Dap: ದೊಡ್ಡಬಳ್ಳಾಪುರದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ.. ಕೃಷಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತಸಂಘದ ಆಕ್ರೋಶ

ದೊಡ್ಡಬಳ್ಳಾಪುರ, (ಜುಲೈ.16): ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ರಾಗಿ,ಮುಸುಕಿನಜೋಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ. ಆದರೆ ಬಿತ್ತನೆಗೆ ಅಗತ್ಯ ಇರುವ ಡಿಎಪಿ ರಸಗೊಬ್ಬರ ದೊರೆಯದೆ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

‘ಅತಿ ಹೆಚ್ಚು ರಸಗೊಬ್ಬರ ಮಾರಾಟ ಮಾಡುವ ನಗರದ ಟಿಎಪಿಎಂಸಿಎಸ್ ಸೇರಿದಂತೆ ಯಾವುದೇ ರಸಗೊಬ್ಬರ ಮಾರಾಟಗಾರರ ಬಳಿಯು ಡಿಎಪಿ ರಸಗೊಬ್ಬರ ದಾಸ್ತಾನು ಇಲ್ಲದಾಗಿದೆ. ಸಾಮಾನ್ಯವಾಗಿ ರಾಗಿ ಬಿತ್ತನೆ ಸಂದರ್ಭದಲ್ಲಿ ಬಹುತೇಕ ಎಲ್ಲಾ ರೈತರು ಮೂಲ ಗೊಬ್ಬರವಾಗಿ ಡಿಎಪಿ ರಸಗೊಬ್ಬರವನ್ನೇ ಹೆಚ್ಚಾಗಿ ಬಳಸುತ್ತಾರೆ.

ಈ ವಾಸ್ತವ ತಿಳಿದು ಸಹ ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ರಸಗೊಬ್ಬರ ರೈತರಿಗೆ ದೊರೆಯುವಂತೆ ಮಾಡಬೇಕು. ಮಳೆ ಬೀಳುವ ಸಮಯದಲ್ಲಿ ಬಿತ್ತನೆ ಮಾಡದೇ ರಸಗೊಬ್ಬರ ದೊರೆತಾಗ ಬಿತ್ತನೆ ಮಾಡಲು ಸಾಧ್ಯವೇ’ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಮುಖಂಡ ಮುತ್ತೇಗೌಡ ಪ್ರಶ್ನೆ ಮಾಡಿದ್ದಾರೆ. 

ಇತರೆ ರಸಗೊಬ್ಬರಗಳಿಗೆ ಹೋಲಿಕೆ ಮಾಡಿದರೆ ಡಿಎಪಿ ರಸಗೊಬ್ಬರಕ್ಕೆ ಸರ್ಕಾರ ಹೆಚ್ಚಿನ ಸಬ್ಸಿಡಿ ನೀಡಬೇಕಿದೆ. ಹಾಗಾಗಿಯೇ ಡಿಎಪಿ ರಸಗೊಬ್ಬರ ಸರಬರಾಜು ಕಡಿಮೆ ಮಾಡಿದೆ. ರೈತರಿಗೆ ಅಗತ್ಯ ಗೊಬ್ಬರ ದೊರೆತರೆ ಮಾತ್ರ ಉತ್ತಮ ಬೆಳೆ ಬೆಳೆಯಲು ಸಾಧ್ಯ. ಸರ್ಕಾರ ತಕ್ಷಣ ರೈತರಿಗೆ ಅಗತ್ಯ ಇರುವಷ್ಟು ಡಿಎಪಿ ರಸಗೊಬ್ಬರ ಸರಬರಾಜು ಮಾಡಬೇಕು ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

‘ನಾವು ಮುಂಗಡವಾಗಿಯೇ ಹಣ ಪಾವತಿಸಲು ಸಿದ್ದ.ಆದರೆ ರಸಗೊಬ್ಬರವೇ ಸರಬರಾಜು ಮಾಡುತ್ತಿಲ್ಲ. ಬಿತ್ತನೆ ಸಮಯದಲ್ಲಿ ಹೆಚ್ಚಾಗಿ ರೈತರು ಖರೀದಿ ಮಾಡುವುದೇ ಡಿಎಪಿ. ಆದರೆ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡಿದರೆ ಮಾತ್ರ ಡಿಎಪಿ ನೀಡುತ್ತೇವೆ ಎಂದು ರಸಗೊಬ್ಬರ ಕಂಪನಿಗಳು ನಮಗೆ ಷರತ್ತು ವಿಧಿಸುತ್ತಾರೆ. ರೈತರಿಗೆ ನಾವು ಈ ಷರತ್ತು ವಿಧಿಸುತ್ತ ಇತರೆ ರಸಗೊಬ್ಬರಗಳನ್ನು ಖರೀದಿ ಮಾಡುವಂತೆ ಹೇಳಲು ಹೋದರೆ ಪ್ರತಿಭಟನೆ ನಡೆಸುತ್ತಾರೆ. ಹಾಗಾಗಿಯೇ ಕಂಪನಿಗಳುವರು ಎಷ್ಟು ಸರಬರಾಜು ಮಾಡಿದರೆ ಅಷ್ಟನ್ನು ಮಾತ್ರ ಮಾರಾಟ ಮಾಡುತ್ತೇವೆ’ ಎನ್ನುತ್ತಾರೆ ರಸಗೊಬ್ಬರ ಮಾರಾಟ ಮಾಡುವ ಅಂಗಡಿ ಮಾಲೀಕರೊಬ್ಬರು. 

ತಾಲ್ಲೂಕಿನಲ್ಲಿ ಈ ವರ್ಷದ ಮುಂಗಾರಿನಲ್ಲಿ 19,220 ಹೆಕ್ಟೇರ್ ಪ್ರದೇಶದಲ್ಲಿ ರೈತರು ರಾಗಿ ಬಿತ್ತನೆ ಮಾಡುವ ಗುರಿಯನ್ನು ಅಂದಾಜಿಸಲಾಗಿದೆ. ಇಲ್ಲಿಯವರೆಗೆ 1,413 ಹೆಕ್ಟೇರ್ ಪ್ರದೇಶದಲ್ಲಿ, ಅಂದರೆ ಶೇ.7.35ರಷ್ಟು ಬಿತ್ತನೆಯಾಗಿದೆ.  ಹಾಗೆಯೇ ಮುಸುಕಿನಜೋಳ 5,690 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ 667 ಹೆಕ್ಟೇರ್ ಪ್ರದೇಶದಲ್ಲಿ,ಅಂದರೆ ಶೇ.11.72 ರಷ್ಟು ಬಿತ್ತನೆಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]