Dap: ದೊಡ್ಡಬಳ್ಳಾಪುರದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ.. ಕೃಷಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತಸಂಘದ ಆಕ್ರೋಶ

ದೊಡ್ಡಬಳ್ಳಾಪುರ, (ಜುಲೈ.16): ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರಾಗಿ,ಮುಸುಕಿನಜೋಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ. ಆದರೆ ಬಿತ್ತನೆಗೆ ಅಗತ್ಯ ಇರುವ ಡಿಎಪಿ ರಸಗೊಬ್ಬರ ದೊರೆಯದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

‘ಅತಿ ಹೆಚ್ಚು ರಸಗೊಬ್ಬರ ಮಾರಾಟ ಮಾಡುವ ನಗರದ ಟಿಎಪಿಎಂಸಿಎಸ್ ಸೇರಿದಂತೆ ಯಾವುದೇ ರಸಗೊಬ್ಬರ ಮಾರಾಟಗಾರರ ಬಳಿಯು ಡಿಎಪಿ ರಸಗೊಬ್ಬರ ದಾಸ್ತಾನು ಇಲ್ಲದಾಗಿದೆ. ಸಾಮಾನ್ಯವಾಗಿ ರಾಗಿ ಬಿತ್ತನೆ ಸಂದರ್ಭದಲ್ಲಿ ಬಹುತೇಕ ಎಲ್ಲಾ ರೈತರು ಮೂಲ ಗೊಬ್ಬರವಾಗಿ ಡಿಎಪಿ ರಸಗೊಬ್ಬರವನ್ನೇ ಹೆಚ್ಚಾಗಿ ಬಳಸುತ್ತಾರೆ.

ಈ ವಾಸ್ತವ ತಿಳಿದು ಸಹ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ರಸಗೊಬ್ಬರ ರೈತರಿಗೆ ದೊರೆಯುವಂತೆ ಮಾಡಬೇಕು. ಮಳೆ ಬೀಳುವ ಸಮಯದಲ್ಲಿ ಬಿತ್ತನೆ ಮಾಡದೇ ರಸಗೊಬ್ಬರ ದೊರೆತಾಗ ಬಿತ್ತನೆ ಮಾಡಲು ಸಾಧ್ಯವೇ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಮುಖಂಡ ಮುತ್ತೇಗೌಡ ಪ್ರಶ್ನೆ ಮಾಡಿದ್ದಾರೆ. 

ಇತರೆ ರಸಗೊಬ್ಬರಗಳಿಗೆ ಹೋಲಿಕೆ ಮಾಡಿದರೆ ಡಿಎಪಿ ರಸಗೊಬ್ಬರಕ್ಕೆ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡಬೇಕಿದೆ. ಹಾಗಾಗಿಯೇ ಡಿಎಪಿ ರಸಗೊಬ್ಬರ ಸರಬರಾಜು ಕಡಿಮೆ ಮಾಡಿದೆ. ರೈತರಿಗೆ ಅಗತ್ಯ ಗೊಬ್ಬರ ದೊರೆತರೆ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಸರ್ಕಾರ ತಕ್ಷಣ ರೈತರಿಗೆ ಅಗತ್ಯ ಇರುವಷ್ಟು ಡಿಎಪಿ ರಸಗೊಬ್ಬರ ಸರಬರಾಜು ಮಾಡಬೇಕು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

‘ನಾವು ಮುಂಗಡವಾಗಿಯೇ ಹಣ ಪಾವತಿಸಲು ಸಿದ್ದ.ಆದರೆ ರಸಗೊಬ್ಬರವೇ ಸರಬರಾಜು ಮಾಡುತ್ತಿಲ್ಲ. ಬಿತ್ತನೆ ಸಮಯದಲ್ಲಿ ಹೆಚ್ಚಾಗಿ ರೈತರು ಖರೀದಿ ಮಾಡುವುದೇ ಡಿಎಪಿ. ಆದರೆ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡಿದರೆ ಮಾತ್ರ ಡಿಎಪಿ ನೀಡುತ್ತೇವೆ ಎಂದು ರಸಗೊಬ್ಬರ ಕಂಪನಿಗಳು ನಮಗೆ ಷರತ್ತು ವಿಧಿಸುತ್ತಾರೆ. ರೈತರಿಗೆ ನಾವು ಈ ಷರತ್ತು ವಿಧಿಸುತ್ತ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡುವಂತೆ ಹೇಳಲು ಹೋದರೆ ಪ್ರತಿಭಟನೆ ನಡೆಸುತ್ತಾರೆ. ಹಾಗಾಗಿಯೇ ಕಂಪನಿಗಳುವರು ಎಷ್ಟು ಸರಬರಾಜು ಮಾಡಿದರೆ ಅಷ್ಟನ್ನು ಮಾತ್ರ ಮಾರಾಟ ಮಾಡುತ್ತೇವೆ’ ಎನ್ನುತ್ತಾರೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿ ಮಾಲೀಕರೊಬ್ಬರು. 

ತಾಲ್ಲೂಕಿನಲ್ಲಿ ಈ ವರ್ಷದ ಮುಂಗಾರಿನಲ್ಲಿ 19,220 ಹೆಕ್ಟೇರ್ ಪ್ರದೇಶದಲ್ಲಿ ರೈತರು ರಾಗಿ ಬಿತ್ತನೆ ಮಾಡುವ ಗುರಿಯನ್ನು ಅಂದಾಜಿಸಲಾಗಿದೆ. ಇಲ್ಲಿಯವರೆಗೆ 1,413 ಹೆಕ್ಟೇರ್ ಪ್ರದೇಶದಲ್ಲಿ, ಅಂದರೆ ಶೇ.7.35ರಷ್ಟು ಬಿತ್ತನೆಯಾಗಿದೆ.  ಹಾಗೆಯೇ ಮುಸುಕಿನಜೋಳ 5,690 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ 667 ಹೆಕ್ಟೇರ್ ಪ್ರದೇಶದಲ್ಲಿ,ಅಂದರೆ ಶೇ.11.72 ರಷ್ಟು ಬಿತ್ತನೆಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!