ದೊಡ್ಡಬಳ್ಳಾಪುರ, (ಆಗಸ್ಟ್.07); “ಕರ್ನಾಟಕ ಸಂಭ್ರಮ – 50” ರ ಪ್ರಯುಕ್ತ ಕನ್ನಡಿಗರ ಅಭಿಮಾನದ ಸಂಕೇತವಾದ ಕನ್ನಡ ಜ್ಯೋತಿ ರಥ ಯಾತ್ರೆ ತಾಲೂಕಿನಲ್ಲಿ ವಿಜೃಂಭಣೆಯೊಂದಿಗೆ ಸಾಗುತ್ತಿದೆ.
ಇಂದು ಬೆಳಗ್ಗೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಂ.ಎಸ್.ವಿ. ಪಬ್ಲಿಕ್ ಶಾಲೆಯ ಬಳಿ ಬಂದ ರಥ ಯಾತ್ರೆಗೆ ಶಾಲಾ ಮಕ್ಕಳು ಸಂಭ್ರಮದಿಂದ ಸ್ವಾಗತಿಸಿದರು.
ಕನ್ನಡ ಅಭಿಮಾನದ ಘೋಷಣೆಗಳೊಂದಿಗೆ ರಸ್ತೆಯ ಇಕ್ಕೆಲಗಳಲ್ಲಿ ನಿಂತ ಮಕ್ಕಳು ಕನ್ನಡ ನಾಡು, ನುಡಿಗಾಗಿ ಶ್ರಮಿಸಿದ ವಿವಿಧ ಕವಿಗಳ, ವಚನಕಾರರ ಹಾಗೂ ದಾಸರೇತರ ಭಾವಚಿತ್ರದೊಂದಿಗೆ, ರಥಯಾತ್ರೆಗೆ ಪುಷ್ಪಾರ್ಚನೆ ಮಾಡಿದರು.
ಈ ವೇಳೆ ಶಾಲೆಯ ಉಪಾಧ್ಯಕ್ಷ ಸ್ವರೂಪ್ ಎಸ್., ಆಡಳಿತಾಧಿಕಾರಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ.ಬಿ.ವಿ., ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ ಹಾಗೂ ಶಿಕ್ಷಕ ಬಳಗ, ಮತ್ತು ಮಕ್ಕಳು ಕೂಡಿ ಸಂಭ್ರಮ, ಸಡಗರದಿಂದ ರಥಕ್ಕೆ ಪೂಜೆ ಸಲ್ಲಿಸಿ, ಸ್ವಾಗತ ಕೋರಿದರು.
ಕನ್ನಡಕ್ಕಾಗಿ ಕೈ ಎತ್ತು, ನಿನ್ನ ಕೈ ಕಲ್ಪವೃಕ್ಷವಾಗುತ್ತದೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ.. ಹೀಗೆ ವಿವಿಧ ಘೋಷಣೆಗಳೊಂದಿಗೆ ಕನ್ನಡ ಜ್ಯೋತಿ ರಥಯಾತ್ರೆಯನ್ನು ಬೀಳ್ಕೊಡಲಾಯಿತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….