ಬೆಂಗಳೂರು, (ಜುಲೈ.23); ಕನ್ನಡದ ಪ್ರಸಿದ್ಧ ಜಾನಪದ ಗಾಯಕ, ಲಾವಣಿ, ತತ್ವಪದಗಳ ಹರಿಹಾರ ಆಲೂರು ನಾಗಪ್ಪ ಅವರು ನಿಧನರಾಗಿದ್ದಾರೆ. ಮೃತರಿಗೆ 74 ವರ್ಷ ವಯಸ್ಸಾಗಿತ್ತು.
ಅನಾರೋಗ್ಯದ ಕಾರಣ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನಜಾವ ನಿಧನರಾಗಿದ್ದಾರೆ. ಪ್ರಸಿದ್ದ ನಿರೂಪಕಿ ಕನ್ನಡತಿ ದಿವ್ಯ ಆಲೂರ್ ಅವರ ತಂದೆಯಾದ ನಾಗಪ್ಪನವರ ಅಂತ್ಯ ಕ್ರಿಯೆ ಇಂದು ಗವಿಪುರಂ ಗುಟ್ಟಳ್ಳಿಯ ಬನ್ನಿಮಹಾಂಕಾಳಮ್ಮ ದೇವಸ್ಥಾನದ ಹತ್ತಿರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅಳಬ್ಯಾಡ ತಂಗಿ ಅಳಬ್ಯಾಡ, ಕನ್ನಿಕೇರಿ ಹುಡುಗಿಯೊಬ್ಬಳು, ನೀನು ಮದುಕಿಯಂಗೆ ಮುಸುಕಾಕೊಂಡು, ಬೆಂಗಳೂರ್ ಹುಡ್ಗ ಬಂದವನಂತ ಬಗ್ಗಿ ಬಗ್ಗಿ ನೋಡ್ತೀಯಲ್ಲೇ, ಹೆತ್ತ ತಾಯಿ ಋಣವ ತೀರಿಸೋ, ಎಚ್ಚರಾಗು ಕನ್ನಡಿಗ, ತವರಿಂದ ಕಳಿಸಿ ನನ್ನ ಮರಿಬೇಡ ಅಣ್ಣಯ್ಯ, ಇವು ಆಲೂರು ನಾಗಪ್ಪ ಅವರ ಪ್ರಸಿದ್ಧ ಹಾಡುಗಳಾಗಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….