ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಂಗಳೂರು, (ಸೆ.17): ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು  ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ  ಹೆಚ್ಚು ಮಾಡಲಾಗುವುದು ಎಂದು ಭರವಸೆ  ನೀಡಿದರು. 

ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು: ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ  ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ  ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟ: ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ. 

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ: ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ  ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು. 

 ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ  ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು: ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ  ದ್ವೇಷಿಸದಿರಿ: ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು  ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ.  ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ  ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು. 

ಜಾತಿ ವ್ಯವಸ್ಥೆಗೆ  ಚಾಲನೆ ಇಲ್ಲ:  ಶಿಕ್ಷಣ ಪಡೆಯದಿದ್ದರೆ  ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ  ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!