ದೌರ್ಜನ್ಯ ತಡೆಗೆ ಪೊಲೀಸು-ಕಾನೂನು-ಸಮಾಜ ಕಲ್ಯಾಣ ಮತ್ತು ಕಂದಾಯ ಇಲಾಖೆ ನಡುವೆ ಸಮನ್ವಯ ಇರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.7): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ಕಡಿಮೆ ಮಾಡುವ ಜತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್ ಇಲಾಖೆ, ಕಾನೂನು ಇಲಾಖೆ, ಸಮಾಜ‌ಕಲ್ಯಾಣ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು 3 ಗಂಟೆಗಳ ಕಾಲ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಬಳಿಕ ಅಧಿಕಾರಿ ವರ್ಗಕ್ಕೆ ಈ ಸೂಚನೆ ನೀಡಿದರು.  

ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳಿಗೆ ಸೂಕ್ತ ನ್ಯಾಯ ಒದಗಿಸಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣದಿಂದ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ,  ನಾಗರಿಕ ಹಕ್ಕು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸರ್ಕಾರ ಈ ಕಾಯ್ದೆಗೆ ಹೆಚ್ಚಿನ‌ ಮಹತ್ವ ನೀಡಿ ಗಂಭೀರವಾಗಿ ಪರಿಗಣಿಸುತ್ತದೆ. ಸಂತ್ರಸ್ತರಿಗೆ ರಕ್ಷಣೆ ಸಿಗಬೇಕು. ಈ ಉದ್ದೇಶ ಸಫಲವಾಗಲು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್‌ ಇಲಾಖೆ, ಪ್ರಾಸಿಕ್ಯೂಷನ್‌ ಇಲಾಖೆ, ಕಂದಾಯ ಇಲಾಖೆ ಸಮನ್ವಯದೊಂದಿಗೆ ಕೆಲಸ ಮಾಡಬೇಕು. 

ಸಮನ್ವಯ ಇದ್ದಾಗ ಮಾತ್ರ ವ್ಯವಸ್ಥಿತವಾಗಿ ಈ ವರ್ಗದ ಜನರಿಗೆ ನ್ಯಾಯ ಸಿಗಲು ಸಾಧ್ಯವಾಗುತ್ತದೆ ಎಂದರು. 

ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಎರಡು ತಿಂಗಳೊಳಗೆ ಚಾರ್ಜ್‌ ಶೀಟ್‌ ಹಾಕುವ ಬಗ್ಗೆ ಎಸ್‌.ಪಿ. ಗಳಿಗೆ, ಡಿಸಿಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಪೊಲೀಸರು ಜಾಗರೂಕತೆಯಿಂದ ತನಿಖೆ ಮಾಡಬೇಕು. ಇವುಗಳನ್ನು ವಿಶೇಷ ಪ್ರಕರಣ ವೆಂದು ಪರಿಗಣಿಸಿ ಶಿಕ್ಷೆ ಕೊಡಿಸಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು. 

ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಶೇ. 3.44 ರಷ್ಟಿರುವುದು ನಾಚಿಕೆಯ ಸಂಗತಿ. ಇದನ್ನು ಇನ್ನಷ್ಟು ಹೆಚ್ಚಿಸುವಂತೆ ಸೂಚಿಸಿದರು. ಪ್ರಜ್ಞಾವಂತ ಸಮಾಜವಿರುವ ನಮ್ಮ ರಾಜ್ಯದಲ್ಲಿ ಇಷ್ಟು ಕಡಿಮೆ ಇರುವುದು ತಲೆ ತಗ್ಗಿಸುವ ವಿಚಾರ. ತಹಸೀಲ್ದಾರರು, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಇದರ ಪ್ರಗತಿ ಪರಿಶೀಲನೆ ಮಾಡಬೇಕು. ಪೊಲೀಸ್‌ ವರಿಷ್ಠಾಧಿಕಾರಿಗಳು ಈ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಡಿ.ಜಿ.ಪಿ. ಅವರಿಗೆ ವರದಿ ಕಳುಹಿಸಬೇಕು ಎಂದು ಖಡಕ್ ಸೂಚನೆ ನೀಡಿದರು. 

ತಾಲ್ಲೂಕು, ಜಿಲ್ಲಾ ಮಟ್ಟದ ಕೆಡಿಪಿ ಸಭೆಗಳಲ್ಲಿ ಈ ವಿಷಯದ ಕುರಿತು ಕಡ್ಡಾಯವಾಗಿ ಪ್ರಗತಿ ಪರಿಶೀಲನೆ ಆಗಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆಯನ್ನು ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು. ಸಾಕ್ಷ್ಯ ವಿಫಲ ಆಗದಂತೆ ಪೊಲೀಸರು ಹೆಚ್ಚಿನ ಗಮನ ಕೊಡಬೇಕು. 

ರಾಜಕಾರಣಿಗಳು ಈ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯ ಪ್ರವೇಶಿಸದೆ ಪೊಲೀಸರಿಗೆ ಸಹಕಾರ ನೀಡಬೇಕು. ಪ್ರತಿ ಪ್ರಕರಣ ದಾಖಲಿಸುವಾಗ ಪೊಲೀಸರು ತಮ್ಮ ವಿವೇಚನೆಯನ್ನು ಬಳಸಬೇಕು. ಚಾರ್ಜ್‌ ಶೀಟ್‌ ಸಲ್ಲಿಕೆ ವಿಳಂಬವಾದರೆ ಆರೋಪಿಗಳು ಜಾಮೀನು ಪಡೆದು ಹೊರಬಂದು ಮತ್ತೊಮ್ಮೆ ಅಪರಾಧ ಎಸಗುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದರು. 

ಮುಂದಿನ ಸಭೆಯಲ್ಲಿ ವಿಚಾರಣೆ ಬಾಕಿ ಇರುವ ಪ್ರಕರಣಗಳ ಅವಧಿ ಮತ್ತು ಇತರ ಮಾಹಿತಿಯನ್ನು ಒದಗಿಸಬೇಕು. ಹೆಚ್ಚು ಪ್ರಕರಣಗಳು ಬಾಕಿ ಇರುವಲ್ಲಿ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸಲಾಗುವುದು. ಅನುಕಂಪ ಆಧಾರದ ಉದ್ಯೋಗ ನೀಡುವುದರಲ್ಲಿ 54 ಅರ್ಜಿಗಳು ಇತ್ಯರ್ಥಕ್ಕೆ ಬಾಕಿ ಇದೆ. ಬಹಳಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಎರಡು ವರ್ಷದೊಳಗೆ ಅರ್ಜಿ ಸಲ್ಲಿಸಬೇಕೆಂಬ ಷರತ್ತಿನ ಬಗ್ಗೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಾರಿ ಆಯವ್ಯಯದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವನ್ನು ಬಲಪಡಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಗೃಹ ಸಚಿವರು ನನ್ನೊಂದಿಗೆ ಚರ್ಚಿಸಿದ್ದಾರೆ. ಇದನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಸಚಿವರಿಗೆ ಸೂಚಿಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ಕರೆಯಲಾಗುವುದು.

ಕಾನೂನು ಬಾಹಿರವಾಗಿ ನಡೆಯುವ ದೌರ್ಜನ್ಯಗಳನ್ನು ತಡೆಯಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಯಮಕ್ಕೆ ತಿದ್ದುಪಡಿ ಮಾಡಿ ಈ ಸಮುದಾಯಗಳ ಎಲ್ಲ ಸಚಿವರು, ಸಂಸದರು, ಶಾಸಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಈ ದೌರ್ಜನ್ಯ ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಅಧಿಕಾರಿಗಳು ತಮ್ಮ ಧೋರಣೆಯನ್ನು ಬದಲಿಸಿಕೊಂಡು ಕಾರ್ಯನಿರ್ವಹಿಸಬೇಕು. ಆರು ತಿಂಗಳಿಗೊಮ್ಮೆ ಈ ಸಭೆ ಕರೆಯುವಂತೆ ತಿಳಿಸಿದರು.

ಸಭೆಯಲ್ಲಿ‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹಾದೇವಪ್ಪ ಹಾಗೂ ಸಚಿವರಾದ ಡಾ. ಜಿ. ಪರಮೇಶ್ವರ, ಕೆ.ಹೆಚ್. ಮುನಿಯಪ್ಪ, ಪ್ರಿಯಾಂಕ್‌ ಖರ್ಗೆ, ಆರ್.ಬಿ. ತಿಮ್ಮಾಪೂರ, ಕೆ.ಎನ್. ರಾಜಣ್ಣ, ನಾಗೇಂದ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳ ಶಾಸಕರು, ಸಂಸದರು, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!