ಹರಿತಲೇಖನಿ ದಿನಕ್ಕೊಂದು ಕಥೆ: ಅಹಂಕಾರ ತಾರಕಕ್ಕೇರಿದಾಗ..

ವನವಾಸದ ಕಾಲದಲ್ಲಿ ಭೃಹದಾಶ್ರಮಕ್ಕೆ  ಬಂದ ಸಂಧರ್ಭದಲ್ಲಿ ಒಬ್ಬ ಬೇಟೆಗಾರ ಆ ಕಾಡಿನ ಬಗ್ಗೆ ವರ್ಣನೆ ಮಾಡುತ್ತಾನೆ. ಇಲ್ಲಿರುವಂತ. ಆನೆಗಳು ಸಿಂಹಗಳು ಪ್ರಪಂಚದಲ್ಲಿ ಎಲ್ಲೂ ಇಲ್ಲ ಈ ಕಾಡಿನಲ್ಲಿ ಇರುವ ಪ್ರಾಣಿಗಳನ್ನು ಬೇಟೆಯಾಡಲು ಸಾಧ್ಯವಿಲ್ಲ. ಎಂದು ಹೇಳುವುದನ್ನು ಕಂಡ ಭೀಮನಿಗೆ ತನ್ನ ಶಕ್ತಿಯ ಬಗ್ಗೆ ಗರ್ವ ಬಂದು ಕಾಡಿನೊಳಗೆ ಹೋಗುತ್ತಾನೆ.  

ಭೀಮನ ನಡಿಗೆಯಿಂದ ಪರ್ವತಗಳು ಅಲುಗಾಡುತ್ತೆ, ಆನೆಗಳು ಗೀಳಿಡುತ್ತ ಓಡಿಹೋಗುತ್ತೆ. ಭೀಮನ ಧ್ವನಿಗೆ ಹೆದರಿ ಸಿಂಹಗಳು ನಡುಗಿ ಗುಹೆಸೇರುತ್ತೆ. ಅಂತ ಆರ್ಭಟ ಈ ಭೀಮನದ್ದು.. ತಾನೆ ಶಕ್ತಿಶಾಲಿ ಎಂದು ಭೀಗುತ್ತಾ ಹೋಗುತ್ತಿದ್ದ ಭೀಮನಿಗೆ ಒಂದೇ ಕ್ಷಣದಲ್ಲಿ ಒಂದು ದೊಡ್ಡ 
ಘಟ ಸರ್ಪ ಕಾಲಿನಿಂದ ಕುತ್ತಿಗೆಯವರೆಗೂ
ಅವನನ್ನು ಸುತ್ತಿಕೊಂಡುಬಿಡುತ್ತದೆ. 

ಭೀಮನನ್ನು ಹುಡುಕಿಕೊಂಡು ಕಾಡಿನೊಳಗೆ ಬಂದ ಧರ್ಮರಾಯನಿಗೆ. ಇದನ್ನು ಕಂಡು ಆಶ್ಚರ್ಯವಾಯಿತು. ಆ ಸರ್ಪವನ್ನು ಉದ್ದೇಶಿಸಿ. ನಾನು ಧರ್ಮರಾಜ. ಪಾಂಡುರಾಜನ ಪುತ್ರ. ವನವಾಸಕ್ಕೆಂದು ಬಂದಿದ್ದೇವೆ..ಇವನು ನನ್ನ ಸಹೋದರ ಭೀಮ ಎಂದು ನಮಿಸಿ. ಸರ್ಪರಾಜ ನೀವು ಯಾರು..? ಇಂತ ಬಲಶಾಲಿ ಯಾದ ನನ್ನ ತಮ್ಮ ಭೀಮನನ್ನು ಹೀಗೆ  ಹಿಡಿದಿಟ್ಟು ಕೊಂಡಿದ್ದೀರಿ. ತಾವು ಯಾರೋ ಮಹಾನುಭಾವರೆ, ಜ್ಞಾನಿಗಳೆ ಆಗಿರಬೇಕು ಎಂದನು.

ಆಗ ಆ ಸರ್ಪವು ಹೇಳಿತು ನಾನು ನಿಮ್ಮ ವಂಶಜನೇ.. ನಹುಷಮಹಾರಾಜ ನನಗೆ ಅಗಸ್ತ್ಯರ ಶಾಪ ಇದೆ. ಧರ್ಮ ಜ್ಞಾನದಿಂದ   (ಧರ್ಮಜನಿಂದ )ಅಂದರೆ ನೀನೇ ನನಗೆ ಮೋಕ್ಷ ನೀಡುವುದಿದೆ ಎಂದು ತನ್ನ  ವೃತ್ತಾಂತವನ್ನು ಹೇಳಿತು.

ದೇವತೆಗಳ ರಾಜ, ಸ್ವರ್ಗಾಧಿಪತಿ ಇಂದ್ರನಿಗೆ ವೃತ್ರಾಸುರನೆಂಬ ದೈವ ಭಕ್ತ ಅಸುರನ ಜೊತೆ ಮೈತ್ರಿ ಮಾಡಿಕೊಂಡಂತೆ ನಟಿಸಿ, ಅವನ ವಿಶ್ವಾಸ ಗಳಿಸಿ ನಂತರ ಮೋಸದಿಂದ ಕೊಲ್ಲಬೇಕಾಯಿತು. ಹೀಗೆ ದೈವಭಕ್ತನೊಬ್ಬನನ್ನು ವಂಚಿಸಿ ಕೊಂದ ಪಾಪ ಇಂದ್ರನನ್ನು ಸುತ್ತಿ ಅವನು ತನ್ನ ದಿವ್ಯ ತೇಜಸ್ಸನ್ನು ಕಳೆದುಕೊಂಡು ಕಳಾಹೀನನಾದನು. ಆದುದರಿಂದ ತನ್ನ ಪಾಪವನ್ನು ಪರಿಹರಿಸಿಕೊಳ್ಳಲು, ಇಂದ್ರನು ಸ್ವರ್ಗವನ್ನು ತ್ಯಜಿಸಿ ಬೇರಾರಿಗೂ ತಿಳಿಯದಂತೆ ಮಾನಸ ಸರೋವರದ ಕಮಲವೊಂದರಲ್ಲಿ ಸೂಕ್ಷ್ಮ ರೂಪದಲ್ಲಿ ಅಡಗಿಕೊಂಡು ತಪಸ್ಸು ಮಾಡತೊಡಗಿದನು.

ಇತ್ತ ಇಂದ್ರನಿಲ್ಲದ ಸ್ವರ್ಗದಲ್ಲಿ ಅರಾಜಕತೆಯುಂಟಾಯಿತು. ಇಂದ್ರನನ್ನು ಹುಡುಕಲು ದೇವತೆಗಳು ಮಾಡಿದ ಪ್ರಯತ್ನ ವಿಫಲವಾಯಿತು. ಮೂರು ಲೋಕಗಳನ್ನು ಸರಿಯಾಗಿ ಆಳಲು ದೇವತೆಗಳೆಲ್ಲ ತಮ್ಮಲ್ಲಿಯೇ ವಿಚಾರಿಸಿ, ಇಂದ್ರನು ಬರುವವರೆಗೆ ಮತೊಬ್ಬ ಅರ್ಹ ರಾಜನನ್ನು ಇಂದ್ರನ ಪದವಿಯಲ್ಲಿ ಕೂಡಿಸಲು ನಿರ್ಧರಿಸಿದರು.

ಇಂದ್ರನ ಪದವಿಯೇರಲು ಅರ್ಹನಾದ ವ್ಯಕ್ತಿ ಯಾರು ಎಂಬ ಚರ್ಚೆಯಾದಾಗ, ದೇವತೆಗಳಿಗೆ ಕಂಡಿದ್ದು, ನೂರು ಅಶ್ವಮೇಧ ಯಾಗವನ್ನು ಮಾಡಿದ, ವೇದೋಪನಿಷತ್ತುಗಳನ್ನು ಅಭ್ಯಸಿಸಿದ ಮತ್ತು ಜನಾನುರಾಗಿಯಾದ ನಹುಷ ಮಹಾರಾಜ. ಅದರೆ ನಹುಷ ಮಹಾರಾಜ ದೇವತೆಯಾಗಿರಲಿಲ್ಲ. ಅವನೊಬ್ಬ ಭೂಲೋಕದ ಚಂದ್ರವಂಶದಲ್ಲಿ ಜನಿಸಿದ ಮಾನವನಾಗಿದ್ದ.

ದೇವಗುರು ಬೃಹಸ್ಪತಿ ನಹುಷನ ಆಯ್ಕೆಯನ್ನು ಒಪ್ಪಿಕೊಂಡ ಮೇಲೆ ದೇವತೆಗಳು ನಹುಷನನ್ನು ಭೆಟಿಯಾಗಿ ತಮ್ಮ ರಾಜನಾಗಿ ಮೂರು ಲೋಕಗಳನ್ನು ಧರ್ಮದಿಂದ ಆಳಲು ಕೇಳಿಕೊಂಡರು. ನಹುಷನಿಗೆ ಆಶ್ಚರ್ಯವಾದರೂ, ದೇವತೆಗಳ ಮಾತಿನಂತೆ ನಡೆಯಲು ಒಪ್ಪಿಕೊಂಡನು.

ಒಮ್ಮೆ ಇಂದ್ರ ಪದವಿಗೆ ಏರಿದ ಮೇಲೆ ಅವನಿಗೆ ಅಪಾರವಾದ ಶಕ್ತಿ ಮತ್ತು ಅಧಿಕಾರಗಳು ದೊರೆತವು. ನಹುಷನ ಆಳ್ವಿಕೆಗೆ ಸೂರ್ಯ ಚಂದ್ರರು, ವಾಯು ವರುಣರು, ಯಮ ಮತ್ತು ಅಷ್ಟ ದಿಕ್ಪಾಲಕರಂತಹ ಸ್ವರ್ಗದ ದೇವಾಧಿದೇವತೆಗಳಲ್ಲದೇ, ಅಪ್ಸರೆಯರು, ಯಕ್ಷ ಗಂಧರ್ವರು ಮತ್ತು ಸಕಲ ಲೋಕದ ಜೀವರಾಶಿಗಳೆಲ್ಲರೂ ಒಳಪಟ್ಟಿದ್ದರು.

ತನ್ನ ಅಪಾರ ಶಕ್ತಿ ಮತ್ತು ಅಪರಿಮಿತ ಅಧಿಕಾರದಿಂದ ನಹುಷನಿಗೆ ಅಹಂಕಾರ ಬಂದಿತು. ಅವನಿಗರಿವಿಲ್ಲದೇ ಆತ ತನ್ನ ಇಂದ್ರ ಪದವಿ ಶಾಶ್ವತ ಎಂದು ನಂಬ ತೊಡಗಿದ. ಈ ಪದವಿ ಮತ್ತು ಅವನ ಅಧಿಕಾರ ಬಂದಿದ್ದು ಅವನು ಅನುಸರಿಸಿದ ಧರ್ಮ ಮಾರ್ಗದಿಂದ ಬಂದಿದ್ದು ಮತ್ತು ಎಂದಿನ ದಿನ ಆ ಧರ್ಮ ಹೀನವಾಗುತ್ತದೆಯೋ ಅಂದಿನ ದಿನದಿಂದ ಉನ್ನತಿಯಿಂದ ಅವನತಿಯ ಮಾರ್ಗ ಆರಂಭವಾಗುತ್ತದೆ. ಎಂದು ಜ್ಞಾನಿಯಾದ ನಹುಷನಿಗೆ ತಿಳಿಯದಿದ್ದುದು ಅಹಂಕಾರದ ಪರದೆಯಿಂದಲೇ ಸರಿ.

ಯಶಸ್ಸು ಅಂದ್ರೇನು? ಯಶಸ್ಸಿನ ಗುಟ್ಟು ಬಲ್ಲವರು ಯಾರು? ಆತನ ಅಹಂಕಾರ ಪರಮಾವಧಿಗೆ ತಲುಪಿ ಇಂದ್ರನ ಪತ್ನಿಯಾದ ಶಚೀದೇವಿಯನ್ನು ಅವನು ಬಯಸಿದಾಗ. ಗುರು ಬೃಹಸ್ಪತಿಯ ಸಲಹೆಯಂತೆ ನಹುಷನಿಗೆ ಪಾಠ ಕಲಿಸಲು ಶಚೀದೇವಿ ಸಪ್ತರ್ಷಿಗಳಿಂದ ಹೊರಲ್ಪಟ್ಟ ಪಲ್ಲಕ್ಕಿಯಲ್ಲಿ ತನ್ನನ್ನು ಕಾಣಲು ಬಾ ಎಂದು ಪ್ರೇರೇಪಿಸುತ್ತಾಳೆ.

ಮದದಿಂದ ಅಂಧನಾದ ನಹುಷ ಹಾಗೆಯೇ ಪಲ್ಲಕ್ಕಿಯಲ್ಲಿ ಬರುತ್ತಿರುವಾಗ ಕುಬ್ಜನಾದ ಅಗಸ್ತ್ಯ ಋಷಿಯ ಮಂದಗತಿಗೆ ಬೇಸರಪಟ್ಟು ಕಾಲಿನಿಂದ ಒದ್ದು ಬೇಗಬೇಗ ಹೋಗು  “ಸರ್ಪ ಸರ್ಪ” ಎಂದು ತೆಗಳಿ ಅವಮಾನಿಸುತ್ತಾನೆ. ಹಾಗೆಯೇ ಅಗಸ್ತ್ಯ ಋಷಿಯಿಂದ ಶಪಿಸಲ್ಪಟ್ಟು ಹೆಬ್ಬಾವಾಗಿ ಮಾರ್ಪಟ್ಟು ಭೂಲೋಕ ಸೇರುತ್ತಾನೆ.

ಅತ್ಯಂತ ವಿನಯಶೀಲ ಮತ್ತು ದೈವ ಭಕ್ತನಾದ ನಹುಷ ಮಹಾರಾಜ ಕೂಡ ಅಹಂಕಾರದ ಮಾಯೆಗೆ ಒಳಪಟ್ಟು ತನ್ನ ಪದವಿಯನ್ನು ಕಳೆದುಕೊಂಡು ಅವನತಿ ಹೊಂದಿದ್ದು. ಆದರೆ ಮೇಲಕ್ಕೇರಿದವರ ಅಹಂಕಾರ ತಾರಕಕ್ಕೇರಿದಾಗ ಕೆಳಗೆ ಜಾರುವುದು ನಿಶ್ಚಿತ .

ಪುರಾಣ, ಇತಿಹಾಸಗಳಲ್ಲಿ ಇಂತಹ ಉದಾಹರಣೆಗಳು ಅಸಂಖ್ಯ. ರಾವಣ, ಕಂಸ,ಎಷ್ಟೋ  ಕಥೆಯಂತೂ ಎಲ್ಲರಿಗೂ ಗೊತ್ತಿದ್ದದ್ದೇ. ಆದರೂ ಅದಾವ ಮಾಯೆ ಅಧಿಕಾರ ಮತ್ತು ಶ್ರೀಮಂತಿಕೆಯನ್ನು ಆವರಿಸುತ್ತದೆಯೋ? ಅಧಿಕಾರ ಮತ್ತು ಶ್ರೀಮಂತಿಕೆ ಕೆಲವರನ್ನು ಪಾಪದ ಕೂಪಕ್ಕೆ ಇಳಿಸುತ್ತದೆ. ಅದಕ್ಕೇ ಮಹಾಭಾರತದಲ್ಲಿ “ಅಧಿಕಾರಕ್ಕಾಗಿ.” ಯುದ್ಧವೇ ನಡೆಯಿತು.

ಅಧಿಕಾರದ ಮದದಲ್ಲಿ ಮಗ್ನವಾಗಿರುವವನು ಎಚ್ಚರಗೊಳ್ಳುವುದು ಕಷ್ಟಸಾಧ್ಯ” ಎಂದು ಹೇಳಲಾಗಿದೆ. ಇದು ಮಹಾಭಾರತದ ಉಪಕಥೆಗಳಲ್ಲಿ “ಅಜಗರ ಪರ್ವ”ದಲ್ಲಿ ಬರುವುದು

ಕೃಪೆ: ಸಾಮಾಜಿಕತಾಣ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!