುವರೆಯಬೇಕಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗಿತ್ತು. ಈಗ ಮತ್ತೆ ಆರಂಭಿಸಿದ್ದು, ಪರಿಹಾರ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಚರಣೆಯನ್ನು ಮತ್ತಷ್ಟು ದಿನಕ್ಕೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬದುಕುಳಿದವರನ್ನು ಹುಡುಕಲು ಡ್ರೋನ್; ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಬದುಕುಳಿದವರನ್ನು ಹುಡುಕಲು ನಿರಂತರ ಪ್ರಯತ್ನ ಮುಂದುವರಿದಿದ್ದು, ಡ್ರೋನ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

ಚಾಲಿಯಾರ್ ನದಿಯ ಸುತ್ತಮುತ್ತಲಿನ ಎಂಟು ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಮತ್ತು ಈಜು ಪರಿಣಿತ ಸ್ಥಳೀಯರು ಕೂಡ ಶೋಧ ಕಾರ್ಯ ನಡೆಸುತ್ತಿದ್ದು, ಹೆಲಿಕಾಪ್ಟರ್ ಬಳಸಿ ಶೋಧ ನಡೆಸಲಾಗುತ್ತಿದೆ. 

ಈ ಭೂಕುಸಿತವು ಮನುಷ್ಯರಷ್ಟೇ ಅಲ್ಲ, ಮೆಪ್ಪಾಡಿಯಲ್ಲಿ ಬದುಕುಳಿದಿರುವ ಸಾಕುಪ್ರಾಣಿಗಳನ್ನು ಕೂಡ ಸಂಕಷ್ಟಕ್ಕೆ ದೂಡಿದೆ. ಅವುಗಳಿಗೆ ಆಹಾರ ಒದಗಿಸುವುದು ಸಮಸ್ಯೆಯಾಗಿದೆ. ನಿನ್ನೆ ಚೂರಲ್‌ಮಲಾದಲ್ಲಿರುವ ವನರಾಣಿ ಎಸ್ಟೇಟ್‌ನಲ್ಲಿ ಪಶುಸಂಗೋಪನಾ ಇಲಾಖೆಯು ಜಾನುವಾರುಗಳಿಗೆ ಆಹಾರ ನೀಡಿದೆ.

ಕರ್ನಾಟಕದಿಂದ ನೂರು ಮನೆ ನಿರ್ಮಾಣ; ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು.

ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು.

ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]