ದೊಡ್ಡಬಳ್ಳಾಪುರ, (ಆಗಸ್ಟ್. 10); ಪ್ರಥಮ ಶ್ರಾವಣ ಶನಿವಾರ ಅಂಗವಾಗಿ ತಾಲೂಕಿನ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿದ್ದು, ಎಲ್ಲಾ ದೇವಾಲಯಗಳಲ್ಲೂ ಭಕ್ತ ಸಮೂಹ ಸಾಲುಗಟ್ಟಿ ನಿಂತಿದ್ದುದು ಕಂಡು ಬಂತು.
ತಾಲೂಕಿನ ಇತಿಹಾಸ ಪ್ರಸಿದ್ಧ ಮಧುರೆ ಶ್ರೀ ಶನಿಮಹಾತ್ಮ ದೇವಾಲಯದಲ್ಲಿ ಪ್ರಥಮ ಶ್ರಾವಣ ಶನಿವಾರದ ಅಂಗವಾಗಿ ದೇವಾಲಯವನ್ನು ಹೂಗಳಿಂದ ಅಲಂಕರಿಸಲಾಗಿದ್ದು, ಸ್ವಾಮಿಗೆ ವಿಶೇಷ ಅಲಂಕಾರ ಮಾಡಿದ್ದರು.
ಭಕ್ತರು ಬೆಳಗ್ಗೆ 5ಗಂಟೆಯಿಂದಲೇ ಮೊದಲ ಶ್ರಾವಣ ಶನಿವಾರದ ಪೂಜೆಗೆ ಬರುತ್ತಿದ್ದು ವಿಶೇಷ ಪೂಜೆ, ಪ್ರಸಾದ ವಿನಿಯೋಗ ನಡೆಸಲಾಗುತ್ತಿದೆ. ದೇವಾಲಯಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ಖಾಸ್ಬಾಗ್ನ ರಥಸಪ್ತಮಿ ಶನೇಶ್ವರ ದೇವಾಲಯದಲ್ಲಿ ಹೂಗಳಿಂದ ಸಿಂಗಾರಗೊಂಡಿದ್ದು, ಸ್ವಾಮಿಗೂ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ.
ತಾಲೂಕಿನ ಸಾಸಲು ಹೋಬಳಿಯ ಗುಟ್ಟೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಪ್ರಥಮ ಶ್ರಾವಣ ಶನಿವಾರದ ಅಂಗವಾಗಿ, ದೇವರಿಗೆ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಭಕ್ತರು ಸಾಲು ಗಟ್ಟಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಉಳಿದಂತೆ ತಾಲೂಕಿನ ಅರಳುಮಲ್ಲಿಗೆಯ ಲಕ್ಷ್ಮೀ ಚೆನ್ನಕೇಶವಸ್ವಾಮಿ ದೇವಾಲಯ, ನಗರದ ನೆಲದಾಂಜನೇಯಸ್ವಾಮಿ ದೇವಾಲಯ, ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ವೆಂಕಟರಮಣಸ್ವಾಮಿ ದೇವಾಲಯ, ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯು, ಹೊಸಹಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ಮಲ್ಲೋಹಳ್ಲಿ ರಂಗನಾಥಸ್ವಾಮಿ ದೇವಾಲಯ ಮೊದಲಾದ ಕಡೆ ಶ್ರಾವಣ ಮಾಸದ ಅಂಗವಾಗಿ ಬೆಳಗಿನ ಜಾವದಿಂದಲೇ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….