ದೊಡ್ಡಬಳ್ಳಾಪುರ: ಬಿಜೆಪಿಯವರಿಗಿಲ್ಲದ ದಮ್ಮು ತಾಕತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೋರಿಸಲಿದ್ದಾರೆ – ಮಾಜಿ ಸಿಎಂ ವೀರಪ್ಪ ಮೊಯ್ಲಿ

ದೊಡ್ಡಬಳ್ಳಾಪುರ, (ಜುಲೈ.03): ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಇಚ್ಛಾಶಕ್ತಿ ಕಾಂಗ್ರೆಸ್‍ಗೆ ಇದೆ. ಆದರೆ ಕೇಂದ್ರದ ಮೋದಿ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಈಗ ಬಡವರಿಗೆ ನೀಡಬೇಕಾದ ಅಕ್ಕಿಯನ್ನು ಕಿತ್ತುಕೊಂಡು ಎಥನಾಲ್ ತಯಾರಿಕೆಗೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್ ನಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಚುನಾವಣಾ ಪೂರ್ವ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿಗಳನ್ನು ನಿಗದಿತ ಅವಧಿಯಲ್ಲಿಯೇ ಜನರಿಗೆ ತಲುಪಿಸುತ್ತೇವೆ. ಈಗಾಗಲೇ ಎರಡು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಆದರೆ ಕೇಂದ್ರ ಸರ್ಕಾರದ ಪ್ರಧಾನಿ ಮೋದಿ ಕೇವಲ ಸುಳ್ಳುಗಳನ್ನು ಹೇಳುತ್ತಿದ್ದಾರೆ.

ವಿಶ್ವಸಂಸ್ಥೆಯಲ್ಲಿ 2030 ರ ವೇಳೆಗೆ  ಹಸಿವು ಮುಕ್ತ ದೇಶ ನಿರ್ಮಾಣ ನಿರ್ಣಯವಾಗಿದ್ದು. ಈ ನಿರ್ಣಯಕ್ಕೆ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಸಹಿ ಹಾಕಿದ್ದು, ನಮ್ಮ ದೇಶದಲ್ಲಿಯೂ ಜಾರಿ ಇದೆ. ಆದರೆ ಕೇಂದ್ರ ಸರ್ಕಾರ ಬಡವರಿಗೆ ನೀಡುವ  29.5 ಲಕ್ಷ ಟನ್ ಅಕ್ಕಿಯನ್ನು ಎಥೆನಾಲ್ ಉತ್ಪಾದನೆಗೆ ಬಳಸಲು ನೀಡಿದೆ. ಬಡವರ ಹಸಿವಿಗಿಂತ ಇವರಿಗೆ ಎಥೆನಾಲ್ ತಯಾರಿಕೆಯೇ ಮುಖ್ಯವಾಗಿದೆ.

ಇದಲ್ಲದೇ 25 ಸಾವಿರ ಟನ್ ಗೋದಾಮಿನಲ್ಲಿ ಹಾಳಾಗುತ್ತಿದೆ. 15 ಲಕ್ಷ ಟನ್ ಖಾಸಗಿಯಾಗಿ ಮಾರಾಟವಾಗುತ್ತಿದೆ. ಮೋದಿ ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ದೇಶದ ಜನಸಾಮಾನ್ಯರ ಖಾತೆಗೆ 15 ಲಕ್ಷ ರೂ  ಜಮೆ ಮಾಡುತ್ತೇವೆ ಎಂದು ಹೇಳಿ ಈವರೆಗೆ ಮಾಡಿಲ್ಲ. ಉದ್ಯೋಗ ಸೃಷ್ಟಿ ಎಂದು ಹೇಳಿ ಇದ್ದ ಕೆಲಸಗಳನ್ನು ಕೂಡ ಕಿತ್ತಿಕೊಂಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಭ್ರಷ್ಟಾಚಾರದಿಂದ ಬೇಸತ್ತ ಜನ ಬಿಜೆಪಿಯನ್ನು ಮಲಗಿಸಿದ್ದಾರೆ. ಬಡವರ ಕೈಗೆ ಹಣ ಕೊಟ್ಟರೆ ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ನಿದರ್ಶನವಾಗಿದೆ. ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳ ಲಾಭ ಹೆಚ್ಚಾಗ್ತಿದೆ. ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ಅವರಿಗೆ ಇಲ್ಲದ ನಮ್ಮ ತಾಕತ್ತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತೋರಿಸಲಿದ್ದಾರೆ ಎಂದರು.

ಬಯಲು ಸೀಮೆಗೆ ನೀರುಣಿಸುವ 13 ಸಾವಿರ ಕೋಟಿ ರೂಗಳ ಎತ್ತಿನ ಹೊಳೆ ಯೋಜನೆಗೆ  ನಮ್ಮ ಸರ್ಕಾರವಿದ್ದಾಗ ಆದ್ಯತೆ ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಇನ್ನೂ ಬಾಕಿ ಇದ್ದ 3 ಸಾವಿರ ಕೋಟಿ ರೂ ಹಣ ಸಹ ಬಿಡುಗಡೆ ಮಾಡಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಶುದ್ದೀಕರಿಸಿದ ನೀರು ಹರಿಸುವ ಎಚ್.ಎನ್  ವ್ಯಾಲಿ, ಕೆ.ಸಿ ವ್ಯಾಲಿ, ವೃಷಭಾವತಿ  ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಒತ್ತು ನೀಡಿತ್ತು. ಈ ಯೋಜನೆಗಳನ್ನು ಮುಂದುವರೆಸಲು ಬಜೆಟ್‍ನಲ್ಲಿ ಅಗತ್ಯ ಅನುದಾನವನ್ನು ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಈ ವೇಳೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರೇವತಿ, ಮುಖಂಡರಾದ ಸಿ.ಡಿ.ಸತ್ಯನಾರಾಯಣಗೌಡ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!