ಹೊಸಹಳ್ಳಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ; ಕೆವಿಕೆ ವಿಜ್ಞಾನಿಗಳಿಂದ ಹಲವು ಮಹತ್ವದ ಮಾಹಿತಿ

ದೊಡ್ಡಬಳ್ಳಾಪುರ, (ಆಗಸ್ಟ್.29); ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಕೃಷಿ ಜಮೀನಿನಲ್ಲಿ ಅಡಿಕೆ ಬೆಳೆ ಹೆಚ್ಚಾಗುತ್ತಿರುವುದು ಕಳೆದ ಎರಡು ಮೂರು ವರ್ಷಗಳಿಂದ ಕಂಡು ಬರುತ್ತಿದೆ.  

ಹೊಸದಾಗಿ ಅಡಿಕೆ ನಾಟಿ ಮಾಡಿದ ಜಮೀನುಗಳಲ್ಲಿ ಅಡಿಕೆ ಸಾಲುಗಳ ಮಧ್ಯೆ ಇರುವ ಭಾಗದಲ್ಲಿ ವಿವಿಧ ರೀತಿಯ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಸಮರ್ಪಕವಾಗಿ ಜಾಗ ಬೆಳೆಸಿಕೊಂಡು ರೈತರು ಉತ್ತಮ ಇಳುವರಿ ಪಡೆಯಬಹುದು ಎನ್ನುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ, ಹಾಡೋನಹಳ್ಳಿ ವತಿಯಿಂದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 

ಹೊಸದಾಗಿ ನಾಟಿ ಮಾಡಿದ ಅಡಿಕೆ ತೋಟಗಳಲ್ಲಿ ಬೆಳೆಯ ಬಹುದಾದ ಅಂತರ ಬೆಳೆಗಳು: ಸೂಕ್ತ ಆಹಾರ ಬೆಳೆಗಳು – ರಾಗಿ, ಅಲಸಂದೆ, ಹೆಸರು, ಉದ್ದು, ಹುರುಳಿಕಾಳು ಇತ್ಯಾದಿಗಳನ್ನು ನಾಟಿ ಮಾಡಿದ 3 ರಿಂದ 5 ವರ್ಷಗಳ ಕಾಲ ಬೆಳೆಯಬಹುದಾಗಿದೆ.

ವಿಶೇಷವಾಗಿ ದ್ವಿದಳ ಧಾನ್ಯ ಬೆಳೆಗಳನ್ನು ಅಂತರ ಬೆಳೆಯಾಗಿ ಬೆಳೆಯುವುದರಿಂದ ವಾತಾವರಣದ ಸಾರಜನಕವನ್ನು ಅವುಗಳು ಬೇರುಗಂಟಿನಲ್ಲಿರುವ ರೈಜೋಬಿಯಂ ಸೂಕ್ಷ್ಮಾಣುವಿನ ಮೂಲಕ ಸ್ಥಿರೀಕರಿಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ಸಹಕರಿಸುತ್ತವೆ ಎಂದು ಕೇಂದ್ರದ ಮಣ್ಣು ವಿಜ್ಞಾನಿ ಡಾ.ಪಿ.ವೀರನಾಗಪ್ಪರವರು ತಾಂತ್ರಿಕ ಮಾಹಿತಿ ನೀಡಿದರು.

ಅಡಿಕೆಯನ್ನು 7 x 8 ಅಡಿ, 8 x 8 ಅಡಿ, 9x 9 ಅಡಿ, 8 x 9 ಅಡಿ ವಿವಿಧ ಅಂತರದಲ್ಲಿ ರೈತರು ನಾಟಿ ಮಾಡುತ್ತಿದ್ದಾರೆ. ಅಡಿಕೆಯಲ್ಲಿ ಪೋಷಕಾಂಶಗಳ ಮಹತ್ವ ಮತ್ತು ನೀರು ನಿರ್ವಹಣೆ, ಬೇಸಿಗೆಯಲ್ಲಿ ತೇವಾಂಶ ಹಾಗೂ ಬೆಳೆಯ ರಕ್ಷಣೆಯ ಕುರಿತು ಉಪನ್ಯಾಸ ನೀಡಿದರು. 

ಕೇಂದ್ರದ ಮುಖ್ಯಸ್ಥರಾದ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ಬಯಲು ಸೀಮೆಯಲ್ಲಿ ಅಡಿಕೆ ಬೆಳೆಯಲು ಅನುಸರಿಸಬೇಕಾದ ಕೆಲವು ಪದ್ಧತಿಗಳ ಕುರಿತು ಮಾಹಿತಿ ನೀಡಿದರು.

ಅಡಿಕೆಗೆ ಸೂಕ್ತ ತೋಟಗಾರಿಕೆ ಬೆಳೆಗಳು: ಬೀನ್ಸ್, ಕ್ಯಾರೆಟ್, ಬೀಟ್‌ರೂಟ್, ಕಡ್ಡಿ ಬೀನ್ಸ್, ಬಾಳೆ, ಚಪ್ಪರದ ಅವರೆ ಇತ್ಯಾದಿಗಳನ್ನು ಮೊದಲು 3 ವರ್ಷಗಳವರೆಗೆ ಬೆಳೆಯಬಹುದು. 

ಹತ್ತು ವರ್ಷಗಳ ನಂತರ ಅಡಿಕೆಯಲ್ಲಿ ಅಂತರ ಬೆಳೆಯಾಗಿ ವೀಳ್ಯದೆಲೆ, ಕಾಳು ಮೆಣಸು, ಏಲಕ್ಕಿ, ಕೊಕೋನಾ, ಜಾಯಿಕಾಯಿ ಇತ್ಯಾದಿ ಬಹುವಾರ್ಷಿಕ ಬೆಳೆಗಳನ್ನು ಬೆಳೆಯಬಹುದಾಗಿದ್ದು ರೈತರು ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆಯೆಂದು ತಿಳಿಸಿದರು.  

ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವ್ಯವಸಾಯ ಪೂರಕ ಚಟುವಟಿಕೆಗಳಿಗೆ ಮಂತಾರ್ ಲೀ ಸೋಷಿಯಲ್ ಇನ್ನೋವೇಷನ್ ಫೆಡರೇಶನ್, ಬೆಂಗಳೂರು ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಕಾರ್ಪೋರೇಟ್ ಸೇವಾ ಜವಾಬ್ದಾರಿ ಉಪಕ್ರಮಗಳ ಅಡಿಯಲ್ಲಿ ಪ್ರಾಯೋಜಿಸಲಾಗುತ್ತಿದೆ ಎಂದು ರೋಹಿಣಿ ಅವರು ತಿಳಿಸಿದರು.

ಕೇಂದ್ರದ ವತಿಯಿಂದ ರೈತರುಗಳಿಗೆ ಅಡಿಕೆ ಬೆಳೆಯಲ್ಲಿ ಪ್ರಾತ್ಯಕ್ಷಿಕೆಗಳು, ಸುಗಂಧರಾಜ ಬೆಳೆಯಲ್ಲಿ ವೈಜ್ಞಾನಿಕ ಬೇಸಾಯ ಪದ್ಧತಿಗಳು ಕುರಿತು ಹಲವು ತರಬೇತಿ ಮತ್ತು ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಸ್ಥರು ತಿಳಿಸಿದರು. 

ಕಾರ್ಯಕ್ರಮದಲ್ಲಿ ಹೊಸಹಳ್ಳಿ ಗ್ರಾಮದ ರೈತ ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!