ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 08): 2024ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿಲಾಗಿದೆ.
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಇವರು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳಿಗೆ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಆನ್ಲೈನ್ ಮುಖಾಂತರ ಜೂನ್ 15 ರಿಂದ ಜುಲೈ 31 ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ರೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ಸಂಸ್ಥೆಗಳು www.awards.gov.in ವೆಬ್ಸೈಟ್ ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ ಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….