ಅಧಿಕಾರಿಗಳ ತಂಡದಿಂದ ಗಣಪತಿ ವಿಗ್ರಹ ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ; ಪಿಓಪಿ ಗಣಪತಿ ಸೀಜ್

ಧಾರವಾಡ, (ಆ.25): ಮಹಾನಗರ ಹಾಗೂ ಜಿಲ್ಲೆಯಲ್ಲಿ ನಿಷೇಧಿತ ಪಿಓಪಿ ಗಣಪತಿ ವಿಗ್ರಹಗಳ ದಾಸ್ತಾನು ಇರುವ ಕುರಿತು ಜಿಲ್ಲಾಡಳಿತಕ್ಕೆ ಸಾರ್ವಜನಿಕರಿಂದ ಮಾಹಿತಿ ಲಭಿಸಿದ್ದರಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ನಿರ್ದೇಶನದಂತೆ ಉಪವಿಭಾಗಾಧಿಕಾರಿ ಅಶೋಕ ತೆಲಿ ನೇತೃತ್ವದ ಅಧಿಕಾರಿಗಳ ತಂಡವು ಧಾರವಾಡ ನಗರದ ವಿವಿಧ ವಿಗ್ರಹ ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ ಮಾಡಿ, ಪಿಓಪಿ ವಿಗ್ರಹ ಕುರಿತು ಪರಿಶೀಲಿಸಿತು. 

ಧಾರವಾಡ ಸಿ.ಬಿ.ನಗರದ ಲಿಂಗಾಯತ ಭವನ ಪಕ್ಕದ ನಿರ್ಮಾಣ ಕಟ್ಟಡದಲ್ಲಿ ಮಂಜುನಾಥ ಬೆಳಗಾಂವಕರ ಅವರು  ಮಾರಾಟಕ್ಕಾಗಿ ಸಂಗ್ರಹಿಸಿದ್ದ ಗಣಪತಿ ವಿಗ್ರಹಗಳ ದಾಸ್ತಾನು ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಲಾಯಿತು. 

ಬಹುತೇಕ ವಿಗ್ರಹಗಳು ಪಿಓಪಿ, ಮಣ್ಣು ಮಿಶ್ರಿತ ಪಿಓಪಿ, ಕೃತಕ ಬಣ್ಣ ಲೇಪಿತ, ಉಸುಕು ಮಿಶ್ರಿತ ಪಿಓಪಿ ಗಣಪತಿ ವಿಗ್ರಹಗಳು ಕಂಡು ಬಂದಿದ್ದರಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ವಿಗ್ರಹಗಳ ಮಾದರಿ ವಸ್ತುಗಳನ್ನು ಪ್ರಯೋಗಾಲಯದ ಪರೀಕ್ಷೆಗಾಗಿ ಸಂಗ್ರಹಿಸಿದರು.

ನಂತರ ಪರಿಸರ ಭವನದ ಮುಂಭಾಗದ ಕಟ್ಟಡದ ನೆಲ ಮಹಡಿಯಲ್ಲಿ ಸಂಗ್ರಹಿಸಿದ್ದ ಪಿಓಪಿ ಗಣಪತಿ ವಿಗ್ರಹಗಳ ಕೇಂದ್ರಕ್ಕೆ ಭೇಟಿ ನೀಡಿ, ಅಧಿಕಾರಿಗಳ ತಂಡ ಪರಿಶೀಲಿಸಿತು. ಇಲ್ಲಿದ್ದ ಶೇ. 90 ರಷ್ಟು ವಿಗ್ರಹಗಳು ಪಿಓಪಿ ವಿಗ್ರಹಗಳಾಗಿರದ್ದರಿಂದ ತಕ್ಷಣ ಎಲ್ಲ ವಿಗ್ರಹಗಳನ್ನು ಜಪ್ತಿ ಮಾಡಿ, ಸಾಮಾನ್ಯ ಕೇಂದ್ರಕ್ಕೆ ಸಾಗಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಎಸಿ ಅಶೋಕ ತೆಲಿ ಅವರು ಸೂಚಿಸಿದರು. ಮತ್ತು ಮಾರಾಟಗಾರನ ಮೇಲೆ ಕಾನೂನು ಕ್ರಮ ಜರುಗಿಸಲು ತನಿಖೆ ಮಾಡಿ, ಪ್ರಕರಣ ದಾಖಲಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅವರು ತಿಳಿಸಿದರು.

ವಿವಿಧ ಕಡೆಗಳಲ್ಲಿನ ಗಣಪತಿ ಮೂರ್ತಿ ಮಾರಾಟ ಮಳಿಗೆಗೆ ಭೇಟಿ ನೀಡಿ ಪಿಓಪಿ ಗಣಪತಿ ವಿಗ್ರಹಗಳನ್ನು ಅಧಿಕಾರಿಗಳು ಸಿಜ್ ಮಾಡಿದರು.

ನಂತರ ಉಪ ವಿಭಾಗಾಧಿಕಾರಿ ಅಶೋಕ ತೆಲಿ ಮಾತನಾಡಿ, 2016ರ ಕಾಯಿದೆ ಪ್ರಕಾರ ಪಿಒಪಿ ಗಣಪತಿ ಬ್ಯಾನ್ ಆಗಿದೆ ಆದರೂ ಕೆಲವಡೆ ಪಿಒಪಿ ಬಂದಿವೆ ಅಂತಾ ಮಾಹಿತಿ ಇದೆ ಈಗಾಗಲೇ ಸಾಕಷ್ಟು ಜಾಗೃತಿ ಮಾಡಿದ್ದೇವೆ. ಆದರೂ ಕೆಲವೆಡೆ ವಿಗ್ರಹಗಳು ಇರುವ ಮಾಹಿತಿಗಳು ಬರುತ್ತಿವೆ. ಅಧಿಕಾರಿಗಳ ತಂಡ ಖುದ್ದು ಪರಿಶೀಲನೆ ಮಾಡುತ್ತಿದೆ. ಪೊಲೀಸ್, ಪಾಲಿಕೆ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಸಹಯೋಗದಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಜನರು ಸಹ ಜಾಗೃತ ರಾಗಿ ಪಿಒಪಿ ಗಣಪತಿ ವಿಗ್ರಹ ತೆಗೆದುಕೊಳ್ಳಬಾರದು ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಜಗದೀಶ ಐ.ಎಚ್. ಅವರು ಮಾತನಾಡಿ, ಮಣ್ಣಿನ ವಿಗ್ರಹ ಭಾರ ಇರುತ್ತವೆ. ಪಿಒಪಿ ಗಣಪತಿ ಭಾರ ಇರುವುದಿಲ್ಲ. ತೂಕದ ವ್ಯತ್ಯಾಸದಲ್ಲಿ ಗೊತ್ತಾಗುತ್ತದೆ. ಪಿಓಪಿ ಅಥವಾ ಮಣ್ಣಿನ ವಿಗ್ರಹ ಕುರಿತು ಸಂಶಯ ಬಂದಲ್ಲಿ ವಿಗ್ರಹವನ್ನು ಪರೀಕ್ಷೆ ಮಾಡಲು ಮಾಹಿತಿ ಪಡೆಯುತ್ತೆವೆ. ಪ್ರಯೋಗಾಲಯದಲ್ಲಿ ಪರೀಕ್ಷಿಸಿ ಕ್ರಮ ಕೈಗೊಳ್ಳುತೆವೆ ಎಂದು ಅವರು ಹೇಳಿದರು.

ಮಹಾನಗರ ಪಾಲಿಕೆಯ ಪರಿಸರ ಅಧಿಕಾರಿ ಸಂತೋಷ ಅವರು ಮಾತನಾಡಿ, ಪಿಓಪಿ ವಿಗ್ರಹಗಳ ಮಾರಾಟ, ಸಾಗಾಣಿಕೆ ಆಗದಂತೆ ಪಾಲಿಕೆಯ ಆಯುಕ್ತರ ನಿರ್ದೇಶನದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಗಳನ್ನು ರಚಿಸಲಾಗಿದೆ. ಪಿಓಪಿ ವಿಗ್ರಹಗಳನ್ನು ಜಪ್ತಿ ಮಾಡಿ, ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.

ದಿಢೀರ್ ದಾಳಿಯಲ್ಲಿ ಕಂದಾಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಮಹಾನಗರ ಪಾಲಿಕೆ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!