ದೊಡ್ಡಬಳ್ಳಾಪುರ, (ಜುಲೈ.01); ತಾಲೂಕಿನ ರಾಷ್ಟ್ರೀಯ ಹೆದ್ದಾರಿ ರಾಮೇಶ್ವರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ಓರ್ವ ಮೊಪೆಡ್ ಸವಾರ ಸಾವನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ನಾರನಹಳ್ಳಿ ಗ್ರಾಮದ 80 ವರ್ಷದ ಮಾಳಪ್ಪ ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ನೆಲಮಂಗಲ- ದೊಡ್ಡಬಳ್ಳಾಪುರ ನಡುವಣ ರಾಮೇಶ್ವರ ಗೇಟ್ ಬಳಿ ಟಿವಿಎಸ್ ಮೊಪೆಡ್ನಲ್ಲಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದು ಮಾಳಪ್ಪ ಸಾವನಪ್ಪಿದ್ದಾರೆ.
ಘಟನೆ ಕುರಿತ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….