ಇಂದು ಸಿದ್ದು ದಾಖಲೆಯ 15ನೇ ಬಜೆಟ್ ಮಂಡನೆ

ಬೆಂಗಳೂರು, (ಫೆ.16); ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆ ಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.

ಲೋಕಸಭಾ ಚುನಾವಣೆ ಸಾಮೀಪ್ಯವಿರುವ ಈ ಹಂತದಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಎರಡನೇ ಅವಧಿಯ ಎರಡನೇ ಬಜೆಟ್ ಅನ್ನು ಶುಕ್ರವಾರ ಬೆಳಗ್ಗೆ 10.15ಕ್ಕೆ ಅವರು ಪ್ರಸಕ್ತ ಅವಧಿಯ ಮೊದಲ ಬಜೆಟ್‌ನಲ್ಲೇ ಐದು ಗ್ಯಾರಂಟಿ ಅನುಷ್ಠಾನಗೊಳಿಸಿದ ಸಿದ್ದರಾಮಯ್ಯ ಇದೀಗ ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲಿ 2024-25 ಸಾಲಿನ ಬಜೆಟ್ ಮಂಡಿಸುತ್ತಿರುವುದರಿಂದ ಮತ್ತೆ ಜನಪ್ರಿಯ ಯೋಜನೆಗಳ ಸುರಿಮಳೆ ಸುರಿಸುವರೋ ಅಥವಾ ಗ್ಯಾರಂಟಿ ಹೊರೆ ತಗ್ಗಿಸುವ ಆರ್ಥಿಕ ಶಿಸ್ತಿಗೆ ಆದ್ಯತೆ ನೀಡುವರೋ ಎಂಬ ಕುತೂಹಲವೂ ಇದೆ.

ಮೂಲಗಳ ಪ್ರಕಾರ 25ರಿಂದ 30 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಭರವಸೆ ಮೂಲಕ ಉದ್ಯೋಗ ಗ್ಯಾರಂಟಿ ನೀಡಲಿದ್ದಾರೆ. ತನ್ಮೂಲಕ ಖಾಲಿಯಿರುವ 2.5 ಲಕ್ಷ ಸರ್ಕಾರ ಹುದ್ದೆಗಳನ್ನು ಸ್ವಲ್ಪ ಮಟ್ಟಿಗಾದರೂ ತುಂಬಿ ಕೇಂದ್ರಕ್ಕೆ ಸಂದೇಶ ರವಾನಿಸಲಿದ್ದಾರೆ ಎನ್ನಲಾಗಿದೆ. ಶುಕ್ರವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ರಾಹುಕಾಲ ಇರುವುದರಿಂದ ಬೆಳಗ್ಗೆ 10.15 ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಭಾಷಣ ಆರಂಭಿಸಲಿದ್ದಾರೆ.

ಲೋಕಸಭೆ ಚುನಾವಣೆ, ರಾಜ್ಯದಲ್ಲಿ ತೀವ್ರ ಬರಗಾಲದ ಜತೆಗೆ 9 ತಿಂಗಳಿಂದ ಅನುದಾನ ಬರ ಎದುರಿಸುತ್ತಿರುವ ಶಾಸಕರ ಆಶೋತ್ತರಗಳಿಗೂ ಮುಖ್ಯಮಂತ್ರಿಗಳು ಸ್ಪಂದಿಸಬೇಕಿದೆ. ಈಗಾಗಲೇ ಅನುದಾನ ಇಲ್ಲದೆ ಶಾಸಕರು ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿದ್ದಾರೆ. ಆದರೆ ಶಾಸಕರಿಗೆ ಅನುದಾನ ಜನತೆಯ ನೀಡುವ ಜತೆಗೆ ನಿರೀಕ್ಷೆಗಳನ್ನೂ ಕಾಪಿಡುವ ಒತ್ತಡದಲ್ಲಿ ಬಜೆಟ್ ತಜ್ಞರು ಎಂದೇ ಹೆಸರಾಗಿರುವ ಸಿದ್ದರಾಮಯ್ಯ ಸಿಲುಕಿದ್ದಾರೆ. ಹೀಗಾಗಿ ಕೃಷಿ, ನೀರಾವರಿ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ರೈತರು, ಕಾರ್ಮಿಕರು, ಮಹಿಳೆಯರು, ಮೀನುಗಾರರು, ನೇಕಾರರು ಸೇರಿದಂತೆ ವಿವಿಧ ವರ್ಗಗಳಿಗೆ ಯಾವ ನೀಡಲಿದ್ದಾರೆ ಮೂಡಿಸಿದೆ. ಕಾರ್ಯಕ್ರಮಗಳನ್ನು ಎಂಬುದು ಕುತೂಹಲ

ಗ್ಯಾರಂಟಿಗಳ ಅನುಷ್ಠಾನದಿಂದ ಆರ್ಥಿಕತೆ ಮೇಲೆ ಹೊರೆ ಬಿದ್ದಿದೆ. ಕಳೆದ ವರ್ಷ 8 ತಿಂಗಳಿಗೆ ಸೀಮಿತವಾಗಿಯೇ 38,000 ಕೋಟಿ ರೂ. ವೆಚ್ಚವಾಗಿದೆ. ಈ ಬಾರಿ 12 ತಿಂಗಳ ಪೂರ್ಣಾವಧಿಗೆ 55 ರಿಂದ 58 ಸಾವಿರ ಕೋಟಿ ರೂ. ಕೇವಲ ಗ್ಯಾರಂಟಿಗಳ ಅನುಷ್ಠಾನಕ್ಕೆ ಬೇಕಾಗಿದೆ. ನೀರಾವರಿ ಯೋಜನೆಗಳಿಗೆ 60-70 ಸಾವಿರ ಕೋಟಿ ರೂ. ಅನುದಾನ ಬೇಕಿದೆ.

ನೌಕರರ ವೇತನ, ಪಿಂಚಣಿಗೆ 80-90 ಸಾವಿರ ಕೋಟಿ ರೂ., ಬಡ್ಡಿ ಹಾಗೂ ಅಸಲು ಪಾವತಿ 37-40 ಸಾವಿರ ಕೋಟಿ ರೂ., ಗುತ್ತಿಗೆದಾರರಿಗೆ ತಕ್ಷಣ ಪಾವತಿ 25 ಸಾವಿರ ಕೋಟಿ ರೈ., ಚಾಲ್ತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು 1.5 ಲಕ್ಷ ಕೋಟಿ, ಸರ್ಕಾರಿನೌಕರರ ವೇತನ ಆಯೋಗ ಬೇಡಿಕೆ ಹೀಗೆ ಸಾಲು-ಸಾಲು ಆರ್ಥಿಕ ಇಕ್ಕಟ್ಟುಗಳಲ್ಲಿ ಸರ್ಕಾರ ಇದೆ.

ಜತೆಗೆ ತವರು ಜಿಲ್ಲೆ ಮೈಸೂರು, ರಾಜಕೀಯ ಪುನರ್‌ಜನ್ಮ ನೀಡಿದ್ದ ಬಾಗಲಕೋಟೆ, ಗಡಿ ಜಿಲ್ಲೆ, ಕಲ್ಯಾಣ ಕರ್ನಾಟಕ ಹೀಗೆ ವಿವಿಧ ಭಾಗಗಳ ಜನರು ಬೆಟ್ಟದಷ್ಟು ನಿರೀಕ್ಷೆ ಇಟ್ಟಿದ್ದಾರೆ. ಗೋಕಾಕ್, ಚಿಕ್ಕೋಡಿ ಸೇರಿದಂತೆ ಹಲವು ಹೊಸ ಜಿಲ್ಲೆಗಳ ಬೇಡಿಕೆಯೂ ಸರ್ಕಾರದ ಮುಂದಿದೆ. ಮಳೆ ಕೈಕೊಟ್ಟಿದ್ದರಿಂದ ರೈತರು ಸಾಲ ಮನ್ನಾಗೂ ಬೇಡಿಕೆ ಇಟ್ಟಿದ್ದು, ಕನಿಷ್ಠ ಬಡ್ಡಿ ಮನ್ನಾ ಆದರೂ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಇದರ ರೈತರ ಬಡ್ಡಿಯ ಹೊರೆ ಕಡಿಮೆ ಮಾಡಲು ಸಹಕಾರ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಮಯಗಳನ್ನು ಮಾಡುವ ಸಾಧ್ಯತೆಯಿದೆ. 

ಗ್ಯಾರಂಟಿ ಯೋಜನೆ ಗಳ ಅನುಷ್ಠಾನದ ಜತೆಗೆ ಹೊಸಕಾರ್ಯಕ್ರಮ ನೀಡಲು ಆರ್ಥಿಕ ಹೊರೆಯಾದರೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡದಂತೆ ನಿಭಾಯಿಸಲು ಪ್ರಯತ್ನಿಸಲಾಗುತ್ತಿದೆ. ಆದಾಗ್ಯೂ ಅಬಕಾರಿ ತೆರಿಗೆ ಹೆಚ್ಚಳ ಮಾಡುವ ಸಾಧ್ಯತೆಯಿದೆ. ತನ್ಮೂಲಕ ಮದ್ಯಪ್ರಿಯರಿಗೆ ಮತ್ತೆ ಹೊರೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!