ಬೆಂಗಳೂರು, (ಜುಲೈ.08): ಭಾನುವಾರ ನೆಲಮಂಗಲದಲ್ಲಿ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಪ್ರಕರಣ ಸಂಬಂಧ ವರದಿ ತರಿಸುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಅವರು, ಅಭಿನಂದನಾ ಕಾರ್ಯಕ್ರಮದಲ್ಲಿ ಎಣ್ಣೆ ಪಾರ್ಟಿ ಮಾಡುವುದು ಯಾವ ಸಂಸ್ಕೃತಿ, ಯಾವ ಸಂಪ್ರದಾಯ ಎಂಬುದನ್ನು ಬಿಜೆಪಿ ರಾಷ್ಟ್ರೀಯ, ರಾಜ್ಯ ನಾಯಕರೇ ಹೇಳಬೇಕು. ಬಿಜೆಪಿಯವರದ್ದು ಯಾವ ಪದ್ದತಿ, ಯಾವ ಸಂಸ್ಕೃತಿ ಎಂದು ಅವರೇ ಉತ್ತರಿಸಬೇಕು. ಏನು ಕಾನೂನು ನಿಯಮ ಉಲ್ಲಂಘನೆ ಆಗಿದೆ ಎಂದು ವರದಿ ತರಿಸುತ್ತೇವೆ ಎಂದರು.
???? ಇದನ್ನೂ ಓದಿ; ಮಾಜಿ ಕೃಷಿ ಸಚಿವ ಬಿಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ..!
ಇದಕ್ಕೂ ಮುಂಚೆ ಈ ವಿಚಾರವಾಗಿ ಮಾತನಾಡಿ, ಬಿಜೆಪಿ ಸಂಸದ ಡಿ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉತ್ತರಿಸಬೇಕು. ಈ ಸಂಬಂಧ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ, ಬಿಜೆಪಿ ನಾಯಕರ ಸಂಸ್ಕೃತಿ ಇದೇನಾ ಎಂದು ಉತ್ತರಿಸಲಿ ಎಂದು ಟೀಕಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….