ಆಗಸ್ಟ್‌ 26ರಂದು ಮಣ್ಣಿನ ಮಕ್ಕಳಿಗೆ ಉದ್ಯೋಗ

ಬೆಂಗಳೂರು, (ಆ.04): ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಜನ್ಮದಿನದ ಅಂಗವಾಗಿ ಒಕ್ಕಲಿಗ ಯುವ ಬ್ರಿಗೇಡ್ ಮತ್ತು ಎನ್‌ಆರ್‌ಐ ಒಕ್ಕಲಿಗ ಬ್ರಿಗೇಡ್ ವತಿಯಿಂದ ಆಗಸ್ಟ್ 26ರಂದು ‘ಉದ್ಯೋಗ ಮೇಳ’ ಆಯೋಜಿಸಲಾಗಿದೆ.

ಮರಿಯಪ್ಪನಪಾಳ್ಯ ಸಮೀಪದ ಜ್ಞಾನಭಾರತಿ ರಿಂಗ್ ರಸ್ತೆಯ 2ನೇ ಬ್ಲಾಕ್‌ನಲ್ಲಿರುವ ಇಂಡಿಯನ್ ಹೈಸ್ಕೂಲ್ ಆವರಣದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ‘ಮಣ್ಣಿನ ಮಕ್ಕಳಿಗೆ ಉದ್ಯೋಗ’ ಪರಿಕಲ್ಪನೆಯಡಿ ಮೇಳ ನಡೆಯಲಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಮತ್ತು ಎನ್‌ಆರ್‌ಐ ಒಕ್ಕಲಿಗ ಬ್ರಿಗೇಡ್‌ನ ಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ.

ಹೆಚ್ಚಿನ ವಿವರಕ್ಕೆ ದೂ: 9945282846 ಸಂಪರ್ಕಿಸಬಹುದಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….