ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ, ಎಲ್ಲಿ 20 ಕೋಟಿ ಉದ್ಯೋಗ ?: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಡಿಕೇರಿ, (ಜ.25): ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪಟ್ಟಿಯನ್ನು ವಿವರವಾಗಿ ಬಿಚ್ಚಿಟ್ಟರು.  

ಕೊಡಗು ಜಿಲ್ಲೆಯ ಹತ್ತಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿ, ಹಲವು ಕಾರ್ಯಗಳ ಶಂಕುಸ್ಥಾಪನೆ ನೆರವೇರಿಸಿ ಬೃಹತ್ ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿದರು. 

ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುವ ನೈತಿಕ ಹಕ್ಕು ಬಿಜೆಪಿ ಗೆ ಇಲ್ಲ. ಏಕೆಂದರೆ ದೇಶದಲ್ಲಿರುವ ಎಲ್ಲಾ ಪ್ರತಿಷ್ಠಿತ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳು, ಅಣೆಕಟ್ಟುಗಳು ಆಗಿದ್ದು ಬಿಜೆಪಿ ಯೇತರ ಕಾಂಗ್ರೆಸ್ ಮತ್ತು ಇತರೆ ಸರ್ಕಾರಗಳ ಅವಧಿಯಲ್ಲಿ. ನಿಮ್ಮ ಅವಧಿಯಲ್ಲಿ ಏನು ಮಾಡಿದಿರಿ ಹೇಳಿ ಎಂದು ಪ್ರದಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದರು. 

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ. ಮಾಡಿದ್ರಾ ? ಎಲ್ಲಿ 20 ಕೋಟಿ ಉದ್ಯೋಗ ? ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ? 

ದೇಶದ ಸಾಲ ತೀರಿಸಿ ಬಿಡ್ತೀನಿ ಅಂದ್ರಲ್ಲಾ ಮಾಡಿದ್ರಾ ? ನೀವು ಬರುವ ಮೊದಲು ದೇಶದ ಸಾಲ 53 ಲಕ್ಷ ಕೋಟಿ ಸಾಲ ಇತ್ತು. ನಿಮ್ಮ ಹತ್ತು ವರ್ಷಗಳಲ್ಲಿ ದೇಶದ ಸಾಲ 173 ಲಕ್ಷ ಕೋಟಿ ಆಗಿದೆ. ನಿಮ್ಮೊಬ್ಬರ ಅವಧಿಯಲ್ಲಿ 120 ಲಕ್ಷ ಕೋಟಿ ಮಾಡಿದ್ದೀರಿ. ಇದೆನಾ ನಿಮ್ಮ ಸಾಧನೆ? 

ಸಬ್ ಕಾ ಸಾಥ್, ಸಬ್ ಕಾ ವಿಕಾಸ್  ಎಲ್ಲಾದರೂ ಜಾರಿಯಾಗಿದೆಯಾ ? ಸಣ್ಣ ಉದಾಹರಣೆ ಇದ್ದರೆ ಹೇಳಿ ಮೋದಿಯವರೇ? 

ಅಚ್ಛೇ ದಿನ್ ಆಯೆಗಾ ಎಂದಿರಿ? ಕಹಾಂ ಹೈ ಅಚ್ಛೆ ದಿನ್ ಮೋದೀಜಿ…ಎಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿ ಅವರಿಗೆ ಸಾಲು ಸಾಲು ಪ್ರಶ್ನೆಗಳ ಮೂಲಕ ಟೀಕಿಸಿದರು. 

ಮಂಡಲ್ ಕಮಿಷನ್ ವರದಿ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದು ಪ್ರಧಾನಿಗಳಾಗಿದ್ದ ವಿ.ಪಿ.ಸಿಂಗ್ ಮತ್ತು ನರಸಿಂಹರಾಯರು. ನೀವೇನು ಮಾಡಿದೀರಿ ಹೇಳಿ ಮೋದಿಯವರೇ ಎಂದು ಪ್ರಶ್ನಿಸಿದರು. 

ಸಾಮಾಜಿಕ ನ್ಯಾಯ, ಸಂವಿಧಾನ, ಜಾತ್ಯತೀತತೆ, ಮೀಸಲಾತಿ ಪರವಾಗಿ ಯಾವತ್ತೂ ಮಾತನಾಡದ ನೀವು, ಈ ಬಗ್ಗೆ ಏನೂ ಕಾರ್ಯಕ್ರಮಗಳನ್ನು ನಿಮ್ಮ ಅವಧಿಯಲ್ಲಿ ಕೊಡಲಿಲ್ಲ ಏಕೆ ಎಂದರು. 

ಬಿಜೆಪಿ ಯವರು ತಮ್ಮ ಪ್ರಣಾಳಿಕೆಗಳಲ್ಲಿ ಕೊಟ್ಟ ಆಶ್ವಾಸನೆಗಳಲ್ಲಿ ಶೇ10 ರಷ್ಟನ್ನೂ ಜಾರಿ ಮಾಡಲೇ ಇಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡು ಜನರ ಋಣ ತೀರಿಸಿದ್ದೇವೆ. ಇದನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು. 

ನಾಡಿನ ಯುವಕರಿಗೆ ಉದ್ಯೋಗ ನೀಡದೆ, ಕೇವಲ ಯುವ ಸಮೂಹವನ್ನು, ವಿದ್ಯಾರ್ಥಿ ಸಮೂಹವನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿನ ಜತೆ ಚೆಲ್ಲಾಟ ಆಡಿದ್ದೀರಿ ಎಂದು ಹೇಳಿ ಬಿಜೆಪಿಯನ್ನು ತಿರಸ್ಕರಿಸುವಂತೆ ಕರೆ ನೀಡಿದರು. 

ನಾವು ತಂದ ಗ್ಯಾರಂಟಿಗಳನ್ನು ಮೋದಿಯವರು ಆಡಿಕೊಂಡರು. ಜಾರಿಗೆ ತಂದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದರು. ಈಗ ಅದೇ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಕಾಪಿ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಆರ್ಥಿಕವಾಗಿ ಇನ್ನೂ ಸದೃಡವಾಗಿದೆ ಎಂದು ಪ್ರತೀ ಗ್ಯಾರಂಟಿ ಕಾರ್ಯಕ್ರಮಗಳ ಜಾರಿ ಕುರಿತು ವಿವರಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಗೃಹ ಸಚಿವರಾದ ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ಮಾಜಿ ಸಚಿವ ಎಂ.ಸಿ.ನಾಣಯ್ಯ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೂಸ್ ಖಾನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!