ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ರಾಜ್ಯದ ಹಕ್ಕು ಕೇಳಿ ಎಂದರೆ ಬಿಜೆಪಿ ಸಂಸದರು ಚಳಿಜ್ವರ ಬಂದಂಗೆ ನಡುಗ್ತಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜು 20): ನಾನು ಆಯವ್ಯಯ ಸಿದ್ಧತೆಗೆ ಕುಳಿತಾಗ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ನೆಹರು, ಮಹಾತ್ಮ ಫುಲೆ, ಕುವೆಂಪು ನೆನಪಾಗುತ್ತಾರೆ. ಇವರೆಲ್ಲರ ಕನಸಿನ ನಾಡನ್ನು ಕಟ್ಟುವ ಆಶಯದ ಬಜೆಟ್ ರೂಪಿಸಬೇಕು ಎನ್ನುವುದು ನನ್ನ  ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ವಿಧಾನಸಭೆಯಲ್ಲಿ ಬಜೆಟ್ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. 

ಸಾಮಾಜಿಕ ಸ್ವಾತಂತ್ರ್ಯ ಇಲ್ಲದ ರಾಜಕೀಯ ಸ್ವಾತಂತ್ರ್ಯ ಏನು ಪ್ರಯೋಜನ ಎಂದು ಡಾ.ಬಾಬಾಸಾಹೇಬ್ ಪ್ರಶ್ನಿಸಿದ್ದರು. ಅದಕ್ಕಾಗಿಯೇ ಅವರು, “ರಾಜಕೀಯ ಪ್ರಭುತ್ವದ ತಳಪಾಯ ಸಾಮಾಜಿಕ ಪ್ರಭುತ್ವದಲ್ಲಿರಬೇಕು” ಎಂದಿದ್ದರು. ಬಸವಣ್ಣ ದಾಸೋಹದ ಮಹತ್ವ ಹೇಳಿದ್ದರು. ಹೀಗೆ‌ ಈ ಎಲ್ಲಾ ಮಹಾನುಭಾವರ ಸರ್ವರನ್ನೂ ಒಳಗೊಳ್ಳುವ ಪ್ರಗತಿಯ ಮಾದರಿಯನ್ನು ನಾನು ಪಾಲಿಸಿದ್ದೇನೆ. ಸರ್ವರ  ಅಭಿವೃದ್ಧಿಗೆ ಪೂರಕವಾದ ಬಜೆಟ್ ರೂಪಿಸಿದ್ದೇನೆ. 

ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಬಜೆಟ್ ನಲ್ಲಿ ತಂದಿದ್ದೇವೆ. ಬಜೆಟ್ ನಲ್ಲಿ ಹೇಳಿದ್ದಕ್ಕೆ ಹಣ ಕೊಟ್ಟು ಐದು ಗ್ಯಾರಂಟಿಗಳಲ್ಲಿ ನಾಲ್ಕನ್ನು ಆಗಲೇ ಜಾರಿ ಮಾಡಿದ್ದೇವೆ. 

ನಾವು ಹೇಳಿದ್ದನ್ನು ಮಾಡಿದ್ದೇವೆ. ಬಿಜೆಪಿಯವರು “ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ” ಎಂದರು. ಆದರೆ ತಾವು ಹೇಳಿದಂತೆ ನಡೆದುಕೊಳ್ಳಲಿಲ್ಲ. ಹೀಗಾಗಿ ಬಿಜೆಪಿಯ ಟೊಳ್ಳುತನ, ಬೇಜವಾಬ್ದಾರಿತನ, ನಕಲಿತನ ನಾಡಿನ ಜನರೆದುರು ಬೆತ್ತಲಾಗಿದೆ ಎಂದರು. 

ಗುಜರಾತ್ ಮಾದರಿ ಭಾಷಣ ಕೊಚ್ಚುತ್ತಿದ್ದ ಬಿಜೆಪಿಯವರು ಕರ್ನಾಟಕದ ಗ್ಯಾರಂಟಿ ಮಾದರಿಗಳಿಂದ, ಕರ್ನಾಟಕದ ಅಭಿವೃದ್ಧಿ ಮಾದರಿಗೆ ಹೆದರಿದ್ದಾರೆ. 

ದುಡಿಯುವ ಜನರ ಜೇಬಿನಲ್ಲಿ ಹಣ ಇರಬೇಕು, ಶ್ರಮಿಕ ಜನರ ಜೇಬಿಗೆ ಹಣ ಹಾಕಬೇಕು ಎನ್ನುವುದು ಕರ್ನಾಟಕ ಮಾದರಿ. ಜನರ ಜೇಬಿಗೆ ಕೈ ಹಾಕಿ ಕಿತ್ತುಕೊಳ್ಳಬೇಕು ಎನ್ನುವುದು ಬಿಜೆಪಿಯವರ ಗುಜರಾತ್ ಮಾದರಿ. 

ಗುಜರಾತ್ ಮಾದರಿಯಲ್ಲಿ ಪೆನ್ನು, ಪೆನ್ಸಿಲ್, ಬಿಸ್ಕೆಟ್, ಬೆಣ್ಣೆ, ಮಂಡಕ್ಕಿ ಮೇಲೂ ಟ್ಯಾಕ್ಸ್ ಹಾಕಿದರು. ಕರ್ನಾಟಕ ಮಾದರಿಯಲ್ಲಿ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 6 ರಿಂದ 8 ಸಾವಿರ ರೂಪಾಯಿ ಉಳಿತಾಯ, ಉಪಯೋಗ ಆಗುವಂತಹ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಪ್ರತೀ ದಿನ ನಾಡಿನ ಜನತೆ ನಮ್ಮ ಗ್ಯಾರಂಟಿಗಳ ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತೀ ದಿನ ಪ್ರತೀ ಕುಟುಂಬಕ್ಕೆ ಸರ್ಕಾರದ ಸ್ಪಂದನೆ ಸಿಗುತ್ತಿದೆ. ಇದು ಬಿಜೆಪಿಯ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ. ಅವರ ಹೊಟ್ಟೆಕಿಚ್ಚು ಅವರನ್ನೇ ಸುಡುತ್ತದೆ ಎಂದರು. 

ವಿಶ್ವಗುರುವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ಬಿಜೆಪಿಯವರು ವಿಶ್ವಗುರುವಿನ ಬಗ್ಗೆ ಭರ್ಜರಿ ಭಾಷಣ ಮಾಡುತ್ತಾರೆ. ಆ ವಿಶ್ವಗುರುವಿಗೆ ತಮ್ಮ ಪಕ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಯಕನನ್ನು ಆರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬರೀ ಭಾಷಣದಿಂದ ನಾಡಿನ, ದೇಶದ ಜನರ ಸಂಕಷ್ಟ ಪರಿಹಾರ ಆಗುವುದಿಲ್ಲ ಎನ್ನುವ ಪಾಠವನ್ನು  ವಿಶ್ವಗುರುವಿಗೆ ಜನ ಕಲಿಸಿದ್ದಾರೆ ಎಂದರು. 

ಮಾರ್ಷಲ್ ಇಲ್ಲದಿದ್ದರೆ ಗತಿ ಏನು?: ಒಬ್ಬ ದಲಿತ ಡೆಪ್ಯುಟಿ ಸ್ಪೀಕರ್ ಗೆ ಬಿಜೆಪಿ ನಡೆಸಿಕೊಂಡ ರೀತಿ ಅತ್ಯಂತ ಅನಾಗರಿಕತನದ್ದಾಗಿತ್ತು. ಮಾರ್ಷಲ್ ಗಳು ಇಲ್ಲದೇ ಹೋಗಿದ್ದರೆ ಅವರ ಗತಿ ಏನಾಗುತ್ತಿತ್ತೋ ಗೊತ್ತಿಲ್ಲ. 

ಬಿಜೆಪಿಯವರು ಅವರ ಮೇಲೆ ದೈಹಿಕ‌ ಹಲ್ಲೆಯನ್ನೂ ನಡೆಸುತ್ತಿದ್ದರೇನೋ ಗೊತ್ತಿಲ್ಲ ಎನ್ನುತ್ತಾ ಸದನದಲ್ಲಿ ಬಿಜೆಪಿಯವರ ವರ್ತನೆಯ ಭೀಕರತೆಯನ್ನು ಖಂಡಿಸುವುದಾಗಿ ಹೇಳಿದರು. 

ಮೋದಿ ಕಂಡರೆ ಚಳಿಜ್ವರ ಬಂದಂಗೆ ನಡುಗುತ್ತಾರೆ: 15ನೇ ಹಣಕಾಸು ಆಯೋಗದಿಂದ ಕರ್ನಾಟಕ ನಾಡಿಗೆ ಅಪಾರ ಅನ್ಯಾಯ ಆಯಿತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನಮ್ಮ ಪಾಲಿನ, ನಮ್ಮ ಹಕ್ಕಾಗಿದ್ದ 5495 ಕೋಟಿ ಬರಲಿಲ್ಲ. 

ಕರ್ನಾಟಕದಿಂದಲೇ ಆಯ್ಕೆ ಆಗಿರುವ ನಿರ್ಮಲಾ ಸೀತಾರಾಮನ್ ಅವರಿಂದ ಇಷ್ಟು ದೊಡ್ಡ ಅನ್ಯಾಯ ಆಯಿತು. ಇದನ್ನು ಕರ್ನಾಟಕದಿಂದ ಆಯ್ಕೆ ಆಗಿರುವ ಸಂಸದರು ಪ್ರಶ್ನಿಸಬೇಕಿತ್ತು. ರಾಜ್ಯ ಬಿಜೆಪಿ ನಾಯಕರು, ಮುಖ್ಯಮಂತ್ರಿಗಳು ಪ್ರಶ್ನಿಸಬೇಕಿತ್ತು. ಆದರೆ ಇವರೆಲ್ಲಾ ಮೋದಿ ಅವರ ಎದುರು ನಿಂತು ಕನ್ನಡಿಗರ ಪಾಲನ್ನು ಕೇಳಲು ಚಳಿ ಜ್ವರ ಬಂದವರಂತೆ ನಡುಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]