ವಿದ್ಯುತ್ ಖಾಸಗೀಕರಣ ವಿರೋಧಿಸಿ ಸೆ.4ರಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆ

ದೊಡ್ಡಬಳ್ಳಾಪುರ, (ಆಗಸ್ಟ್ 30); ರೈತರ ಕೃಷಿ ಪಂಪ್‌ಸೆಟ್ ಮೀಟರ್‌ಗಳಿಗೆ ಆಧಾರ್ ಜೋಡಣೆ ಮಾಡುವ ಮೂಲಕ ವಿದ್ಯುತ್ ಖಾಸಗೀಕರಣದ ಹುನ್ನಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇದಲ್ಲದೇ ವಿದ್ಯುತ್ ಲೈನ್‌ಗಳಿಗೆ, ಕೈಗಾರಿಕೆಗಳಿಗೆ ಫಲವತ್ತಾದ ಕೃಷಿ ಭೂಮಿ ಸ್ವಾಧೀನ ಪಡಿಸಿಕೊಂಡು ಕೃಷಿಗೆ ಸಂಚಕಾರ ತರುವ ಸರ್ಕಾರದ ನೀತಿಗಳನ್ನು ವಿರೋಧಿಸಿ, ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ.

ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ಕೆಂಚೇಗೌಡ, ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಮೀಟರ್ ಅಳವಡಿಸಿದ್ದ ಉಗ್ರವಾಗಿ ಹೋರಾಟ ನಡೆಸಲಾಗಿತ್ತು. ಈ ಮುಂಚೆ ಇದ್ದ ಕರ್ನಾಟಕ ವಿದ್ಯುತ್ ಮಂಡಲಿ (ಕೆಇಬಿ)ಯನ್ನು  ಐದು ವಿದ್ಯುತ್ ಸರಬರಾಜು ಕಂಪನಿಗಳನ್ನಾಗಿ ಮಾಡಿ, ಕಂಪನಿಗಳನ್ನು ಖಾಸಗೀಕರಣಕ್ಕೆ ವಹಿಸಲಾಗಿದೆ.

ಈ ಕಂಪನಿಗಳು ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಭಾಗ್ಯ ಜ್ಯೋತಿ ಮೊದಲಾದ ಯೋಜನೆಗಳನ್ನು ಜಾರಿಗೆ ತರಲು ಹಿಂದೇಟು ಹಾಕಿ ಸರ್ಕಾರವನ್ನು ಪರೋಕ್ಷವಾಗಿ ಒತ್ತಾಯಿಸುವ ಫಲವಾಗಿ ಇಂದು ಕ್ರಮೇಣ, ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುವ ಹೆಜ್ಜೆ ಇರಿಸಿದೆ. ಡಿಜಿಟಲ್ ಮೀಟರ್, ಸಿಮ್ ಕಾರ್ಡ್ಗಳ ಅಳವಡಿಕೆ ಮಾಡುವ ಮೂಲಕ ದುಬಾರಿ ವೆಚ್ಚ ಹೇರುತ್ತಿವೆ. ಹಾಗಾಗಿ ವಿದ್ಯುತ್ ಖಾಸಗೀಕರಣಕ್ಕೆ ನಮ್ಮ ಪ್ರಬಲ ವಿರೋಧವಿದೆ.

ಸರ್ಕಾರ ಚುನಾವಣಾ ಪೂರ್ವದಲ್ಲಿ  ನೀಡಿದ್ದ ಭರವಸೆ ಒಂದನ್ನೂ ಈಡೇರಿಸಿಲ್ಲ. ಭೂಸ್ವಾಧೀನದ ವಿರುದ್ದ ಚೆನ್ನರಾಯಪಟ್ಟಣದ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ನೀಡಿದ್ದ ಭರವಸೆಗಳು ಈಡೇರಿಲ್ಲ. 

ಈ ಹಿಂದೆ ಹೊಸಕೋಟೆ ತಾಲೂಕಿನಲ್ಲಿ ಎಸ್.ಇ.ಜೆಡ್ ವಿಶೇಷ ವಲಯದ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅದನ್ನು ಕೈಬಿಟ್ಟು ಈಗ ಉಪ ನಗರದ ಯೋಜನೆಯಡಿ ಹೆಸರು ಬದಲಾವಣೆ ಮಾಡಿ, ರೈತರ ಭೂಮಿ ಪಡೆಯಲಾಗುತ್ತದೆ. ಫಲವತ್ತಾದ ಕೃಷಿ ಭೂಮಿ ಸ್ವಾಧೀನವಿಲ್ಲ ಎಂದು ಹೇಳುತ್ತಾರೆ. ಆದರೆ ಶೇ.65 ರಿಂದ 70 ಭಾಗ ನೀರಾವರಿ ಭೂಮಿಯೇ ಇದೆ. ಭೂಮಿ ವಶ ಪಡಿಸಿಕೊಳ್ಳುವದರಲ್ಲಿ ಶೇ.35 ಭಾಗ ಜಮೀನು ರಸ್ತೆ, ವಿದ್ಯುತ್ ಗೆ ಕಳೆದುಹೋಗುತ್ತಿದೆ. ಇದರ ಬಗ್ಗೆ ನಮ್ಮ ವಿರೋಧವಿದೆ ಎಂದರು.

ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸನ್ನ ಮಾತನಾಡಿ, ವಿದ್ಯುತ್ ಖಾಸಗೀಕರಣದ ಪ್ರಕ್ರಿಯೆಗಳು ಕ್ರಮೇಣ ಜರುಗುತ್ತಿದ್ದು, ಇದು ರೈತರಿಗೆ ಮಾರಕವಾಗಿದೆ. ಪವರ್ ಗ್ರಿಡ್‌ನಿಂದ ರೈತರ ಜಮೀನುಗಳಲ್ಲಿ ಹಾದು ಹೋಗುವ ಬೃಹತ್ ವಿದ್ಯುತ್ ಕಂಬಗಳು ರೈತರ ಕೃಷಿಗೆ ಸಂಚಕಾರ ತಂದಿವೆ. ಇದರಿಂದ ರೈತರ ಜಮೀನಿಗೆ ಬೆಲೆಯೂ ಸಿಗುವುದಿಲ್ಲ.

ಸರ್ಕಾರ 1:4 ದರದಲ್ಲಿ ಭೂಮಿ ಖರೀದಿ ಮಾಡಿ, ಆನಂತರ ವಿದ್ಯುತ್ ಲೈನ್‌ಗಳನ್ನು ಎಳೆಯಲಿ. ಇಲ್ಲವೇ ಅಂಡರ್ ಗ್ರೌಂಡ್ ಕೇಬಲ್‌ಗಳನ್ನು ಅಳವಡಿಸಲಿ. ಅದು ಬಿಟ್ಟು ರೈತರ ಜಮೀನುಗಳ ಮೇಲೆ ಅತಿಕ್ರಮಣ ಮಾಡುವುದು ಎಷ್ಟು ಸರಿ. ಕೈಗಾರಿಕೆಗಳಿಂದ ಜನಸಾಂದ್ರತೆ ಹೆಚ್ಚಾಗಿ ಜನರ ಜೀವನ ಕಷ್ಟವಾಗುತ್ತದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಜಿಂಕೆಬಚ್ಚಹಳ್ಳಿ ಸತೀಶ್ ಮಾತನಾಡಿ, ಬಾಶೆಟ್ಟಿಹಳ್ಳಿಯಲ್ಲಿ ಅಪೇರೆಲ್ ಪಾರ್ಕ್ ಮೂರನೇ ಹಂತಕ್ಕೆ ವಶಪಡಿಸಿಕೊಂಡ ಜಮೀನಿನಲ್ಲಿ  ಬಹಳಷ್ಟು ಇನ್ನೂ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಆದರೆ ಸರ್ಕಾರ ಇದೀಗ ದೊಡ್ಡಬಳ್ಳಾಪುರದ ಸುತ್ತಮುತ್ತ ಕೈಗಾರಿಕೆಗಳಿಗೆ ಭೂಸ್ವಾಧೀನ ಮಾಡಿಕೊಳ್ಳುತ್ತಿದೆ. ದೊಡ್ಡಬಳ್ಳಾಪುರ ದಾಬಸ್ ಪೇಟೆ ನಡುವೆ ಸ್ಥಾಪನೆಯಾಗಲಿರುವ ಕೆ.ಎಚ್.ಐ.ಆರ್ ಸಿಟಿಗೆ 2 ಸಾವಿರ ಎಕರೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಆದರೆ ಸ್ಥಳೀಯರಿಗೆ ಕೆಲಸ ಮಾತ್ರ ಸಿಗುವುದಿಲ್ಲ. 

ಕೈಗಾರಿಕೆಗಳಿಂದ ಕೊಳಗೇರಿ ಆರಂಭವಾಗಿ, ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅಂತರ್ಜಲ ಕಲುಷಿತ ಗೊಳ್ಳಲಿದೆ. ಕೃಷಿ ಬದುಕನ್ನು ಅಸ್ಥಿರಗೊಳಿಸುವ ಇಂತಹ ಯೋಜನೆಗಳನ್ನು ನಾವು ವಿರೋಧಿಸಬೇಕಿದ್ದು, ಸೆ.4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಕಾರ್ಯದರ್ಶಿ ಆರ್.ಎಸ್.ಸತೀಶ್, ಮುಖಂಡರಾದ ಶಿರವಾರ ರವಿ, ದೇವನಹಳ್ಳಿ ತಾಲೂಕು ಕಾರ್ಯದರ್ಶಿ ರಮೇಶ್, ದೇವನಹಳ್ಳಿ ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]