ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು: ಬಿವೈ ವಿಜಯೇಂದ್ರ ವಿಶ್ವಾಸ

ಬೆಂಗಳೂರು, (ಆಗಸ್ಟ್.27); ಕಳೆದ ಎರಡು ತಿಂಗಳುಗಳಿಂದ ಕರ್ನಾಟಕದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವಿಶ್ಲೇಷಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಬೇಡಿಕೊಂಡು ಬಂದಂತಿದೆ; ಅದು ಬೇರೆ ವಿಚಾರ ಎಂದು ನಗುತ್ತ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದು ನುಡಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಪಾಪ; ಕಾಂಗ್ರೆಸ್ಸಿಗರು ಗಾಬರಿಯಿಂದ ನಮ್ಮ ಪಾದಯಾತ್ರೆ ತಲುಪುವ ಮುನ್ನ ಜನಾಂದೋಲನ ಮಾಡಿದ್ದರು. ಮತ್ತೊಂದೆಡೆ ಸ್ವತಃ ಸಿದ್ದರಾಮಯ್ಯನವರು ಮೈಸೂರಿನಲ್ಲಿದ್ದು, ಜನಾಂದೋಲನಕ್ಕೆ ಸಿದ್ಧತೆ ಮಾಡಿದ್ದರು. ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಕಳಕೊಂಡಿದ್ದಾರೆ. ಅವರ ಕುರಿತು ಕಾಂಗ್ರೆಸ್ಸಿನ ಶಾಸಕರೂ ವಿಶ್ವಾಸ ಕಳಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ..ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟಿನ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇವತ್ತಲ್ಲ ನಾಳೆ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿದೆ ಎಂದು ತಿಳಿಸಿದರು. ಈ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಯಾವುದೇ ಹೊಸ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡುತ್ತಿಲ್ಲ ಎಂದು ಟೀಕಿಸಿದರು.

ಸರಕಾರದ ಗ್ಯಾರಂಟಿ ಪರಿಣಾಮವಾಗಿ ಕೆಎಸ್‍ಆರ್‍ಟಿಸಿಗೆ 4,500 ಕೋಟಿ ರೂ. ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇ ಮುಂದುವರೆದರೆ ಕೆಎಸ್‍ಆರ್‍ಟಿಸಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲೂ ದುಡ್ಡಿಲ್ಲ. ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಇರಲಿ; ಅವರ ಗೌರವಧನವನ್ನು 3 ತಿಂಗಳಿಂದ ಪಾವತಿಸಿಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು- ಸುವ್ಯವಸ್ಥೆ ಹಾಳಾಗಿದೆ ಎಂದರು.

ಸರಕಾರ ಕಾಲಹರಣ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದ ಕುರಿತು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಮುಡಾದ ತಪ್ಪನ್ನೂ ಒಪ್ಪಿಕೊಂಡು, ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಎಂದು ಕಿವಿಮಾತು ಹೇಳಿದರು.

ಮಾನ್ಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆಯ ಯಶಸ್ಸಿನ ವಿಷಯದಲ್ಲಿ ಮಾಹಿತಿ ಹಂಚಿಕೊಂಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು ಪಾದಯಾತ್ರೆ ಯಶಸ್ಸಿನ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದರು. ಕರ್ನಾಟಕದಲ್ಲಿ ಕಳೆದ ಬಾರಿ 1.05 ಕೋಟಿ ಸದಸ್ಯತ್ವವನ್ನು ನಾವು ನೋಂದಣಿ ಮಾಡಿಸಿದ್ದೆವು. ಈ ಬಾರಿ ಇನ್ನೂ ಹೆಚ್ಚು ಸದಸ್ಯತ್ವ ದಾಖಲಿಸುವ ಕುರಿತು ಕೂಡ ಗಮನ ಸೆಳೆದುದಾಗಿ ಹೇಳಿದರು.

ಅಹಿಂದ ಸಮುದಾಯಗಳಿಗೆ ಅನ್ಯಾಯ..: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಸ್‍ಐಟಿ ರಚಿಸಿ ಕ್ಲೀನ್ ಚಿಟ್ ಕೊಡಿಸುವ ಅಗತ್ಯ ಏನಿತ್ತು? ಸರಕಾರದ ದಲಿತರ ಕಾಳಜಿ ಅಂದರೆ ಇದೇನಾ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು. ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಗರಣಕ್ಕೆ ಸಂಬಂಧಿಸಿ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿವೆ. ಇದೊಂದು ಗಂಭೀರ ಪ್ರಕರಣ. ಲೆಕ್ಕಾಧಿಕಾರಿ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಶಾಸಕರನ್ನು ದೂರವಿಟ್ಟು ಯಾರಿಗೆ ದ್ರೋಹ ಮಾಡುತ್ತಿದ್ದೀರಿ? ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆಕ್ಷೇಪಿಸಿದರು.

ಹಿಂದೆ ಇದೇ ಸಿದ್ದರಾಮಯ್ಯನವರು ಎಸಿಬಿ ಮೂಲಕ ಕ್ಲೀನ್ ಚಿಟ್ ಪಡೆದುಕೊಂಡ ಇತಿಹಾಸ ಇದೆ ಎಂದ ಅವರು, ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ವಿಚಾರದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯದ ನಾಯಕರ ಕೆಲವು ಸಲಹೆಗಳಿದ್ದು, ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದೆಹಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ; ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅವರ ಕುರಿತು ಇಲ್ಲಿ ನಾನು ಪ್ರಸ್ತಾಪಿಸಿಲ್ಲ; ಅದರ ಅವಶ್ಯಕತೆಯೂ ನನಗಿಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು

ಕ್ಷದ ಬೆಳವಣಿಗೆಗೆ ಪೂರಕ ಇದ್ದರೆ, ರಾಷ್ಟ್ರೀಯ ನಾಯಕರ ಒಪ್ಪಿಗೆ ಇದ್ದರೆ ಇನ್ನೊಂದು ಪಾದಯಾತ್ರೆ ಮಾಡಬಹುದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಕ್ಕೆ ಬಲ ತುಂಬಲಿದ್ದೇನೆ ಎಂದು ಅವರು ತಿಳಿಸಿದರು. (ಸಂಗ್ರಹ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!