ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಸೆ.17): ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ  ಹೆಚ್ಚು ಮಾಡಲಾಗುವುದು ಎಂದು ಭರವಸೆ  ನೀಡಿದರು. 

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು: ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ  ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ  ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ: ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ. 

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ: ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ  ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು. 

 ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ  ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು: ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ  ದ್ವೇಷಿಸದಿರಿ: ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು  ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ.  ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ  ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು. 

ಜಾತಿ ವ್ಯವಸ್ಥೆಗೆ  ಚಾಲನೆ ಇಲ್ಲ:  ಶಿಕ್ಷಣ ಪಡೆಯದಿದ್ದರೆ  ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ  ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಯಾವೊಬ್ಬ ಮುಖಂಡರು ನನ್ನ ಸಂಪರ್ಕದಲ್ಲಿ ಇಲ್ಲ; ಹೆಚ್.ಡಿ.

ನನ್ನ ಸಂಪರ್ಕದಲ್ಲಿ ಯಾವೊಬ್ಬ ನಾಯಕರು ಇಲ್ಲ. ಒಂದು ವೇಳೆ ಸಂಪರ್ಕಕ್ಕೆ ಬಂದರೆ ನಮ್ಮ ಪಕ್ಷದ ಹಿರಿಯ ನಾಯಕನ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120931"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]