ಸಮಾಜಮುಖಿ ಆರೋಗ್ಯಕರ ಚಟುವಟಿಕೆಗಳಿಗೆ ನಿವೃತ್ತ ನೌಕರರು ಮಾದರಿ; ರಾಂ.ಕೆ.ಹನುಮಂತಯ್ಯ

ದೊಡ್ಡಬಳ್ಳಾಪುರ, (ಜುಲೈ.06); ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ, ದೊಡ್ಡಬಳ್ಳಾಪುರ ತಾಲೂಕು ಶಾಖೆ ವತಿಯಿಂದ ನಡೆಯುವ ಮಾಸಿಕ ಸಭೆಯಲ್ಲಿ ಕೈಗೊಳ್ಳುವ ಹಲವು ಸಮಾಜಮುಖಿ ಕಾರ್ಯಗಳು ಆರೋಗ್ಯಕರ ಚಟುವಟಿಕೆಗಳಿಗೆ ಮಾದರಿ ಎಂದು ಬೆಂಗಳೂರಿನ ಕನ್ನಡಿಗರ ಸ್ನೇಹ ಕೂಟದ ಸಂಸ್ಥಾಪಕ ಅಧ್ಯಕ್ಷ, ಸಾಹಿತಿ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಆರಕ್ಷಕ ರತ್ನ ರಾಂ.ಕೆ.ಹನುಮಂತಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಚೇರಿಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಪ್ರತಿ ತಿಂಗಳು ಸಭೆ ಸೇರಿ ಹಿರಿಯ ಚೇತನಗಳಿಗೆ ಚೈತನ್ಯ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯರೂಪಕ್ಕೆ ತರುತ್ತಿರುವುದು ಶ್ಲಾಘನೀಯ ಎಂದರು.

ರಾಂ.ಕೆ ಅವರು 96 ವರ್ಷ ವಯೋಮಾನದ ನರಸಯ್ಯನ ಅಗ್ರಹಾರ ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಕೆ.ವೀರೇಗೌಡ,‌90 ವರ್ಷ ವಯೋಮಾನದ ಹಾದ್ರಿಪುರದ ನಿವೃತ್ತ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹನುಮಂತರಾಯಪ್ಪ, 85 ವರ್ಷ ವಯೋಮಾನದ ರೋಜಿಪುರದ ನಿವೃತ್ತ ಶಿಕ್ಷಕಿ ಸರ್ವಮಂಗಳಮ್ಮ ,85 ವರ್ಷ ವಯೋಮಾನದ ಸೋಮೇಶ್ವರ ಬಡಾವಣೆ ನಿವೃತ್ತ ಮುಖ್ಯ ಶಿಕ್ಷಕ ಸಿ.ಬಸವರಾಜು ಮತ್ತು 80 ವಯೋಮಾನದ ಗುಂಡಪ್ಪ ನಾಯಕನಹಳ್ಳಿಯ ನಿವೃತ್ತ ಶಿಕ್ಷಕ ಉಗ್ರೇಗೌಡ ಇವರುಗಳಿಗೆ ಹೆಣ್ಣೂರು ಕನ್ನಡಿಗರ ಸ್ನೇಹ ಕೂಟ ಪರವಾಗಿ ಸನ್ಮಾನ ನೀಡುವ ಮೂಲಕ ಗೌರವಿಸಿದರು.

ಸಂಘದ ಬೆನ್ನೆಲುಬಾಗಿ ನಿಂತು ಸದಾ ಚೈತನ್ಯದ ಚಿಲುಮೆಯಂತೆ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದ್ದ ನಿವೃತ್ತ ಬಂಧು ಕದರಪ್ಪ ವಿಧಿವಶರಾಗಿದ್ದು ಅವರಿಗೆ ಸಭೆಯ ಮೂಲಕ ಮೌನ ಶ್ರದ್ಧಾಂಜಲಿ ಸಲ್ಲಿಸಿ ಅವರ ಪವಿತ್ರವಾದ ಆತ್ಮಕ್ಕೆ ಚಿರ ಶಾಂತಿಯನ್ನು ಕೋರಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಮಹಾಲಿಂಗಯ್ಯ ಮಾತನಾಡಿ, ಅರವತ್ತು ವರ್ಷ ಮೇಲ್ಪಟ್ಟವರ ಜೀವನ ಶೈಲಿ ಹೇಗಿರಬೇಕು? ಅನ್ನುವ ಅತ್ಯುತ್ತಮ ಮಾಹಿತಿಯನ್ನು ಓದಿ ಮನವರಿಕೆ ಮಾಡಿಕೊಟ್ಟರು. ಸಂಘದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲು ಎಲ್ಲಾ ಇಲಾಖೆಗಳ ನಿವೃತ್ತ ನೌಕರರು ಅಧಿಕಾರ ಅಂತಸ್ತು ಮರೆತು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಕೋರಿದರು.

ಇದೇ ವೇಳೆ  ವಕೀಲರು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಟಿ.ನಂಜಪ್ಪನವರು ಸಂಘದ ವರದಿಯನ್ನು ಆಧರಿಸಿ ಮಾತನಾಡಿ, ಸಂಘದ ಪ್ರಗತಿ ಪರ ಚಟುವಟಿಕೆಗಳನ್ನು ಪ್ರಶಂಸಿಸಿದರು.

ಬೆಂಗಳೂರು ಉತ್ತರ ತಾಲೂಕಿನ ನಿವೃತ್ತ ಉಪನ್ಯಾಸಕ ಶಿವರಾಜು ರವರು ಪೌರಾಣಿಕ ಭಕ್ತಿ ಗೀತೆಗಳನ್ನು ಹಾಡಿ ಹಿರಿಯ ಚೇತನಗಳನ್ನು ಭಾವ ಪರವಶರನ್ನಾಗಿ ಮಾಡಿದರು.

ನವೋದಯ ವಿದ್ಯಾಲಯದ ನಿವೃತ್ತ ಜಿ.ಎಸ್ ಹೆಗಡೆ ಅವರು ಬಿಡುವಿನ ವೇಳೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಸಾಧ್ಯವಾದಲ್ಲಿ ಸ್ಥಳೀಯ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ನೆರವಾಗುವ ಅಂಶಗಳನ್ನು ತಿಳಿಸಿದರು.

 ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಟಿ.ಮುನಿರಾಜು ರವರು ಪ್ರತಿಯೊಬ್ಬ ನಿವೃತ್ತಿ ಹೊಂದಿದ ಸದಸ್ಯರು ಸಂಘದ ಸದಸ್ಯತ್ವ ಪಡೆದು ಕೈಗೊಳ್ಳುವಂತೆ ಸಲಹೆ ನೀಡಿದರು.ಪ್ರಸ್ತುತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು ಎಲ್ಲರೂ ಜಾಗರೂಕರಾಗಿರಿ ಎಂದು ಕರೆ ನೀಡಿದರು.

ಸಭೆಯಲ್ಲಿ ವರದಿಯನ್ನು ಕಾರ್ಯದರ್ಶಿ ಕೆ.ಚನ್ನಪ್ಪ ಓದಿ ದಾಖಲಿಸಿದರು.ಸಂಘದ ಆಯವ್ಯಯವನ್ನು ಕೋಶಾಧ್ಯಕ್ಷ ರಂಗಸ್ವಾಮಯ್ಯ ಮಂಡಿಸಿ, ಅನುಮೋದನೆ ಪಡೆದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್ ಪ್ರಭಾಕರ್, ಉಪಾಧ್ಯಕ್ಷ ಕರಿಬಸವದೇವರು ,ಉಳಿದಂತೆ ಸಂಘದ ಹಿರಿಯರಾದ ತಿಪ್ಪೇಸ್ವಾಮಿ, ಶಿವರುದ್ರಯ್ಯ, ಪ್ರೊ.ಈಶ್ವರಾಚಾರ್, ಕೆ.ಎನ್ ಸರೋಜಮ್ಮ, ಗಂಗಾಂಬಿಕೆ, ಡಿ.ವಿ ಪದ್ಮಾವತಮ್ಮ, ರಾಧಾ ಲಕ್ಷ್ಮೀ, ಮಹಾದೇವಯ್ಯ, ಲಕ್ಷ್ಮೀಪತಿ, ಕೆ.ಜಿ.ಮುನಿರಾಜು, ನಜೀರ್, ರಾಮಕೃಷ್ಣಯ್ಯ, ನರಸಿಂಹಯ್ಯ, ಕಗ್ಗೇರಪ್ಪ ಮುಂತಾದವರು ಉಪಸ್ಥಿತರಿದ್ದರು.

ಹಾಡೋನಹಳ್ಳಿ ಜಾನಪದ ಕಲಾವಿದ ಗೋವಿಂದರಾಜು ಮತ್ತು ಜಯರಾಂ ಗೀತೆಗಳನ್ನು ಹಾಡಿ ರಂಜಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!